AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ದುಪ್ಪಟ್ಟು ದರಕ್ಕೆ ಮೆಣಸಿನಕಾಯಿ ಬೀಜ ವ್ಯಾಪಾರ; ರೈತರು ಕಂಗಾಲು

ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಭತ್ತ ಬೆಳೆದಂತೆ ಮೆಣಸಿನಕಾಯಿ ಬೆಳೆ ಕೂಡ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಸುಮಾರು 1.5 ರಿಂದ 2 ಲಕ್ಷ ಎಕರೆಯವರೆಗೆ ಮೆಣಸಿನಕಾಯಿಯನ್ನು ಬೆಳೆಯಲಾಗುತ್ತಿದೆ. ಈ ವರ್ಷ ಮೆಣಸಿನಕಾಯಿ ನಾಟಿ ಮಾಡಲು ರೈತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು

ಬಳ್ಳಾರಿ: ದುಪ್ಪಟ್ಟು ದರಕ್ಕೆ ಮೆಣಸಿನಕಾಯಿ ಬೀಜ ವ್ಯಾಪಾರ; ರೈತರು ಕಂಗಾಲು
ಮೆಣಸಿನಕಾಯಿ ಬೀಜ
TV9 Web
| Edited By: sandhya thejappa|

Updated on:Jun 03, 2021 | 11:33 AM

Share

ಬಳ್ಳಾರಿ: ರಾಜ್ಯದಲ್ಲಿ ಮುಂಗಾರು ಆರಂಭಗೊಳ್ಳುತ್ತಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆ ಕೂಡ ಆರಂಭವಾಗಿದೆ. ಹೀಗಾಗಿ ರೈತರು ಬಿತ್ತನೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದ್ದಾರೆ. ಆದರೆ ಬಿತ್ತನೆಗೆ ಬೇಕಾದ ಬೀಜಗಳ ಖರೀದಿಗೆ ಮುಂದಾಗಿರುವ ರೈತರು ಇದೀಗ ಕಂಗಾಲಾಗಿದ್ದಾರೆ. ಬೀಜ ವ್ಯಾಪಾರಸ್ಥರು ಲಾಕ್​ಡೌನ್​ ನೆಪವೊಡ್ಡಿ ದುಪ್ಪಟ್ಟು ದರಕ್ಕೆ ಬೀಜಗಳ ಮಾರಾಟ ಮಾಡುತ್ತಿದ್ದಾರೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಬಳ್ಳಾರಿ ಜಿಲ್ಲೆಯ ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಭತ್ತ ಬೆಳೆದಂತೆ ಮೆಣಸಿನಕಾಯಿ ಬೆಳೆ ಕೂಡ ಹೆಚ್ಚಾಗಿ ಬೆಳೆಯಲಾಗುತ್ತಿದೆ. ಸುಮಾರು 1.5 ರಿಂದ 2 ಲಕ್ಷ ಎಕರೆಯವರೆಗೆ ಮೆಣಸಿನಕಾಯಿಯನ್ನು ಬೆಳೆಯಲಾಗುತ್ತಿದೆ. ಈ ವರ್ಷ ಮೆಣಸಿನಕಾಯಿ ನಾಟಿ ಮಾಡಲು ರೈತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಮೊದಲು ಮೆಣಸಿನಕಾಯಿ ಸಸಿಗಳನ್ನು ಬೆಳೆಸಬೇಕು. ಇದಕ್ಕಾಗಿ ರೈತರು ಮೆಣಸಿನಕಾಯಿ ಬೀಜಗಳನ್ನು ಖರೀದಿ ಮಾಡಬೇಕು. ಆದರೆ ಈ ಲಾಕ್​ಡೌನ್​ ಹಿನ್ನೆಲೆಯಲ್ಲಿ ಬೀಜ ವ್ಯಾಪಾರಿಗಳು ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದಾರೆ.

ಲಾಕ್​ಡೌನ್​ ನೆಪವೊಡ್ಡಿ ಮೆಣಸಿನಕಾಯಿ ಬೀಜದ ಅಭಾವ ಸೃಷ್ಟಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. 5531 ಮೆಣಸಿನಕಾಯಿ ಬೀಜ ಪ್ರತಿ ಕೆಜಿಗೆ 60 ಸಾವಿರ ಇತ್ತು. ಆದರೆ 1 ಲಕ್ಷಕ್ಕೆ ಒಂದು ಕೆಜಿ ಬೀಜ ಮಾರಾಟ ಮಾಡುತ್ತಿದ್ದಾರೆ. ಸೀಜಂತ ಸೀಡ್ಸ್ ಮೆಣಸಿನಕಾಯಿ ಬೀಜ ಕೂಡ ಪ್ರತಿ ಎಕರೆಗೆ 80 ಸಾವಿರ ಇತ್ತು. ಈಗ ಇದನ್ನು 1.3 ಲಕ್ಷಕ್ಕೆ ಮಾರಾಟ ಮಾಡುತ್ತಿದ್ದಾರೆ. ದುಪ್ಪಟ್ಟು ದರ ರೈತರನ್ನು ಕಂಗಾಲು ಆಗುವಂತೆ ಮಾಡಿದೆ.

ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ, ಮತ್ತೊಂದೆಡೆ ರೈತರು ಕೃಷಿ ಚಟುವಟಿಕೆ ಆರಂಭಿಸಲು ಪ್ರಕ್ರಿಯೆ ಆರಂಭಿಸಿದ್ದಾರೆ. ಮೆಣಸಿನಕಾಯಿ ಬೀಜಕ್ಕಾಗಿ ರೈತರು ಸೀಡ್ಸ್ ಶಾಪ್​ಗಳ ಮುಂದೆ ಮುಗಿಬಿದ್ದಿದ್ದು, ದುಪ್ಪಟ್ಟು ದರ ಮಾಡಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ಮೆಣಸಿನಕಾಯಿ ಬೀಜವನ್ನು ಅನಿವಾರ್ಯವಾಗಿ ಖರೀದಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕೇವಲ ಮೆಣಸಿನಕಾಯಿ ಬೀಜಕ್ಕೆ ಮಾತ್ರವಲ್ಲ. ಉಳಿದ ಬೀಜಗಳನ್ನು ಕೂಡ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ರೈತರಿಗೆ ಇಷ್ಟೆಲ್ಲಾ ತೊಂದರೆ ಆಗುತ್ತಿದ್ದರೂ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಪ್ರತಿ ವರ್ಷ ನಷ್ಟ ಅನುಭವಿಸುತ್ತಿರುವ ರೈತರಿಗೆ ಮೆಣಸಿನಕಾಯಿ ಬೀಜ ಕೂಡ ದುಪ್ಪಟ್ಟು ದರಕ್ಕೆ ಮಾರಾಟವಾಗುತ್ತಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಇದನ್ನೂ ಓದಿ

ಆನಂದಯ್ಯ ನಾಟಿ ಔಷಧ ತಯಾರಿಕೆ ಇಂದಿನಿಂದ‌ ಮತ್ತೆ ಆರಂಭ; ಆನ್​ಲೈನ್​ ಮೂಲಕವೂ ಔಷಧ ವಿತರಣೆ

ಲಾಕ್​ಡೌನ್​ ನಿಯಮ ಉಲ್ಲಂಘನೆ; ದಿಶಾ ಪಟಾನಿ, ಟೈಗರ್​ ಶ್ರಾಫ್​ ವಿರುದ್ಧ ಎಫ್​ಐಆರ್​ ದಾಖಲು

(Seeds Businessmen are selling chilli seed at higher rates in bellary)

Published On - 11:27 am, Thu, 3 June 21

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ