AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ಕ್ರೈಂ ವರದಿಗಾರ ಸುನಿಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ

ರವಿ ಬೆಳಗೆರೆ ಜೊತೆಗೆ ವೈಮನಸ್ಸು ಉಂಟಾಗಿ ಹಾಯ್ ಬೆಂಗಳೂರು ಪತ್ರಿಕೆಯಿಂದ ಹೊರಬರುವಂತಾಗಿತ್ತು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು.ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿದ್ದರು.

ಹಿರಿಯ ಕ್ರೈಂ ವರದಿಗಾರ ಸುನಿಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ನಿಧನ
ಸುನಿಲ್ ಹೆಗ್ಗರವಳ್ಳಿ
TV9 Web
| Edited By: |

Updated on:Jul 12, 2021 | 7:09 PM

Share

ಚಿಕ್ಕಮಗಳೂರು: ಕ್ರೈಂ ವರದಿಗಾರಿಕೆಯಲ್ಲಿ ಬಹಳ ಹೆಸರು ಸಂಪಾದಿಸಿದ್ದ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹೃದಯಾಘಾತದಿಂದ ಇಂದು (ಜುಲೈ 12) ನಿಧನ ಹೊಂದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿಯವರಾದ ಸುನಿಲ್ ಅವರಿಗೆ 43 ವರ್ಷ ವಯಸ್ಸಾಗಿತ್ತು. ಜಿಲ್ಲೆಯ ಗೋಣಿಬೀಡು ಆಸ್ಪತ್ರೆಯಲ್ಲಿ ಅವರು ಹೃದಯಾಘಾತದಿಂದ ನಿಧನ ಕೊನೆಯುಸಿರೆಳೆದಿದ್ದಾರೆ.

ರವಿ ಬೆಳಗೆರೆ ಶಿಷ್ಯನಾಗಿದ್ದ ಸುನೀಲ್ ಹೆಗ್ಗರವಳ್ಳಿ. ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಹಾಯ್ ಬೆಂಗಳೂರು ಪತ್ರಿಕೆ ಮೂಲಕವೇ ತಮ್ಮ ವೃತ್ತಿಜೀವನವನ್ನು ಅವರು ಆರಂಭಿಸಿದ್ದರು. ಆದರೆ, ಇತ್ತೀಚಿಗಿನ ಕೆಲ ವರ್ಷಗಳ ಹಿಂದೆ ರವಿ ಬೆಳಗೆರೆ ಮತ್ತು ಸುನೀಲ್ ಹೆಗ್ಗರವಳ್ಳಿ ನಡುವೆ ವೈಮನಸ್ಸು ಉಂಟಾಗಿತ್ತು. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರಾಗಿ ಅವರು ಮಾಡಿದ ಸಾಕಷ್ಟು ವರದಿಗಳು ದೊಡ್ಡ ಸಂಚಲನವನ್ನೇ ಮೂಡಿಸಿದ್ದವು. ರವಿ ಬೆಳಗೆರೆಯವರ ಅತ್ಯಾಪ್ತನಾಗಿದ್ದುಕೊಂಡು ನಂತರ ಅನಾರೋಗ್ಯದ ಸನ್ನಿವೇಶದಲ್ಲಿ ಕೂಡ ಪತ್ರಿಕೆಯನ್ನು ಸಂಪಾದಕನಾಗಿ ಮುನ್ನಡೆಸಿದ್ದರು.

ಆದರೆ, ರವಿ ಬೆಳಗೆರೆ ಜೊತೆಗೆ ವೈಮನಸ್ಸು ಉಂಟಾಗಿ ಹಾಯ್ ಬೆಂಗಳೂರು ಪತ್ರಿಕೆಯಿಂದ ಹೊರಬರುವಂತಾಗಿತ್ತು. ನಂತರ ಚಾರ್ಲಿ ಟೈಮ್ಸ್ ಕ್ರೈಮ್ ಪೇಪರ್ ಶುರುಮಾಡಿದ್ದರು.ಯೂ ಟ್ಯೂಬ್ ಚಾನೆಲ್ ಕೂಡ ಆರಂಭಿಸಿದ್ದರು.

ಇದನ್ನೂ ಓದಿ: ಕ್ಲಿನಿಕಲ್​ ಡಿಪ್ರೆಶನ್​ಗೆ ಒಳಗಾಗಿದ್ದ ಜಯಶ್ರೀ ಸಂಬಂಧಗಳ ಬಗ್ಗೆ ತುಂಬ ಭಯ ಬೆಳೆಸಿಕೊಂಡಿದ್ದರು: ಭಾವನಾ ಬೆಳಗೆರೆ

ಪತ್ರಿಕೆಯ ಬಣ್ಣ ಕಪ್ಪು.. ಬರಹ ಕಲರ್​ಫುಲ್​! ಲಂಕೇಶರಂತೆ, ಆದರೆ ಅದಕ್ಕಿಂತ ಭಿನ್ನವಾಗಿ ಹೊಸಪೀಳಿಗೆಗೆ ತಲುಪಿದವರು ಬೆಳಗೆರೆ!

Published On - 7:03 pm, Mon, 12 July 21

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ