AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಬ್ರಿಟನ್ ಭೂತ, ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ!

ಬ್ರಿಟನ್‌ನಿಂದ ವಾಪಸಾದ 7 ಜನರಿಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಬ್ರಿಟನ್‌ನಿಂದ ಬಂದ ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಡಿ.12ರಿಂದ 21ರವರೆಗೆ 1,582 ಜನ ಬೆಂಗಳೂರಿಗೆ ಆಗಮಿಸಿದ್ದರು.

ರಾಜಧಾನಿ ಬೆಂಗಳೂರಿನಲ್ಲಿ ಬ್ರಿಟನ್ ಭೂತ, ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ!
ಆಯೇಷಾ ಬಾನು
ಆಯೇಷಾ ಬಾನು|

Updated on:Dec 25, 2020 | 8:57 AM

Share

ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ಕೊರೊನಾ ರೂಪಾಂತರದ ಭಯ ಶುರುವಾಗಿದೆ. ಮೊನ್ನೆ ಅಂದ್ರೆ ಡಿ.23 ಬ್ರಿಟನ್ ನಿಂದ ಬೆಂಗಳೂರಿಗೆ ಬಂದಿದ್ದ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ನಿನ್ನೆ ಮತ್ತೆ ಬ್ರಿಟನ್ ನಿಂದ ಬಂದವರ ಪೈಕಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಇನ್ನು ಬ್ರಿಟನ್‌ನಿಂದ ವಾಪಸಾದ 7 ಜನರಿಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಬ್ರಿಟನ್‌ನಿಂದ ಬಂದ ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಡಿ.12ರಿಂದ 21ರವರೆಗೆ 1,582 ಜನ ಬೆಂಗಳೂರಿಗೆ ಆಗಮಿಸಿದ್ದರು. ಅವರೆಲ್ಲರಿಗೂ RTPCR ಟೆಸ್ಟ್‌ ಮಾಡಲು ಬಿಬಿಎಂಪಿ ಮುಂದಾಗಿತ್ತು.

ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ ಈ ಪೈಕಿ ಕೆಲವರು ರಾಜ್ಯಾದ್ಯಂತ ಓಡಾಡಿರುವ ಮಾಹಿತಿ ಸಿಕ್ಕಿದೆ. ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರ ನಡೆಸಿದ್ದಾರೆ. ಸದ್ಯ ಈಗ BBMP ಬ್ರಿಟನ್‌‌ನಿಂದ ವಾಪಸಾದವರ ಪಟ್ಟಿ ಸಿದ್ಧಪಡಿಸಿದೆ. ಆದರೆ ಇವರನ್ನು ಪತ್ತೆ ಮಾಡುವುದೇ ಈಗ ದೊಡ್ಡ ಸವಾಲಾಗಿದೆ. ಬ್ರಿಟನ್‌‌ನಿಂದ ವಾಪಸಾಗಿರುವ ಕೆಲವರು ಕೈಗೆ ಸಿಗುತ್ತಿಲ್ಲ. ಕೆಲವರು ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿದ್ದಾರೆ. ಇನ್ನೂ ಕೆಲವರು ಬೆಂಗಳೂರು ಬಿಟ್ಟು ಪ್ರವಾಸದಲ್ಲಿದ್ದಾರೆ.

ಬ್ರಿಟನ್‌ನಲ್ಲಿ ಕೊರೊನಾ ಹೊಸ ಪ್ರಭೇದ ಪತ್ತೆ ಹಿನ್ನೆಲೆಯಲ್ಲಿ ಈಗ ಅನಿವಾರ್ಯವಾಗಿ ಎಲ್ಲರಿಗೂ ಕೊವಿಡ್ ಟೆಸ್ಟ್ ಅಗತ್ಯವಾಗಿದೆ. ಕೊವಿಡ್ ಪಾಸಿಟಿವ್ ಬಂದರೂ ಮತ್ತೊಮ್ಮೆ ಟೆಸ್ಟ್ ಅಗತ್ಯ. ಹೊಸ ಪ್ರಭೇದದ ಕೊರೊನಾ ಸೋಂಕು ಇದೆಯಾ ಅಥವಾ ಹಳೆಯ ಕೊವಿಡ್ ವೈರಸ್ ಎಂಬ ಬಗ್ಗೆ ಟೆಸ್ಟ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಕೊರೊನಾದ ಭಯ ಮತ್ತಷ್ಟು ಹೆಚ್ಚಾಗಿದೆ.

ಬ್ರಿಟನ್​ನಲ್ಲಿ ಕೊರೊನಾ ಅವತಾರ್​ 2 ಮಧ್ಯೆಯೇ.. ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೊನಾವತಾರ ಪತ್ತೆ!

Published On - 8:54 am, Fri, 25 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?