AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ. 15 ಡೆಡ್​​ಲೈನ್: ಕೇವಲ 52 ಲಕ್ಷ ವಾಹನಗಳಿಗಷ್ಟೇ ಅಳವಡಿಕೆ

ಮೂರು ಬಾರಿಯ ಗಡುವು ವಿಸ್ತರಣೆಯ ನಂತರ ಕೊನೆಗೂ ಇದೀಗ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಕೊನೆಯ ಡೆಡ್​​ಲೈನ್ ಸೆಪ್ಟೆಂಬರ್ 15ರಂದು ಕೊನೆಗೊಳ್ಳಲಿದೆ. ನಿಯಮದ ಪ್ರಕಾರ, ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 16ರಿಂದ 500 ರೂ. ದಂಡ ವಿಧಿಸಲಾಗುತ್ತದೆ. ಆದರೆ, ಸೆಪ್ಟೆಂಬರ್ 18ರ ವರೆಗೆ ಬಲವಂತದ ಕ್ರಮ ಇಲ್ಲ ಎಂದಿದ್ದಾರೆ ಕರ್ನಾಟಕ ಸಾರಿಗೆ ಆಯುಕ್ತ ಯೋಗೇಶ್! ಕಾರಣ ಇಲ್ಲಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸೆ. 15 ಡೆಡ್​​ಲೈನ್: ಕೇವಲ 52 ಲಕ್ಷ ವಾಹನಗಳಿಗಷ್ಟೇ ಅಳವಡಿಕೆ
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Sep 14, 2024 | 3:02 PM

Share

ಬೆಂಗಳೂರು, ಸೆಪ್ಟೆಂಬರ್ 14: ಕರ್ನಾಟಕದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಕೊನೆಯ ದಿನ ಸೆಪ್ಟೆಂಬರ್ 15 ಆಗಿದ್ದು, ಈವರೆಗೆ ಕೇವಲ 52 ಲಕ್ಷ ವಾಹನಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಲಾಗಿದ್ದು, ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ಸೆಪ್ಟೆಂಬರ್ 15ರ ನಂತರ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಹೇಳಿದೆ.

ಆದಾಗ್ಯೂ, ಸೆಪ್ಟೆಂಬರ್ 18 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಬರಲಿದೆ. ಹೀಗಾಗಿ ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕರ್ನಾಟಕ ಸಾರಿಗೆ ಆಯುಕ್ತ ಯೋಗೇಶ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಗಡುವನ್ನು ಮತ್ತೊಮ್ಮೆ ವಿಸ್ತರಿಸುವ ಅಥವಾ ವಾಹನ ಚಾಲಕರಿಗೆ ದಂಡ ವಿಧಿಸುವ ನಿರ್ಧಾರವನ್ನು ಸೆಪ್ಟೆಂಬರ್ 18ರ ನಂತರವೇ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಒಟ್ಟಿನಲ್ಲಿ, ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಣೆ ಬಗ್ಗೆ ಸೆಪ್ಟೆಂಬರ್ 18 ಹೈಕೋರ್ಟ್ ವಿಚಾರಣೆಯ ನಂತರವೇ ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಶೇ 26ರಷ್ಟು ವಾಹನಗಳಿಗೆ ಮಾತ್ರ ಅಳವಡಿಕೆ

ಸಾರಿಗೆ ಇಲಾಖೆ ಅಂಕಿಅಂಶ ಪ್ರಕಾರ, ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ 26ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ವಾಹನ ಮಾಲೀಕರ ನೀರಸ ಪ್ರತಿಕ್ರಿಯೆಯಿಂದಾಗಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ಈ ಹಿಂದೆ ಹಲವಾರು ಬಾರಿ ವಿಸ್ತರಿಸಲಾಗಿತ್ತು.

ಎಚ್‌ಎಸ್‌ಆರ್‌ಪಿ ಅಳವಡಿಸದವರಿಗೆ ದಂಡ ಎಷ್ಟು?

ಗಡುವು ಮುಕ್ತಾಯದ ನಂತರವೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುವ ವಾಹನ ಮಾಲೀಕರು 500 ರೂ. ದಂಡ ಪಾವತಿಸಬೇಕಾಗುತ್ತದೆ. ಸೆಪ್ಟೆಂಬರ್ 16 ರಿಂದ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕರ್ನಾಟಕದಾದ್ಯಂತ, ವಿಶೇಷವಾಗಿ ಹೆಚ್ಚಿನ ಪ್ರಮಾಣದ ವಾಹನಗಳಿರುವ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಯಲಿದೆ ಎಂದು ಎಂದು ಹೆಚ್ಚುವರಿ ಸಾರಿಗೆ ಆಯುಕ್ತ (ಜಾರಿ ದಕ್ಷಿಣ) ಮಲ್ಲಿಕಾರ್ಜುನ ಸಿ ಇತ್ತೀಚೆಗಷ್ಟೇ ಹೇಳಿದ್ದರು. ಆದಾಗ್ಯೂ, ಸೆಪ್ಟೆಂಬರ್ 18ರ ವರೆಗೆ ವಾಹನ ಮಾಲೀಕರು ತುಸು ನಿರಾಳವಾಗಿರಬಹುದಾಗಿದೆ.

ಇದನ್ನೂ ಓದಿ: ರೈತರ ಕಾರಣ ಹೇಳಿ ನಂದಿನಿ ಹಾಲಿನ ದರ ಹೆಚ್ಚಿಸುತ್ತಿದ್ದಾರೆ, ಅವರಿಗೆ ಕೊಡುವುದು ಅನುಮಾನ: ಪ್ರಲ್ಹಾದ್ ಜೋಶಿ

ಸಾರಿಗೆ ಇಲಾಖೆಯು 2019ರ ಏಪ್ರಿಲ್ 1 ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್​​ನಲ್ಲಿ ಹೊರಡಿಸಿತ್ತು. ಆರಂಭದಲ್ಲಿ 2023 ರ ನವೆಂಬರ್ 17 ರ ಗಡುವನ್ನು ನಿಗದಿಪಡಿಸಲಾಗಿತ್ತು. ಆದಾಗ್ಯೂ, ನಿಧಾನಗತಿಯ ಅಳವಡಿಕೆಯ ಕಾರಣ ಗಡುವನ್ನು ಮೂರು ಬಾರಿ ವಿಸ್ತರಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್