AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಬಜೆಟ್​​ ಮಂಡನೆ ವೇಳೆ ಭದ್ರತಾ ಲೋಪ: ತಾನು ಶಾಸಕನೆಂದು ಹೇಳಿಕೊಂಡು ಸದನ ಪ್ರವೇಶಿಸಿದ ಅಪರಿಚ ವ್ಯಕ್ತಿ

2023-24ನೇ ಸಾಲಿನ ಬಜೆಟ್​​ ಮಂಡನೆ ವೇಳೆ ಭದ್ರತಾ ಲೋಪವಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಸದನದ ಒಳಗೆ ಆಗಮಿಸಿ ಶಾಸಕರ ಸ್ಥಾನದಲ್ಲಿ ಕುಳಿತಿರುವ ಪ್ರಸಂಗ ನಡೆಯಿತು. ಈ ಸಂಬಂಧ ಆರೋಪಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

Karnataka Budget 2023: ಬಜೆಟ್​​ ಮಂಡನೆ ವೇಳೆ ಭದ್ರತಾ ಲೋಪ: ತಾನು ಶಾಸಕನೆಂದು ಹೇಳಿಕೊಂಡು ಸದನ ಪ್ರವೇಶಿಸಿದ ಅಪರಿಚ ವ್ಯಕ್ತಿ
ಕರ್ನಾಟಕ ಬಜೆಟ್​​ ಮಂಡನೆ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: Jul 07, 2023 | 6:38 PM

ಬೆಂಗಳೂರು: 2023-24ನೇ ಸಾಲಿನ ಬಜೆಟ್​​ ಮಂಡನೆ (Karnataka Budegt 2023) ವೇಳೆ ಭದ್ರತಾ ಲೋಪವಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಸದನದ ಒಳಗೆ ಆಗಮಿಸಿ ಶಾಸಕರ ಸ್ಥಾನದಲ್ಲಿ ಕುಳಿತಿರುವ ಪ್ರಸಂಗ ನಡೆಯಿತು. ಈ ಸಂಬಂಧ ಆರೋಪಿ ವಿರುದ್ಧ ವಿಧಾನಸೌಧ (Vidhana Soudha) ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಾನು ತೀಪ್ಪೆರುದ್ರ (76) ಚಿತ್ರದುರ್ಗ ನಗರ ನಿವಾಸಿಯಾಗಿದ್ದು ವೃತ್ತಿಯಲ್ಲಿ ವಕೀಲ ಎಂದು ಹೇಳಿದ್ದಾನೆ. ಅಲ್ಲದೇ ಸದನದ ಒಳಗೆ ಶಾಸಕ ಎನ್.ವೈ.ಗೋಪಾಲಕೃಷ್ಣ ಹೆಸರು ಹೇಳಿಕೊಂಡು ಮಾರ್ಷಲ್​​ಗಳಿಗೆ ಧಮ್ಕಿಹಾಕಿ ಒಳಗಡೆ ಹೋದೆ ಎಂದು ಹೇಳಿದ್ದಾನೆ.

ಪ್ರಾಥಮಿಕವಾದ ಮಾಹಿತಿ ಪಡೆದಿದ್ದೇವೆ. ಬಜೆಟ್ ಸೆಷನ್ ಹಿನ್ನಲೆ ಬಂದಿದ್ದಾಗಿ ಹೇಳಿದ್ದಾರೆ. ಸದನ ವೀಕ್ಷಣೆ ಪಾಸ್ ಪಡೆದಿದ್ದರು. ಮಾರ್ಷಲ್​ಗಳು ಯಾರಿಗೂ ಪ್ರವೇಶ ಕೊಡಲ್ಲ. ಆದರೆ ಎಮ್​​ಎಲ್ಎ ಪದ ಬಳಸಿ ಹೋಗಿದ್ದಾನೆ. ಸದನದಲ್ಲಿ ದೇವದುರ್ಗ ಶಾಸಕಿ ಕರಿಯಮ್ಮ ಆಸನದಲ್ಲಿ 15-20 ನಿಮಿಷ ಕೂತಿದ್ದಾಗಿ  ಎಂದು ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ

ವಿಧಾನಸೌಧದಲ್ಲಿ ಇದೇ ಮೊದಲ ಬಾರಿಗೆ ಭದ್ರತಾ ವೈಫಲ್ಯವಾಗಿದೆ. ಕೂಡಲೇ ಸಂಪೂರ್ಣ ರಿಪೋರ್ಟ್ ಕೊಡುವಂತೆ ಸೂಚನೆ ನೀಡಿದ್ದೇನೆ ಎಂದು ಘಟನೆ ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

ಬಜೆಟ್ ಮಂಡನೆ ವೇಳೆ ಅಪರಿಚಿತ ವ್ಯಕ್ತಿ ಸದನಕ್ಕೆ ಬಂದಿದ್ದನು. ಖಾಸಗಿ ವ್ಯಕ್ತಿ ಬಂದು ಸದನಕ್ಕೆ ಬಂದು ಆಸನದಲ್ಲಿ ಕುಳಿತಿದ್ದರು. ನನ್ನ ಪಕ್ಕದಲ್ಲಿದ್ದ ಶಾಸಕ ಜಿ.ಟಿ.ದೇವೇಗೌಡ ಬಳಿ ಕೇಳಿದೆ. ಆ ವ್ಯಕ್ತಿ ಯಾರೋ ಗೊತ್ತಿಲ್ಲ ಅಂತಾ ಜಿ.ಟಿ.ದೇವೇಗೌಡ ಅಂದರು. ಅಪರಿಚಿತ ವ್ಯಕ್ತಿ ಮೊಳಕಾಲ್ಮೂರು ಎಂಎಲ್‌ಎ ಅಂತ ಹೇಳಿದರು. ಸುಮಾರು ಹದಿನೈದು ನಿಮಿಷ ಕಾಲ ಸದನದಲ್ಲಿ ಕುಳಿತಿದ್ದನು. ತಕ್ಷಣ ಸ್ಪೀಕರ್ ಗಮನಕ್ಕೆ ತಂದಿದ್ದೇನೆ ಎಂದು ವಿಧಾನಸೌಧದಲ್ಲಿ ಶಾಸಕ ಶರಣಗೌಡ ಕಂದಕೂರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ