AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಅನಾಮಿಕ ವ್ಯಕ್ತಿಯೋರ್ವ ಸದನದೊಳಗೆ ಪ್ರವೇಶಿಸಿ ಶಾಸಕರ ಆಸನದಲ್ಲಿ ಕುಳಿತುಕೊಂಡಿದ್ದಾನೆ.

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ
ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿರುವುದು
ಪ್ರಸನ್ನ ಗಾಂವ್ಕರ್​
| Edited By: |

Updated on:Jul 07, 2023 | 4:19 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು( ಜುಲೈ 07) ಬಜೆಟ್ (Karnataka Budget 2023) ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿದ್ದಾನೆ. ಅಲ್ಲದೇ ಬಜೆಟ್​ ಮಂಡನೆ ವೇಳೆ ಸಮಾರು 15 ನಿಮಿಷಗಳ ಜಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಕೂಡಲೇ  ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದ ಅಂತೆಲ್ಲ ಪ್ರಶ್ನೆಗಳು ಉದ್ಭವಿಸಿವೆ. ಹಾಗೇ ಆತಂಕಕ್ಕೂ ಕಾರಣವಾಗಿದೆ.

ಅನಾಮಿಕ ವ್ಯಕ್ತಿಯನ್ನು ಪತ್ತೆ ಮಾಡಿದ ಪೊಲೀಸರು

ಸದನದೊಳಗೆ ಸುಮಾರು 15ರಿಂದ 20 ನಿಮಷಗಳ ಕಾಲ ಕುಳಿತು ಬಳಿಕ ದಿಢೀರ್ ನಾಪತ್ತೆಯಾಗಿದ್ದ ಅನಾಮಿಕ ವ್ಯಕ್ತಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆ ಅನಾಮಿಕ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಮಡಿದ್ದಾರೆ. ಅನಾಮಿಕ ವ್ಯಕ್ತಿಯ ಹೆಸರು ತಿಪ್ಪೇರುದ್ರ (72) ಎಂದು ಗುರುತಿಸಲಾಗಿದೆ.

ತಿಪ್ಪೇರುದ್ರ ಸದನದೊಳಗೆ ಪ್ರವೇಶಿಸುವ ವೇಳೆ ಮಾರ್ಷಲ್​ಗಳು ವಿಚಾರಿಸಿದ್ದರು. ಆ ಸಂದರ್ಭದಲ್ಲಿ ತಿಪ್ಪೇರುದ್ರ, ಶಾಸಕ  ಎನ್​ವೈ ಗೋಪಾಲಕೃಷ್ಣ ಹೆಸರು ಹೇಳಿದ್ದಲ್ಲೇ ಮಾರ್ಷಲ್​ಗೆ ಅವಾಜ್​ ಹಾಕಿ ಸದನದೊಳಗೆ ಪ್ರವೇಶಿಸಿದ್ದ. ಜೊತೆಗೆ ಒಂದು ಬ್ಯಾಗ್​ ತಂದಿದ್ದ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಇನ್ನು ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಪ್ಪೇರುದ್ರನನ್ನು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೊಳಪಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:55 pm, Fri, 7 July 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್