AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಅನಾಮಿಕ ವ್ಯಕ್ತಿಯೋರ್ವ ಸದನದೊಳಗೆ ಪ್ರವೇಶಿಸಿ ಶಾಸಕರ ಆಸನದಲ್ಲಿ ಕುಳಿತುಕೊಂಡಿದ್ದಾನೆ.

ವಿಧಾನಸಭೆಯಲ್ಲಿ ಭದ್ರತಾ ಲೋಪ: ಬಜೆಟ್ ಮಂಡನೆ ವೇಳೆ ಸದನದಲ್ಲಿ ಬಂದು ಕುಳಿತ ಅನಾಮಿಕ ವ್ಯಕ್ತಿ
ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿರುವುದು
ಪ್ರಸನ್ನ ಗಾಂವ್ಕರ್​
| Edited By: |

Updated on:Jul 07, 2023 | 4:19 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು( ಜುಲೈ 07) ಬಜೆಟ್ (Karnataka Budget 2023) ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಶಾಸಕರಲ್ಲದ ವ್ಯಕ್ತಿಯೋರ್ವ ವಿಧಾನಸಭೆ ಪ್ರವೇಶಿಸಿದ್ದಾನೆ. ಅಲ್ಲದೇ ಬಜೆಟ್​ ಮಂಡನೆ ವೇಳೆ ಸಮಾರು 15 ನಿಮಿಷಗಳ ಜಾಲ ದೇವದುರ್ಗ ಶಾಸಕಿ ಕರೆಯಮ್ಮ ಆಸನದಲ್ಲಿ ಕುಳಿತಿದ್ದಾನೆ. ಇದನ್ನು ಗಮನಿಸಿದ ಜೆಡಿಎಸ್​ ಶಾಸಕ ಶರಣಗೌಡ ಕಂದಕೂರು ಅವರಿಗೆ ವ್ಯಕ್ತಿ ಬಗ್ಗೆ ಅನುಮಾನ ಬಂದಿದೆ. ಕೂಡಲೇ  ಅವರು ಎದ್ದು ಹೋಗಿ ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದಿದ್ದಾರೆ. ಆದ್ರೆ, ಅಷ್ಟರೊಳಗೆ ಆ ಅನಾಮಿಕ ವ್ಯಕ್ತಿ ಅಲ್ಲಿಂದ ನಾಪತ್ತೆಯಾಗಿದ್ದಾನೆ. ಇದರಿಂದ ಆ ವ್ಯಕ್ತಿ ಯಾರು? ಏಕೆ ಬಂದಿದ್ದ? ಇಷ್ಟೊಂದು ಭದ್ರತೆ ನಡುವೆಯೂ ಆ ವ್ಯಕ್ತಿ ಹೇಗೆ ಸದನದೊಳಗೆ ಪ್ರವೇಶಿಸಿದ್ದ ಅಂತೆಲ್ಲ ಪ್ರಶ್ನೆಗಳು ಉದ್ಭವಿಸಿವೆ. ಹಾಗೇ ಆತಂಕಕ್ಕೂ ಕಾರಣವಾಗಿದೆ.

ಅನಾಮಿಕ ವ್ಯಕ್ತಿಯನ್ನು ಪತ್ತೆ ಮಾಡಿದ ಪೊಲೀಸರು

ಸದನದೊಳಗೆ ಸುಮಾರು 15ರಿಂದ 20 ನಿಮಷಗಳ ಕಾಲ ಕುಳಿತು ಬಳಿಕ ದಿಢೀರ್ ನಾಪತ್ತೆಯಾಗಿದ್ದ ಅನಾಮಿಕ ವ್ಯಕ್ತಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆ ಅನಾಮಿಕ ವ್ಯಕ್ತಿಯನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಮಡಿದ್ದಾರೆ. ಅನಾಮಿಕ ವ್ಯಕ್ತಿಯ ಹೆಸರು ತಿಪ್ಪೇರುದ್ರ (72) ಎಂದು ಗುರುತಿಸಲಾಗಿದೆ.

ತಿಪ್ಪೇರುದ್ರ ಸದನದೊಳಗೆ ಪ್ರವೇಶಿಸುವ ವೇಳೆ ಮಾರ್ಷಲ್​ಗಳು ವಿಚಾರಿಸಿದ್ದರು. ಆ ಸಂದರ್ಭದಲ್ಲಿ ತಿಪ್ಪೇರುದ್ರ, ಶಾಸಕ  ಎನ್​ವೈ ಗೋಪಾಲಕೃಷ್ಣ ಹೆಸರು ಹೇಳಿದ್ದಲ್ಲೇ ಮಾರ್ಷಲ್​ಗೆ ಅವಾಜ್​ ಹಾಕಿ ಸದನದೊಳಗೆ ಪ್ರವೇಶಿಸಿದ್ದ. ಜೊತೆಗೆ ಒಂದು ಬ್ಯಾಗ್​ ತಂದಿದ್ದ ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಇನ್ನು ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ತಿಪ್ಪೇರುದ್ರನನ್ನು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ತೀವ್ರ ವಿಚಾರಣೆಗೊಳಪಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:55 pm, Fri, 7 July 23

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ