AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS officer Pratap Reddy: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜಿನಾಮೆ ​

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು.

IPS officer Pratap Reddy: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್​ ರೆಡ್ಡಿ ರಾಜಿನಾಮೆ ​
ಐಪಿಎಸ್​ ಅಧಿಕಾರಿ ಪ್ರತಾಪ್​ ರೆಡ್ಡಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 09, 2024 | 11:43 AM

Share

ಬೆಂಗಳೂರು, ಫೆಬ್ರವರಿ 09: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ (IPS officer Pratap Reddy) ಅವರು ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ (Government) ಪತ್ರ ಬರೆದಿದ್ದಾರೆ. ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್​ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇದೇ ವರ್ಷ ಮೇ ತಿಂಗಳು ನಿವೃತ್ತಿಯಾಗುತ್ತಿದ್ದರು. ಆದರೆ ಅವರು ವೈಯಕ್ತಿಕ ಕಾರಣವನ್ನು ನೀಡಿ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ. ಇದು ರಾಜ್ಯ ಪೊಲೀಸ್​ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 30ಕ್ಕೆ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಹಿರಿಯ ಐಪಿಎಸ್​ ಅಧಿಕಾರಿ ಸಿ. ಹೆಚ್​ ಪ್ರತಾಪ್​ ರೆಡ್ಡಿ ಅವರು ಜು. 01 1964ರಲ್ಲಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಸಿದರು. ಪ್ರತಾಪ್​ ರೆಡ್ಡಿ ಬಿ.ಟೆಕ್​ ಪದವೀಧರರು. ಇವರು 1991ರಲ್ಲಿ ಕರ್ನಾಟಕ ಕೆಡರ್​ನ ಐಪಿಎಸ್​ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿದರು. ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್​ ಆಗಿ ಪ್ರತಾಪ್​ ರೆಡ್ಡಿ ಅವರು ಕೆಲಸ ಆರಂಭಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಭೇದಿಸಿದ್ದಾರೆ.

ಇದನ್ನೂ ಓದಿ: IPS Transferred: ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ 

ಪ್ರತಾಪ್​ ರೆಡ್ಡಿ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಮುಂಬೈ ಮತ್ತು ಬೆಂಗಳೂರು ವಿಭಾಗದಲ್ಲಿ ಕೆಲಸ ಮಾಡಿದ್ದಾರೆ. ಬ್ಯಾಂಕಿಂಗ್​ ಮತ್ತು ಸೈಬರ್​ ಸೆಕ್ಯುರಿಟಿ ವಿಭಾಗದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿದ್ದ ಪ್ರತಾಪ್​ ರೆಡ್ಡಿ ಅವರನ್ನು ಕಮಲ್​ ಪಂತ ಅವರ ಬಳಿಕ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾಗಿ ನೇಮಕ ಮಾಡಲಾಗಿತ್ತು.

ರಾಜ್ಯದ ಕೂಲ್​ ಐಪಿಎಸ್​ ಅಧಿಕಾರಿಗಳಲ್ಲಿ ಪ್ರತಾಪ್​ ರೆಡ್ಡಿ ಅವರು ಸಹ ಒಬ್ಬರು. ಪ್ರತಾಪ್​ ರೆಡ್ಡಿ ಅವರು ರಾಷ್ಟ್ರಪತಿ ಪದಕ ಮತ್ತು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?