ಪ್ರತ್ಯೇಕ ಘಟನೆ: ಬೆಳಗಾವಿಯಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸಾವು, ತುಮಕೂರಿನಲ್ಲಿ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತ

8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವಂತಹ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್​ನಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ಹೊರವಲಯದ ಜಡೆಗೊಂಡನಹಳ್ಳಿ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಪ್ರತ್ಯೇಕ ಘಟನೆ: ಬೆಳಗಾವಿಯಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸಾವು, ತುಮಕೂರಿನಲ್ಲಿ ಬೈಕ್ ಡಿಕ್ಕಿಯಾಗಿ ಇಬ್ಬರು ಮೃತ
ಪ್ರತ್ಯೇಕ ಘಟನೆ: ಬೆಳಗಾವಿಯಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸಾವು, ತುಮಕೂರಿನಲ್ಲಿ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 15, 2024 | 9:05 PM

ಚಿಕ್ಕೋಡಿ, ಸೆಪ್ಟೆಂಬರ್​ 15: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್​ನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಸ್ಥವನಿಧಿ ಘಾಟ್ ಬಳಿ‌ 8 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ, ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 6 ಜನರಿಗೆ ಗಾಯಗಳಾಗಿವೆ.

ಸದ್ಯ ಗಾಯಗೊಂಡಿರುವ 6 ಜನರಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಕಂಟೇನರ್ ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ. ನಿಪ್ಪಾಣಿ ಶಹರ​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

2 ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ವ್ಯಕ್ತಿಗಳು ಸಾವು

ತುಮಕೂರು: ಜಿಲ್ಲೆಯ ಮಧುಗಿರಿ ಹೊರವಲಯದ ಜಡೆಗೊಂಡನಹಳ್ಳಿ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ವ್ಯಕ್ತಿಗಳ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ತೆರಿಯೂರಿನ ಗೌತಮ್(26) ಮತ್ತು ಬಂದರಹಳ್ಳಿಯ ಅನಿಲ್(26) ಮೃತರು. ಸ್ಥಳಕ್ಕೆ ಮಧುಗಿರಿ ಠಾಣೆ ಪಿಎಸ್​ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಡಿವೈಡರ್​ಗೆ ಕಾರು ಡಿಕ್ಕಿ: ಏಳು ವರ್ಷದ ಬಾಲಕಿ ಸಾವು

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಡಿವೈಡರ್​ಗೆ ಹುಂಡೈ ಕಾರು ಡಿಕ್ಕಿ ಹೊಡೆದ ಪರಿಣಾಮ ಏಳು ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಶಾಲಿನಿ ಮೃತ ಬಾಲಕಿ. ಬಸವೇಶ್(16) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ:  ತುಮಕೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದುರ್ಘಟನೆ: ತಂದೆ, ಮಗ ಸೇರಿ ಮೂವರು ಸಾವು

ಸಣ್ಣಪುಟ್ಟ ಗಾಯಗೊಂಡಿರುವ ಮಲ್ಲಿಕಾರ್ಜುನ್​ಗೂ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲೆಯ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮನೆಗೆ ನುಗ್ಗಿ ಕುಟುಂಬಸ್ಥರನ್ನ ಬೆದರಿಸಿ ದರೋಡೆ 

ರಾಯಚೂರು: ಮೂವರು ದುಷ್ಕರ್ಮಿಗಳಿಂದ ಮನೆಗೆ ನುಗ್ಗಿ ಕುಟುಂಬಸ್ಥರನ್ನ ಬೆದರಿಸಿ ದರೋಡೆ ಮಾಡಿರುವಂತಹ ಘಟನೆ ನಗರದ ಲಕ್ಷ್ಮೀ ನರಸಿಂಹ ಕಾಲೋನಿಯಲ್ಲಿ ನಡೆದಿದೆ. ಬಸನಗೌಡ ಪಾಟೀಲ್ ಎಂಬುವರಿಗೆ ಸೇರಿದ ‌ಮನೆಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಒನ್ ಡೇ ಟ್ರಿಪ್ ಮಾಡಿ ಕ್ಯಾಬ್ ಚಾಲಕನ ಬಳಿಯೇ ದರೋಡೆ: ಕಾರು ಸಮೇತ ಪರಾರಿಯಾಗಿದ್ದ ಆಸಾಮಿ ಅಂದರ್

ಮನೆಯಲ್ಲಿದ್ದವರಿಗೆ ಬೆದರಿಕೆ ಹಾಕಿ ಚಿನ್ನ, ಬೆಳ್ಳಿ ಆಭರಣ ಕಳ್ಳತನ ಮಾಡಲಾಗಿದೆ. ಒಂದು ಲಕ್ಷ ನಗದು, ಸುಮಾರು 180 ಗ್ರಾಂ ಚಿನ್ನಾಭರಣ, ಅರ್ಧ ಕೆಜಿಯಷ್ಟು ಬೆಳ್ಳಿ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ರಾಯಚೂರು ಎಸ್​ಪಿ ಪುಟ್ಟಮಾದಯ್ಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:05 pm, Sun, 15 September 24