AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: KSRTC ಬಸ್, ಎರಡು ಲಾರಿಗಳ ನಡುವೆ ಸರಣಿ ಅಪಘಾತ

ನೆಲಮಂಗಲ: KSRTC ಬಸ್ ಮತ್ತು ಎರಡು ಲಾರಿಗಳ ನಡುವೆ ಸರಣಿ ಅಪಘಾತವಾಗಿರುವ ಭೀಕರ ಘಟನೆ ಮಾದವಾರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಲಾರಿಯನ್ನು ಓವರ್‌ಟೇಕ್ ಮಾಡುವ ವೇಳೆ ಬಸ್ ಡಿಕ್ಕಿಯಾಗಿದೆ. ಇದೇ ವೇಳೆ ಹಿಂದೆಯಿಂದ ಬಂದ ಕಟ್ಟಿಗೆ ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಟ್ಯಾಂಕರ್‌ನಿಂದ ಪೆಟ್ರೋಲ್ ಸುರಿಯುತ್ತಿರುವ ಹಿನ್ನೆಲೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ವಾಹನಗಳು ಬೆಂಗಳೂರು-ತುಮಕೂರು ಮಾರ್ಗವಾಗಿ ಚಲಿಸುತ್ತಿದ್ದವು. ಕೆಎಸ್​ಆರ್​ಟಿಸಿ ಬಸ್ ಬೆಂಗಳೂರಿನ ಶಾಂತಿನಗರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ […]

ನೆಲಮಂಗಲ: KSRTC ಬಸ್, ಎರಡು ಲಾರಿಗಳ ನಡುವೆ ಸರಣಿ ಅಪಘಾತ
ಸಾಧು ಶ್ರೀನಾಥ್​
|

Updated on: Jan 22, 2020 | 6:59 AM

Share

ನೆಲಮಂಗಲ: KSRTC ಬಸ್ ಮತ್ತು ಎರಡು ಲಾರಿಗಳ ನಡುವೆ ಸರಣಿ ಅಪಘಾತವಾಗಿರುವ ಭೀಕರ ಘಟನೆ ಮಾದವಾರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಪೆಟ್ರೋಲ್ ಟ್ಯಾಂಕರ್ ಲಾರಿಯನ್ನು ಓವರ್‌ಟೇಕ್ ಮಾಡುವ ವೇಳೆ ಬಸ್ ಡಿಕ್ಕಿಯಾಗಿದೆ. ಇದೇ ವೇಳೆ ಹಿಂದೆಯಿಂದ ಬಂದ ಕಟ್ಟಿಗೆ ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಟ್ಯಾಂಕರ್‌ನಿಂದ ಪೆಟ್ರೋಲ್ ಸುರಿಯುತ್ತಿರುವ ಹಿನ್ನೆಲೆ ಅಪಘಾತ ಸಂಭವಿಸಿದ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ವಾಹನಗಳು ಬೆಂಗಳೂರು-ತುಮಕೂರು ಮಾರ್ಗವಾಗಿ ಚಲಿಸುತ್ತಿದ್ದವು. ಕೆಎಸ್​ಆರ್​ಟಿಸಿ ಬಸ್ ಬೆಂಗಳೂರಿನ ಶಾಂತಿನಗರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 4ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೆಟ್ರೋಲ್ ತುಂಬಿದ್ದ ಲಾರಿಯಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಟ್ಟಿಗೆ ತುಂಬಿದ್ದ ಲಾರಿ ಚಾಲಕ ಲಾರಿಯಲ್ಲಿ ಸಿಕ್ಕು 2ಗಂಟೆಗಳ ಕಾಲ ನರಳಾಡಿದ್ದಾನೆ. ಪೀಣ್ಯ, ರಾಜಾಜಿನಗರ ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ಚಾಲಕನ ರಕ್ಷಣೆ ಮಾಡಲಾಗಿದೆ.

ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತ ಸ್ಥಳದಲ್ಲಿ ಜನ ಜಮಾವಣೆಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಸಿಬ್ಬಂದಿ ಹಾಗೂ ಸಂಚಾರಿ ಪೋಲಿಸರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಹರಸಾಹಸ ಮಾಡಲಾಗುತ್ತಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!