AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಬೆಟ್ಟದ ಜಾಲಿ ರೈಡ್‌ ತಂದಿಟ್ಟ ಅವಾಂತರ.. ಕಾರುಗಳ ನಡುವೆ ಸರಣಿ ಅಪಘಾತ

ಡಿವೈಡರ್ ಹಾರಿ ಎದುರು ಬದಿಯ ಕಾರಿಗೆ ಕಾರು ಡಿಕ್ಕಿ ಹೊಡೆದು ಅದರ ರಭಸಕ್ಕೆ 5 ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಭಾರಿ ಅವಘಡ ನಡೆದಿದೆ. ಘಟನೆಯಲ್ಲಿ 5 ಕಾರುಗಳು ಜಖಂ ಆಗಿದ್ದು 9 ಜನರಿಗೆ ಗಾಯಗಳಾಗಿವೆ.

ನಂದಿಬೆಟ್ಟದ ಜಾಲಿ ರೈಡ್‌ ತಂದಿಟ್ಟ ಅವಾಂತರ.. ಕಾರುಗಳ ನಡುವೆ ಸರಣಿ ಅಪಘಾತ
ಏರ್​ಪೋರ್ಟ್​ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್‌ನಲ್ಲಿ ಸರಣಿ ಅಪಘಾತ
ಆಯೇಷಾ ಬಾನು
|

Updated on:Dec 27, 2020 | 11:01 AM

Share

ಬೆಂಗಳೂರು: ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಏರ್​ಪೋರ್ಟ್​ ರಸ್ತೆಯ ಬ್ಯಾಟರಾಯನಪುರ ಫ್ಲೈಓವರ್‌ನಲ್ಲಿ ಸರಣಿ ಅಪಘಾತ ನಡೆದಿದ್ದು ಘಟನೆಯಲ್ಲಿ 9 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಡಿವೈಡರ್ ಹಾರಿ ಎದುರು ಬದಿಯ ಕಾರಿಗೆ ಕಾರು ಡಿಕ್ಕಿ ಹೊಡೆದು ಅದರ ರಭಸಕ್ಕೆ 5 ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಭಾರಿ ಅವಘಡ ನಡೆದಿದೆ. ಘಟನೆಯಲ್ಲಿ 5 ಕಾರುಗಳು ಜಖಂ ಆಗಿದ್ದು 9 ಜನರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಹೆಬ್ಬಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಏರ್ಪೋರ್ಟ್ ಕಡೆ ಹೋಗುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಅಪಘಾತಕ್ಕೆ ಕಾರಣ ಬೈಕ್ ಸವಾರರ ಜಾಲಿ ರೈಡ್‌ನಿಂದ ಈ ಸರಣಿ ಅಪಘಾತ ನಡೆದಿದೆ ಎಂದು ಹೇಳಲಾಗುತ್ತಿದೆ. ನಂದಿಬೆಟ್ಟದ ಕಡೆ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರರು ಕಾರನ್ನು ಓವರ್‌ಟೇಕ್ ಮಾಡಿ ಚಮಕ್ ಕೊಡಲು ಹೋಗಿದ್ದಾರೆ. ಈ ವೇಳೆ ಚಾಲಕನಿಗೆ ಭಯವಾಗಿ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಕ್ಕದ ರಸ್ತೆಗೆ ನುಗ್ಗಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಮೂರು ಕಾರುಗಳು ಪಲ್ಟಿಯಾಗಿವೆ.

ಹಾಯಾಗಿದ್ದ ಸ್ನೇಹಿತರಿಗೆ ಮುಳುವಾಯ್ತು ಅಪಘಾತ.. ಅಗಲಿದ ಗೆಳೆಯನ ನೆನೆದು ಶ್ವಾನದ ಕಣ್ಣೀರು

Published On - 11:00 am, Sun, 27 December 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?