AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: KSRTC ಬಸ್, ಎರಡು ಲಾರಿಗಳ ನಡುವೆ ಸರಣಿ ಅಪಘಾತ

ನೆಲಮಂಗಲ: KSRTC ಬಸ್ ಮತ್ತು ಎರಡು ಲಾರಿಗಳ ನಡುವೆ ಸರಣಿ ಅಪಘಾತವಾಗಿರುವ ಭೀಕರ ಘಟನೆ ಮಾದವಾರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಲಾರಿಯನ್ನು ಓವರ್‌ಟೇಕ್ ಮಾಡುವ ವೇಳೆ ಬಸ್ ಡಿಕ್ಕಿಯಾಗಿದೆ. ಇದೇ ವೇಳೆ ಹಿಂದೆಯಿಂದ ಬಂದ ಕಟ್ಟಿಗೆ ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಟ್ಯಾಂಕರ್‌ನಿಂದ ಪೆಟ್ರೋಲ್ ಸುರಿಯುತ್ತಿರುವ ಹಿನ್ನೆಲೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ವಾಹನಗಳು ಬೆಂಗಳೂರು-ತುಮಕೂರು ಮಾರ್ಗವಾಗಿ ಚಲಿಸುತ್ತಿದ್ದವು. ಕೆಎಸ್​ಆರ್​ಟಿಸಿ ಬಸ್ ಬೆಂಗಳೂರಿನ ಶಾಂತಿನಗರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ […]

ನೆಲಮಂಗಲ: KSRTC ಬಸ್, ಎರಡು ಲಾರಿಗಳ ನಡುವೆ ಸರಣಿ ಅಪಘಾತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 22, 2020 | 6:59 AM

Share

ನೆಲಮಂಗಲ: KSRTC ಬಸ್ ಮತ್ತು ಎರಡು ಲಾರಿಗಳ ನಡುವೆ ಸರಣಿ ಅಪಘಾತವಾಗಿರುವ ಭೀಕರ ಘಟನೆ ಮಾದವಾರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಲಾರಿಯನ್ನು ಓವರ್‌ಟೇಕ್ ಮಾಡುವ ವೇಳೆ ಬಸ್ ಡಿಕ್ಕಿಯಾಗಿದೆ. ಇದೇ ವೇಳೆ ಹಿಂದೆಯಿಂದ ಬಂದ ಕಟ್ಟಿಗೆ ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಟ್ಯಾಂಕರ್‌ನಿಂದ ಪೆಟ್ರೋಲ್ ಸುರಿಯುತ್ತಿರುವ ಹಿನ್ನೆಲೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ವಾಹನಗಳು ಬೆಂಗಳೂರು-ತುಮಕೂರು ಮಾರ್ಗವಾಗಿ ಚಲಿಸುತ್ತಿದ್ದವು. ಕೆಎಸ್​ಆರ್​ಟಿಸಿ ಬಸ್ ಬೆಂಗಳೂರಿನ ಶಾಂತಿನಗರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 4ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೆಟ್ರೋಲ್ ತುಂಬಿದ್ದ ಲಾರಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಟ್ಟಿಗೆ ತುಂಬಿದ್ದ ಲಾರಿ ಚಾಲಕ ಲಾರಿಯಲ್ಲಿ ಸಿಕ್ಕು 2ಗಂಟೆಗಳ ಕಾಲ ನರಳಾಡಿದ್ದಾನೆ. ಪೀಣ್ಯ, ರಾಜಾಜಿನಗರ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ಚಾಲಕನ ರಕ್ಷಣೆ ಮಾಡಲಾಗಿದೆ.

ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತ ಸ್ಥಳದಲ್ಲಿ ಜನ ಜಮಾವಣೆಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಸಿಬ್ಬಂದಿ ಹಾಗೂ ಸಂಚಾರಿ ಪೋಲಿಸರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಹರಸಾಹಸ ಮಾಡಲಾಗುತ್ತಿದೆ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ