AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯ ಭಾರತ್ ಬಂದ್​ಗೆ ವಾಟಾಳ್ ನಾಗರಾಜ್ ಬೆಂಬಲ; ಮೆಜೆಸ್ಟಿಕ್​ನಲ್ಲಿ ವಿನೂತನ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರೈತರ ಬೇಡಿಕೆಗಳನ್ನ ಈಡೇರಿಸುತ್ತಿಲ್ಲ: ವಾಟಾಳ್ ನಾಗರಾಜ್.

ನಾಳೆಯ ಭಾರತ್ ಬಂದ್​ಗೆ ವಾಟಾಳ್ ನಾಗರಾಜ್ ಬೆಂಬಲ; ಮೆಜೆಸ್ಟಿಕ್​ನಲ್ಲಿ ವಿನೂತನ ಪ್ರತಿಭಟನೆ
ಕನ್ನಡ ಪರ ಹಿರಿಯ ಹೋರಾಟಗಾರ ವಾಟಾಳ್​ ನಾಗರಾಜ್ ​
guruganesh bhat
|

Updated on: Mar 25, 2021 | 2:07 PM

Share

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಖಂಡಿಸಿ ನಾಳೆ ಕರೆ ನೀಡಲಾಗಿರುವ ಭಾರತ್ ಬಂದ್​ಗೆ ಹಿರಿಯ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲ ಘೋಷಿಸಿದ್ದಾರೆ. ನಾಳೆ (ಮಾರ್ಚ್ 26) ಮೆಜೆಸ್ಟಿಕ್​ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ 11.30 ಕ್ಕೆ ವಿನೂತನ ಪ್ರತಿಭಟನೆ ಮೂಲಕ ಭಾರತ್ ಬಂದ್​ಗೆ ಬೆಂಬಲ ನೀಡುವುದಾಗಿ ಮೈಸೂರಿನಲ್ಲಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನ ವಿರೋಧಿ ದೆಹಲಿಯಲ್ಲಿ ರೈತರು ಸಾಕಷ್ಟು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರನ್ನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರೈತರ ಬೇಡಿಕೆಗಳನ್ನ ಈಡೇರಿಸುತ್ತಿಲ್ಲ. ಆದ್ದರಿಂದ ರೈತ ಸಮುದಾಯ ಭಾರತ್ ಬಂದ್​ಗೆ ಕರೆ ಕೊಟ್ಟಿದೆ. ನಾವು ಭಾರತ್ ಬಂದ್​ಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ. ಈ ಮೂಲಕ ಯಾವಾಗಲೂ ರೈತರ ಪರವಾಗಿ ಇರುತ್ತೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಭಾರತ್ ಬಂದ್​ಗೆ ಕರೆ ಕೊಟ್ಟವರಾರು? ಕಳೆದ ನಾಲ್ಕು ತಿಂಗಳಿನಿಂದ ದೆಹಲಿಯ ಗಡಿಭಾಗದಲ್ಲಿ ರೈತರು ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ರೈತರಿಗೆ ಬೆಂಬಲ ನೀಡಲು ನಾಳೆ (ಮಾರ್ಚ್ 26) ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾ ( SKM) ಕರೆ ನೀಡಿದೆ. ಪಿಟಿಐ ಸುದ್ದಿಸಂಸ್ಥೆಯ ವರದಿ ಪ್ರಕಾರ ಮಾರ್ಚ್ 26ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲ ಸೇವೆಗಳನ್ನು ಬಂದ್ ಮಾಡಲು ಎಸ್​ಕೆಎಂ ಕರೆ ನೀಡಿದೆ. ಈ ಅವಧಿಯಲ್ಲಿ ದೇಶದಾದ್ಯಂತ ಎಲ್ಲ ಸಾರಿಗೆ, ರೈಲು, ಮಾರುಕಟ್ಟೆ ಮತ್ತು ಸಾರ್ವಜನಿಕ ಸ್ಥಳಗಳು ಬಂದ್ ಆಗಿರಲಿವೆ. ಅನ್ನದಾತರಿಗೆ ಗೌರವ ಸೂಚಿಸಲು ಭಾರತ್ ಬಂದ್​ನ್ನು ಯಶಸ್ವಿ ಮಾಡಬೇಕು ಎಂದು ನಾನು ದೇಶದ ನಾಗರಿಕರಲ್ಲಿ ವಿನಂತಿಸುತ್ತೇನೆ ಎಂದು ರೈತ ನಾಯಕ ದರ್ಶನ್ ಪಾಲ್ ಹೇಳಿದ್ದಾರೆ.

ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಶಾಂತಿಯುತ ರೀತಿಯಲ್ಲಿ ಬಂದ್ ಆಚರಿಸಿ ಎಂದು ಸಚಿವರು ರೈತರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.ಬಂದ್​ಗೆ ಬೆಂಬಲ ಘೋಷಿಸಿ ನಾಳೆ ಎಲ್ಲ ಸರ್ಕಾರಿ ಕಚೇರಿಗಳು ಮಧ್ಯಾಹ್ನ 1ಗಂಟೆಗೆ ತೆರೆಯಲಿದ್ದು, ಮಧ್ಯಾಹ್ನ ನಂತರ ಆರ್ ಟಿಸಿ ಬಸ್ ಗಳು ರಸ್ತೆಗಿಳಿಯಲಿವೆ. ಎಲ್ಲ ತುರ್ತು ಆರೋಗ್ಯ ಸೇವೆಗಳು ಎಂದಿನಂತೆ ಇರಲಿವೆ ಎಂದು ಸಚಿವರು ಹೇಳಿದ್ದಾರೆ.

ಅಂಗಡಿ ಬಂದ್ ಮಾಡುವ ವಿಚಾರ ವೈಯಕ್ತಿಕ

ರೈತ ಸಂಘಟನೆಗಳು ಕರೆ ನೀಡಿರುವ ಬಂದ್​ಗೆ ಬೆಂಬಲ ಘೋಷಿಸಿ ಗಾಜಿಯಾಬಾದ್​ನಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವ ಅಥವಾ ಮುಚ್ಚುವ ನಿರ್ಧಾರ ವೈಯಕ್ತಿಕವಾಗಿದೆ. ಭಾರತ್ ಬಂದ್ ಬಗ್ಗೆ ಮಹಾನಗರ್ ವ್ಯಾಪಾರ ಮಂಡಳಿ ತಟಸ್ಥ ನಿಲುವು ಸ್ವೀಕರಿಸಿದೆ ಎಂದು ಮಂಡಳಿಯ ಪ್ರಧಾನ ಕಾರ್ಯದರ್ಶಿ ಅಶೋಕ್ ಚಾವ್ಲಾ ಹೇಳಿದ್ದಾರೆ. ಯಾರೊಬ್ಬರೂ ಅಂಗಡಿಗಳನ್ನು ತೆರೆಯಲು ಅಥವಾ ಮುಚ್ಚಲು ಬಲವಂತ ಮಾಡುವಂತಿಲ್ಲ. ಈ ನಿರ್ಧಾರ ಅಂಗಡಿ ಮಾಲೀಕರಿಗೆ ಬಿಟ್ಟಿದ್ದು ಎಂದು ಚಾವ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಆರ್​ಎಸ್ಎಸ್​ನ್ನು ಸಂಘ ಪರಿವಾರ್ ಎಂದು ಹೇಳಬಾರದು, ಅವರಿಗೆ ಕುಟುಂಬದ ಮೌಲ್ಯಗಳು ಗೊತ್ತಿಲ್ಲ: ರಾಹುಲ್ ಗಾಂಧಿ

Bharat Bandh Tomorrow: ನಾಳೆ ಭಾರತ್ ಬಂದ್, ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ನಾಲ್ಕು ತಿಂಗಳು

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!