AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಧಿಕಾರ ಸ್ವೀಕಾರ

ಹಿರಿಯ ಐಎಎಸ್​ ಅಧಿಕಾರಿ ಪಿ. ರವಿಕುಮಾರ್ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಹೊಸ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅಧಿಕಾರ ಸ್ವೀಕಾರ
ನಿವೃತ್ತ ಮುಖ್ಯಕಾರ್ಯದರ್ಶಿ ತ.ಮ.ವಿಜಯಭಾಸ್ಕರ (ಎಡ) ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಡಾ. ಭಾಸ್ಕರ ಹೆಗಡೆ
| Edited By: |

Updated on:Dec 31, 2020 | 6:09 PM

Share

ಬೆಂಗಳೂರು: ಹಿರಿಯ ಐಎಎಸ್​ ಅಧಿಕಾರಿ ಪಿ. ರವಿಕುಮಾರ್ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯ ಕಾರ್ಯದರ್ಶಿಯವರ ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಮುಖ್ಯ ಕಾರ್ಯದರ್ಶಿ, ತ.ಮ. ವಿಜಯ ಭಾಸ್ಕರ ಅವರು ಹೊಸದಾಗಿ ನಿಯುಕ್ತಿಗೊಂಡ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಪತ್ರ ನೀಡಿ ಸ್ವಾಗತಿಸಿದರು.

ನಿರ್ಗಮಿಸುತ್ತಿರುವ ಮುಖ್ಯ ಕಾರ್ಯದರ್ಶಿ ತ.ಮ. ವಿಜಯ ಭಾಸ್ಕರ ಅವರಿಗೆ ಹಿರಿಯ ಐಎಎಸ್​ ಅಧಿಕಾರಿಗಳು ಮಧ್ಯಾಹ್ನ ಸನ್ಮಾನ ಮಾಡಿದರು.

1984ರ ಬ್ಯಾಚ್​ನ ಕರ್ನಾಟಕ ಕೇಡರ್​ನ ಐಎಎಸ್​ ಅಧಿಕಾರಿ, ಪಿ. ರವಿಕುಮಾರ್ ಒಂದುವರೆ ವರ್ಷದ ಅಧಿಕಾರಾವಧಿಯನ್ನು ಹೊಂದಿದ್ದಾರೆ. ರವಿಕುಮಾರ್ ಅವರ ಕಾರ್ಯ ವೈಖರಿ ಭಿನ್ನವಾದುದು. ಅವರು ಕೆಲಸವನ್ನು ಸ್ಮಾರ್ಟ್​ ಆಗಿ ಮಾಡಲು, ಮಾಡಿಸಲು ಪ್ರಯತ್ನಿಸುತ್ತಾರೆ ಎಂಬ ಮಾತು ಅಧಿಕಾರಿಗಳ ವಲಯದಲ್ಲಿ ಜನಜನಿತ.

ದೊಡ್ಡ ಮೂಲಭೂತ ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆ ಹೆಚ್ಚು. ಪಾವಗಡದ ಸೌರಶಕ್ತಿ ವಿದ್ಯುತ್ ಸ್ಥಾವರ ಯೋಜನೆಯನ್ನು ಸಂಪೂರ್ಣ ಜಾರಿಗೊಳಿಸಿದ್ದು ಅವರು ಇಂಧನ ಕಾರ್ಯದರ್ಶಿ ಆಗಿದ್ದಾಗ. ಆದ್ದರಿಂದ ಯೋಜನೆ ಅನುಷ್ಠಾನ ಮತ್ತು ಹೊಸ ಯೋಜನೆ ಪರಿಕಲ್ಪನೆ ಮಾಡಿ ಅದನ್ನು ಜಾರಿಗೊಳಿಸಲು ತಮ್ಮ ತಂಡವನ್ನು ತೊಡಗಿಸುವಲ್ಲಿ ಅವರದು ಮೇಲುಗೈ ಅಂತ ಅವರ ಜೊತೆ ಕೆಲಸ ಮಾಡುವ ಅಧಿಕಾರಿಗಳು ಹೇಳುತ್ತಾರೆ.

ನೂತನ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರನ್ನು ಶಿಕ್ಷಣ ಸಚಿವ ಎಸ್.ಸುರೇಶ್​ಕುಮಾರ್ ಅಭಿನಂದಿಸಿದರು.

ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್​ಗೆ ಆತ್ಮೀಯ ಬೀಳ್ಕೊಡುಗೆ

Published On - 6:05 pm, Thu, 31 December 20

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು