AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ರಾಜ್ಯೋತ್ಸವದಂದು ನಮ್ಮ ಸೊಗಡಿನ ಮೂಲಕ ಸಂದೇಶ ಕಳುಹಿಸಿ, ಶುಭ ಕೋರಿ!

ಕರ್ನಾಟಕ ಏಕೀಕರಣಕ್ಕೆ ಹೋರಾಡಿದ, ಕನ್ನಡದ ಉಳಿವಿಗಾಗಿ, ಶ್ರೇಯೋಭಿವೃದ್ಧಿಗಾಗಿ, ಬೆಳವಣಿಗೆಗಾಗಿ ಶ್ರಮಿಸಿದ ಹಲವು ಹಿರಿಜೀವಗಳನ್ನು ಪ್ರತಿ ದಿನವೂ ನೆನೆಸಿಕೊಳ್ಳಬೇಕು. ‘ನವೆಂಬರ್‌ ಕನ್ನಡಿಗರು’ ನಾವು ಮತ್ತು ನಮ್ಮ ಮುಂದಿನ ಪೀಳಿಗೆ ಆಗಬಾರದು ಎಂದರೆ ಇಂದಿನಿಂದಲೇ ನಮ್ಮ ಮಕ್ಕಳಿಗೆ ಕನ್ನಡದ ಕಂಪಿನ ಬಗೆಗೆ ಅರಿವು ಮೂಡಿಸಬೇಕಾಗಿದೆ.

ಕನ್ನಡ ರಾಜ್ಯೋತ್ಸವದಂದು ನಮ್ಮ ಸೊಗಡಿನ ಮೂಲಕ ಸಂದೇಶ ಕಳುಹಿಸಿ, ಶುಭ ಕೋರಿ!
ಕನ್ನಡ ರಾಜ್ಯೋತ್ಸವ
Follow us
ಪ್ರೀತಿ ಭಟ್​, ಗುಣವಂತೆ
| Updated By: ಆಯೇಷಾ ಬಾನು

Updated on: Nov 01, 2023 | 8:29 AM

ಕನ್ನಡ ನಮ್ಮ ಅಮ್ಮ, ಆಕೆ ನಮ್ಮ ಉಸಿರು, ಈ ಮಾತು ಕೇವಲ ಒಂದು ದಿನದ ಮಾತಾಗಬಾರದು. ಕರ್ನಾಟಕ ಏಕೀಕರಣಕ್ಕೆ ಹೋರಾಡಿದ, ಕನ್ನಡದ ಉಳಿವಿಗಾಗಿ, ಶ್ರೇಯೋಭಿವೃದ್ಧಿಗಾಗಿ, ಬೆಳವಣಿಗೆಗಾಗಿ ಶ್ರಮಿಸಿದ ಹಲವು ಹಿರಿಜೀವಗಳನ್ನು ಪ್ರತಿ ದಿನವೂ ನೆನೆಸಿಕೊಳ್ಳಬೇಕು. ‘ನವೆಂಬರ್‌ ಕನ್ನಡಿಗರು’ ನಾವು ಮತ್ತು ನಮ್ಮ ಮುಂದಿನ ಪೀಳಿಗೆ ಆಗಬಾರದು ಎಂದರೆ ಇಂದಿನಿಂದಲೇ ನಮ್ಮ ಮಕ್ಕಳಿಗೆ ಕನ್ನಡದ ಕಂಪಿನ ಬಗೆಗೆ ಅರಿವು ಮೂಡಿಸಬೇಕಾಗಿದೆ. ನಮ್ಮ ಪೂರ್ವಜರು ಮತ್ತು ಕವಿಗಣ್ಯರು ಹೇಳಿದ ನಾಣ್ನುಡಿಗಳನ್ನು ಬಳಸುವ ಮೂಲಕವೇ ಸಂದೇಶ ಕಳುಹಿಸುವುದರಿಂದ ನಮ್ಮ ಕನ್ನಡದ ಕಂಪು ಮನೆ ಮನೆಗೂ ಎಲ್ಲರ ಮನಸ್ಸಿಗೂ ತಲುಪುವಂತಾಗುತ್ತದೆ. ಹಾಗಾದರೆ ಇನ್ನೇಕೆ ತಡ ಈ ಕೆಳಗಿನ ನುಡಿಮುತ್ತು ಮತ್ತು ಕೆಲವು ಅರ್ಥ ಗರ್ಭಿತ ಮಾತುಗಳನ್ನು ಕನ್ನಡ ಪ್ರೇಮಿಗಳಿಗೆ ಕಳುಹಿಸಿ.

  • ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು -ಹುಯಿಲಗೋಳ ನಾರಾಯಣ ರಾವ್.
  • ಹೊತ್ತಿತೋ ಹೊತ್ತಿತು ಕನ್ನಡದ ದೀಪ ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ,ಹೊತ್ತಿತೋ ಹೊತ್ತಿತು ಕನ್ನಡದ ದೀಪ ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ -ಮಾಸ್ತಿ ವೆಂಕಟೇಶ ಅಯ್ಯಂಗಾರ್‌
  • ಮಾತೃಭಾಷೆ ಮಕ್ಕಳಿಗೆ ನೀಡುವ ಪ್ರತಿಭಾ ವಿಲಾಸವನ್ನು ನಾವು ಅರಿತುಕೊಂಡಿಲ್ಲ. ನಮ್ಮ ಶಿಕ್ಷಣದಲ್ಲಿ ಪರೀಕ್ಷೆಗೆ ಸಿಗುವ ಪ್ರಾಮುಖ್ಯತೆ ಕಲಿಕೆಗೆ ಸಿಗುತ್ತಿಲ್ಲ – ಚಂದ್ರಶೇಖರ ಕಂಬಾರ
  • ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೇ ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೇ – ಎಂ ಗೋವಿಂದ ಪೈ
  • ಕನ್ನಡ ಉಳಿಸಿ, ಕನ್ನಡ ಬೆಳಸಿ, ಕನ್ನಡವನ್ನೇ ಬಳಸಿ – ಪು.ತಿ.ನರಸಿಂಹಾಚಾರ್
  • ಸಿರಿಗನ್ನಡಂ ಗೆಲ್ಗೆ, ಹಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಗೆಲ್ಗೆ
  • ಕನ್ನಡ ಗೋವಿನ ಓ ಮುದ್ದಿನ ಕರು, ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು
  • ಕನ್ನಡವೆ ಧನ ಧಾನ್ಯ ಕನ್ನಡವೆ ಮನೆ ಮಾನ್ಯ ಕನ್ನಡವೆಯೆನಗಾಯ್ತು ಕಣ್ಣು ಕಿವಿ ಬಾಯಿ – ಬೆನಗಲ್ ರಾಮರಾವ್
  • ನಾವು ಇತರರ ಭಾಷೆ ಕಲಿಯುವ ಆಸಕ್ತಿಯನ್ನು, ಕನ್ನಡವನ್ನು ಇತರರಿಗೆ ಕಲಿಸುವಲ್ಲಿಯೂ ತೋರೋಣ, ಜೈ ಕನ್ನಡಾಂಬೆ
  • ಎಲ್ಲಾದರು ಇರು, ಎಂತಾದರು ಇರು
    ಎಂದೆಂದಿಗು ನೀ ಕನ್ನಡವಾಗಿರು
    ಕನ್ನಡ ಗೋವಿನ ಓ ಮುದ್ದಿನ ಕರು,
    ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!
    ಇದನ್ನು ವಾಟ್ಸಪ್, ಫೇಸ್‌ಬುಕ್ ಸಂದೇಶಗಳ ಮಾದರಿಯಲ್ಲಿ ನಿಮ್ಮ ಸ್ನೇಹಿತರು, ಬಂಧುಬಾಂಧವರ ಜೊತೆ ಹಂಚಿಕೊಳ್ಳಬಹುದು.
    

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್