AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಭದ್ರತಾ ಲೋಪ: ಸಂಸದ ಪ್ರತಾಪ್​​​ ಸಿಂಹ ಮೊದಲ ಟ್ವೀಟ್ ಹೀಗಿದೆ

ಲೋಕಸಭೆ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಕಂಡುಬಂದಿದೆ. ಅವರಲ್ಲಿ ಇಬ್ಬರೂ ಮೈಸೂರಿನವರು ಎಂದು ತಿಳಿದುಬಂದಿದೆ. ಜೊತೆಗೆ ಮೈಸೂರು ಸಂಸದ ಪ್ರತಾಪ್​​​ ಸಿಂಹ ಪಿಎ ಈ ಇಬ್ಬರಿಗೆ ಎಂಟ್ರಿ ಪಾಸ್​​ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಇದರ ಬೆನ್ನಲೇ ಪ್ರತಾಪ್​​​ ಸಿಂಹ ಟ್ವೀಟ್ ಮಾಡಿದ್ದು, ಸೋಮವಾರ ವಿದ್ಯಾವರ್ಧಕ ಕಾಲೇಜಿನ ರಾಜ್ಯಶಾಸ್ತ್ರ ವಿದ್ಯಾರ್ಥಿಗಳೊಂದಿಗೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭೆಯಲ್ಲಿ ಭದ್ರತಾ ಲೋಪ: ಸಂಸದ ಪ್ರತಾಪ್​​​ ಸಿಂಹ ಮೊದಲ ಟ್ವೀಟ್ ಹೀಗಿದೆ
ವಿದ್ಯಾರ್ಥಿಗಳೊಂದಿಗೆ ಸಂಸದ ಪ್ರತಾಪ್​​​ ಸಿಂಹ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 13, 2023 | 8:08 PM

ಬೆಂಗಳೂರು, ಡಿಸೆಂಬರ್​​ 13: ಲೋಕಸಭೆ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಕಂಡುಬಂದಿದೆ. ಸಂಸತ್ ಭವನಕ್ಕೆ ಐವರು ಆರೋಪಿಗಳು ಬಂದಿದ್ದ ಬಗ್ಗೆ ಮಾಹಿತಿ ಇದೆ. ಅವರಲ್ಲಿ ಇಬ್ಬರೂ ಮೈಸೂರಿನವರು ಎಂದು ತಿಳಿದುಬಂದಿದೆ. ಜೊತೆಗೆ ಮೈಸೂರು ಸಂಸದ ಪ್ರತಾಪ್​​​ ಸಿಂಹ ಪಿಎ ಈ ಇಬ್ಬರಿಗೆ ಎಂಟ್ರಿ ಪಾಸ್​​ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಸಂಸದ ಪ್ರತಾಪ್​​​ ಸಿಂಹ (Pratap Simha) ಅವರನ್ನು ಸಹ ವಿಚಾರಣೆಗೆ ಒಳಪಡಿಸಿ ಎಂದು ರಾಜ್ಯ ನಾಯಕರು ಹೇಳಿದ್ದು, ಮತ್ತೊಂದೆಡೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಸದ್ಯ ಇದರ ಬೆನ್ನೆಲೆ ಸಂಸದ ಪ್ರತಾಪ್​​​ ಸಿಂಹ ಟ್ವೀಟ್​ ಮಾಡಿದ್ದಾರೆ.

ಲೋಕಸಭೆ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಇದರಲ್ಲಿ ಸಂಸದ ಪ್ರತಾಪ್​​​ ಸಿಂಹ ಹೆಸರು ಕೂಡ ಕೇಳಿಬಂದಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲವೆಂಬಂತೆ ವಿದ್ಯಾರ್ಥಿಗಳೊಂದಿಗಿನ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ‘ಸೋಮವಾರ ವಿದ್ಯಾವರ್ಧಕ ಕಾಲೇಜಿನ ರಾಜ್ಯಶಾಸ್ತ್ರ ವಿದ್ಯಾರ್ಥಿಗಳೊಂದಿಗೆ’ ಎಂದು ಬರೆದುಕೊಂಡಿದ್ದಾರೆ. ಮೈಸೂರಿನ ಇಬ್ಬರಿಗೆ ಎಂಟ್ರಿ ಪಾಸ್​ ಬಗ್ಗೆ ಸಂಸದ ಪ್ರತಾಪ್​​​ ಸಿಂಹ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಂಸದ ಪ್ರತಾಪ್​​​ ಸಿಂಹ ಟ್ವೀಟ್

ಲೋಕಸಭೆಯಲ್ಲಿ ಭದ್ರತಾ ವೈಫಲ್ಯ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಇಬ್ಬರು ಯುವಕರು ಲೋಕಸಭೆಗೆ ನುಗ್ಗಿರೋದು ಆತಂಕ ಸೃಷ್ಟಿಸಿತ್ತು. ಹೀಗೆ ಲೋಕಸಭೆಯಲ್ಲಿ ಆತಂಕ ಸೃಷ್ಟಿಸಿದ್ದವರ ಪೈಕಿ ಒಬ್ಬ ಸಾಗರ್​ ಶರ್ಮಾ ಆಗಿದ್ದರೆ, ಮತ್ತೋರ್ವ ಮೈಸೂರು ಮೂಲದ ವಿದ್ಯಾರ್ಥಿ ಮನೋರಂಜನ್ ಅಂತ ಹೇಳಲಾಗುತ್ತಿದೆ. ಸಂಸದ ಪ್ರತಾಪ್ ಸಿಂಹ ಪಿಎ ಮೂಲಕ ಈ ಇಬ್ಬರು ಲೋಕಸಭೆಯ ಪ್ರೇಕ್ಷಕರ ಗ್ಯಾಲರಿಗೆ ಎಂಟ್ರಿ ಕೊಟ್ಟಿದ್ದರು ಅನ್ನೋ ಮಾಹಿತಿ ಕೂಡ ಇದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಭದ್ರತಾಲೋಪ: ಕಲಾಪದೊಳಗೆ ನುಗ್ಗಿದ್ದವರ ಗುರುತು ಪತ್ತೆ, ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್

ಲೋಕಸಭೆಗೆ ನುಗ್ಗಿದ ಸಾಗರ್​ ಶರ್ಮಾ, ಮನೋರಂಜನ್​ ತಾವು ಧರಿಸಿದ್ದ ಶೂನಲ್ಲಿ ಕಲರ್​ ಸ್ಪ್ರೇ ಇಟ್ಕೊಂಡು ಹೋಗಿದ್ರಂತೆ. ಪಕ್ಕಾ ಪ್ಲ್ಯಾನ್​ ಮಾಡಿಕೊಂಡು ಒಮ್ಮೆಲೆ ಸ್ಪೋಕ್​ ಎಸೆದಿದ್ದಾರೆ. ಕಲರ್​ ಸ್ಮೋಕ್​ ಎಲ್ಲೆಡೆ ಹರಡುತ್ತಿದ್ದಂತೆ ಕೆಲ ಸಂಸದರು ಎದ್ನೋ ಬಿದ್ನೋ ಅಂತ ಓಡಿ ಹೋದ್ರೆ, ರಾಹುಲ್​ ಗಾಂಧಿ, ಮುನಿಸ್ವಾಮಿ ಸೇರಿ ಹಲವು ಸಂಸದರು ಆತಂಕದಲ್ಲೇ ನಿಂತಿದ್ದು ಕಂಡುಬಂದಿತ್ತು. ಕೂಡಲೇ ಕಲರ್​ ಸ್ಪ್ರೇ ಹಾಕಿದ್ದವರನ್ನ ಸಂಸದರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಇಬ್ಬರನ್ನ ದೆಹಲಿ ಪೊಲೀಸರು ಬಂಧಿಸಿದ್ದು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ದೆಹಲಿ ಕ್ರೈಂ ಬ್ರಾಂಚ್​ನಿಂದ ಪ್ರಕರಣದ ತನಿಖೆ ಮಾಡಲಾಗ್ತಿದ್ದು, ಮಹಾರಾಷ್ಟ್ರ ಹಾಗೂ ಹರಿಯಾಣ ಪೊಲೀಸರನ್ನ ಸಂಪರ್ಕಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:55 pm, Wed, 13 December 23

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!