AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!

ರಾಮನಗರ: ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದ ಆಶ್ರಮದಿಂದ ಯುವತಿಯೊಬ್ಬಳ ನಿಗೂಢ ನಾಪತ್ತೆಯ ಬೆನ್ನಲ್ಲೇ ಈಗ ನಿತ್ಯಾನಂದ ಸ್ವಾಮೀಜಿ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವು ತಿಂಗಳಿಂದ ನಿತ್ಯಾನಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದೂವರೆ ವರ್ಷದಿಂದ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಕಡೆಯೂ ಆತ ಮುಖ ಮಾಡಿಲ್ಲವಂತೆ. ದೇಶ ಬಿಟ್ಟು ಪರಾರಿಯಾದ್ರಾ ನಿತ್ಯಾನಂದ? ಬಿಡದಿಯ ಆಶ್ರಮದ ಸಿಬ್ಬಂದಿ, ನಿತ್ಯಾನಂದ ಸ್ವಾಮೀಜಿ ಗುಜರಾತ್ ಆಶ್ರಮದಲ್ಲಿದ್ದಾರೆ, ಉತ್ತರ ಭಾರತ ಪ್ರವಾಸದಲ್ಲಿದ್ದಾರೆ ಅನ್ನುತ್ತಿದ್ದಾರೆ. ಆದರೆ ನಿತ್ಯಾನಂದ ಅಲ್ಲೆಲ್ಲೂ ಇಲ್ಲ. ಆತ್ಯಾಚಾರ […]

ನಿತ್ಯಾನಂದ ಕಾಣಿಸ್ತಿಲ್ಲ.. ಬಿಡದಿ ಪೀಠಕ್ಕೆ ಕಾಲಿಟ್ಟು ವರ್ಷವಾಗಿದೆ!
ಸಾಧು ಶ್ರೀನಾಥ್​
|

Updated on:Nov 21, 2019 | 3:58 PM

Share

ರಾಮನಗರ: ಗುಜರಾತ್​ನ ಅಹಮದಾಬಾದ್ ಬಳಿ ಇರೋ ನಿತ್ಯಾನಂದ ಆಶ್ರಮದಿಂದ ಯುವತಿಯೊಬ್ಬಳ ನಿಗೂಢ ನಾಪತ್ತೆಯ ಬೆನ್ನಲ್ಲೇ ಈಗ ನಿತ್ಯಾನಂದ ಸ್ವಾಮೀಜಿ ಕೂಡ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವು ತಿಂಗಳಿಂದ ನಿತ್ಯಾನಂದ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದೂವರೆ ವರ್ಷದಿಂದ ಬಿಡದಿಯ ನಿತ್ಯಾನಂದ ಧ್ಯಾನಪೀಠದ ಕಡೆಯೂ ಆತ ಮುಖ ಮಾಡಿಲ್ಲವಂತೆ.

ದೇಶ ಬಿಟ್ಟು ಪರಾರಿಯಾದ್ರಾ ನಿತ್ಯಾನಂದ? ಬಿಡದಿಯ ಆಶ್ರಮದ ಸಿಬ್ಬಂದಿ, ನಿತ್ಯಾನಂದ ಸ್ವಾಮೀಜಿ ಗುಜರಾತ್ ಆಶ್ರಮದಲ್ಲಿದ್ದಾರೆ, ಉತ್ತರ ಭಾರತ ಪ್ರವಾಸದಲ್ಲಿದ್ದಾರೆ ಅನ್ನುತ್ತಿದ್ದಾರೆ. ಆದರೆ ನಿತ್ಯಾನಂದ ಅಲ್ಲೆಲ್ಲೂ ಇಲ್ಲ. ಆತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಆರೋಪಗಳನ್ನು ಎದುರಿಸುತ್ತಿರುವ ನಿತ್ಯಾನಂದವ 6 ತಿಂಗಳಿನಿಂದ ನಿರಂತರವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ. ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಡಿಸೆಂಬರ್ 9 ರಂದು ನಿತ್ಯಾನಂದರ ವಿಚಾರಣೆ ನಡೆಯಲಿದ್ದು, ಇದುವರೆಗೂ ನಿತ್ಯಾನಂದನ ಸುಳಿವೇ ಇಲ್ಲ.

ಓರಿಜಿನಲ್ ಪಾಸ್ ಪೋರ್ಟ್ ಬ್ಲಾಕ್ ಇನ್ನು, ನಿತ್ಯಾನಂದನ ಓರಿಜಿನಲ್ ಪಾಸ್ ಪೋರ್ಟ್ ಬ್ಲಾಕ್ ಆಗಿದ್ದು, ನಕಲಿ ಪಾರ್ಸ್ ಪೋರ್ಟ್ ಮೂಲಕ ದ್ವೀಪರಾಷ್ಟ್ರಕ್ಕೆ ಹೋಗಿದ್ದಾರಾ ಎಂಬ ಶಂಕೆಯೂ ವ್ಯಕ್ತವಾಗಿದೆ. ಆಸ್ಟ್ರೇಲಿಯಾ ಸಮೀಪದ ದ್ವೀಪವೊಂದರಲ್ಲಿ ತಂಗಿದ್ದಾನೆ ಎಂಬ ಮಾಹಿತಿಯೂ ಇದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸಣ್ಣಪುಟ್ಟ ಕಾರಣ ಕೊಟ್ಟು ವಿಚಾರಣೆ ಮುಂದಕ್ಕೆ ತಳ್ಳುತ್ತಿದ್ದಾರೆನೋ ಎಂಬ ಅನುಮಾನವೂ ಮೂಡಿದೆ.

Published On - 3:56 pm, Thu, 21 November 19

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ