AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಈ ವಿಚಾರವಾಗಿ ಮಾರ್ಚ್​ 22ರಂದು ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಸುಪ್ರೀಂ ಕೋರ್ಟ್
ಹರೀಶ್ ಜಿ.ಆರ್​.
| Updated By: Ganapathi Sharma|

Updated on:Apr 08, 2024 | 12:42 PM

Share

ನವದೆಹಲಿ, ಏಪ್ರಿಲ್ 8: ರಾಜ್ಯದ ಪಠ್ಯಕ್ರಮ (Karnataka State Curriculum) ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿರುವ ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಡೆಯಾಜ್ಞೆ ನೀಡಿದೆ. 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್​ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಫಲಿತಾಂಶ ಪ್ರಕಟಿಸದಂತೆ ಸೂಚನೆ

ಸದ್ಯ ಯಾವುದೇ ಶಾಲೆಗಳು ಸಹ ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದ ವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್​ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಬಂದಿದೆ.

ಇದನ್ನೂ ಓದಿ: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ಏನಿದು ಪ್ರಕರಣ?

​2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್​ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್‌ ಅವರು ಮೇಲ್ಮನವಿಯಲ್ಲಿ ಉಲ್ಲೇಖಿಸಿದ್ದರು. ಬಳಿಕ ಮೇಲ್ಮನವಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 8 April 24

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?