AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಬ್ರಿಟನ್ ಭೂತ, ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ!

ಬ್ರಿಟನ್‌ನಿಂದ ವಾಪಸಾದ 7 ಜನರಿಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಬ್ರಿಟನ್‌ನಿಂದ ಬಂದ ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಡಿ.12ರಿಂದ 21ರವರೆಗೆ 1,582 ಜನ ಬೆಂಗಳೂರಿಗೆ ಆಗಮಿಸಿದ್ದರು.

ರಾಜಧಾನಿ ಬೆಂಗಳೂರಿನಲ್ಲಿ ಬ್ರಿಟನ್ ಭೂತ, ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ!
ಆಯೇಷಾ ಬಾನು
|

Updated on:Dec 25, 2020 | 8:57 AM

Share

ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ಕೊರೊನಾ ರೂಪಾಂತರದ ಭಯ ಶುರುವಾಗಿದೆ. ಮೊನ್ನೆ ಅಂದ್ರೆ ಡಿ.23 ಬ್ರಿಟನ್ ನಿಂದ ಬೆಂಗಳೂರಿಗೆ ಬಂದಿದ್ದ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ನಿನ್ನೆ ಮತ್ತೆ ಬ್ರಿಟನ್ ನಿಂದ ಬಂದವರ ಪೈಕಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಇನ್ನು ಬ್ರಿಟನ್‌ನಿಂದ ವಾಪಸಾದ 7 ಜನರಿಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಬ್ರಿಟನ್‌ನಿಂದ ಬಂದ ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಡಿ.12ರಿಂದ 21ರವರೆಗೆ 1,582 ಜನ ಬೆಂಗಳೂರಿಗೆ ಆಗಮಿಸಿದ್ದರು. ಅವರೆಲ್ಲರಿಗೂ RTPCR ಟೆಸ್ಟ್‌ ಮಾಡಲು ಬಿಬಿಎಂಪಿ ಮುಂದಾಗಿತ್ತು.

ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ ಈ ಪೈಕಿ ಕೆಲವರು ರಾಜ್ಯಾದ್ಯಂತ ಓಡಾಡಿರುವ ಮಾಹಿತಿ ಸಿಕ್ಕಿದೆ. ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರ ನಡೆಸಿದ್ದಾರೆ. ಸದ್ಯ ಈಗ BBMP ಬ್ರಿಟನ್‌‌ನಿಂದ ವಾಪಸಾದವರ ಪಟ್ಟಿ ಸಿದ್ಧಪಡಿಸಿದೆ. ಆದರೆ ಇವರನ್ನು ಪತ್ತೆ ಮಾಡುವುದೇ ಈಗ ದೊಡ್ಡ ಸವಾಲಾಗಿದೆ. ಬ್ರಿಟನ್‌‌ನಿಂದ ವಾಪಸಾಗಿರುವ ಕೆಲವರು ಕೈಗೆ ಸಿಗುತ್ತಿಲ್ಲ. ಕೆಲವರು ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿದ್ದಾರೆ. ಇನ್ನೂ ಕೆಲವರು ಬೆಂಗಳೂರು ಬಿಟ್ಟು ಪ್ರವಾಸದಲ್ಲಿದ್ದಾರೆ.

ಬ್ರಿಟನ್‌ನಲ್ಲಿ ಕೊರೊನಾ ಹೊಸ ಪ್ರಭೇದ ಪತ್ತೆ ಹಿನ್ನೆಲೆಯಲ್ಲಿ ಈಗ ಅನಿವಾರ್ಯವಾಗಿ ಎಲ್ಲರಿಗೂ ಕೊವಿಡ್ ಟೆಸ್ಟ್ ಅಗತ್ಯವಾಗಿದೆ. ಕೊವಿಡ್ ಪಾಸಿಟಿವ್ ಬಂದರೂ ಮತ್ತೊಮ್ಮೆ ಟೆಸ್ಟ್ ಅಗತ್ಯ. ಹೊಸ ಪ್ರಭೇದದ ಕೊರೊನಾ ಸೋಂಕು ಇದೆಯಾ ಅಥವಾ ಹಳೆಯ ಕೊವಿಡ್ ವೈರಸ್ ಎಂಬ ಬಗ್ಗೆ ಟೆಸ್ಟ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಕೊರೊನಾದ ಭಯ ಮತ್ತಷ್ಟು ಹೆಚ್ಚಾಗಿದೆ.

ಬ್ರಿಟನ್​ನಲ್ಲಿ ಕೊರೊನಾ ಅವತಾರ್​ 2 ಮಧ್ಯೆಯೇ.. ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೊನಾವತಾರ ಪತ್ತೆ!

Published On - 8:54 am, Fri, 25 December 20

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ