AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ: ಮಹಿಳೆಯನ್ನು ನೇಮಿಸಿದ್ದು ಇದೇ ಮೊದಲು

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಈವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ಇದೀಗ ಸಿದ್ದರಾಮಯ್ಯ ಸರ್ಕಾರ ನೀಗಿಸಿದಂತಾಗಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ: ಮಹಿಳೆಯನ್ನು ನೇಮಿಸಿದ್ದು ಇದೇ ಮೊದಲು
ಹಿರಿಯ ಪತ್ರಕರ್ತೆ ಆಯೇಷಾ ಖಾನಂ
Follow us
ರಮೇಶ್ ಬಿ. ಜವಳಗೇರಾ
|

Updated on:Jul 10, 2024 | 7:19 PM

ಬೆಂಗಳೂರು, (ಜುಲೈ 10): ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ವಿಶೇಷವಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ದಿ ಏಷಿಯನ್​ ಏಜ್​, ಸ್ಟಾರ್​ ನ್ಯೂಸ್​, ಆಜ್​ ತಕ್​, ದೂರದರ್ಶನದಲ್ಲಿ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ.

ಈ ಬಾರಿ ಯಾರನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು. ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಸಿಎಂ ಸಿದ್ದರಾಮಯ್ಯ, ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Wed, 10 July 24

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ