AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ: ಮಹಿಳೆಯನ್ನು ನೇಮಿಸಿದ್ದು ಇದೇ ಮೊದಲು

ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಈವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ಇದೀಗ ಸಿದ್ದರಾಮಯ್ಯ ಸರ್ಕಾರ ನೀಗಿಸಿದಂತಾಗಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಆಯೇಷಾ ಖಾನಂ ನೇಮಕ: ಮಹಿಳೆಯನ್ನು ನೇಮಿಸಿದ್ದು ಇದೇ ಮೊದಲು
ಹಿರಿಯ ಪತ್ರಕರ್ತೆ ಆಯೇಷಾ ಖಾನಂ
ರಮೇಶ್ ಬಿ. ಜವಳಗೇರಾ
|

Updated on:Jul 10, 2024 | 7:19 PM

Share

ಬೆಂಗಳೂರು, (ಜುಲೈ 10): ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ವಿಶೇಷವಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

ಹಿರಿಯ ಪತ್ರಕರ್ತೆ ಆಯೇಷಾ ಖಾನಂ ದಿ ಏಷಿಯನ್​ ಏಜ್​, ಸ್ಟಾರ್​ ನ್ಯೂಸ್​, ಆಜ್​ ತಕ್​, ದೂರದರ್ಶನದಲ್ಲಿ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ.

ಈ ಬಾರಿ ಯಾರನ್ನು ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು. ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಸಿಎಂ ಸಿದ್ದರಾಮಯ್ಯ, ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Wed, 10 July 24

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು