AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಬೆಂಗಳೂರಿನಲ್ಲಿ ಬ್ರಿಟನ್ ಭೂತ, ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ!

ಬ್ರಿಟನ್‌ನಿಂದ ವಾಪಸಾದ 7 ಜನರಿಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಬ್ರಿಟನ್‌ನಿಂದ ಬಂದ ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಡಿ.12ರಿಂದ 21ರವರೆಗೆ 1,582 ಜನ ಬೆಂಗಳೂರಿಗೆ ಆಗಮಿಸಿದ್ದರು.

ರಾಜಧಾನಿ ಬೆಂಗಳೂರಿನಲ್ಲಿ ಬ್ರಿಟನ್ ಭೂತ, ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ!
ಆಯೇಷಾ ಬಾನು
|

Updated on:Dec 25, 2020 | 8:57 AM

Share

ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ಕೊರೊನಾ ರೂಪಾಂತರದ ಭಯ ಶುರುವಾಗಿದೆ. ಮೊನ್ನೆ ಅಂದ್ರೆ ಡಿ.23 ಬ್ರಿಟನ್ ನಿಂದ ಬೆಂಗಳೂರಿಗೆ ಬಂದಿದ್ದ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ನಿನ್ನೆ ಮತ್ತೆ ಬ್ರಿಟನ್ ನಿಂದ ಬಂದವರ ಪೈಕಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಇನ್ನು ಬ್ರಿಟನ್‌ನಿಂದ ವಾಪಸಾದ 7 ಜನರಿಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಬ್ರಿಟನ್‌ನಿಂದ ಬಂದ ಎಲ್ಲರಿಗೂ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ. ಡಿ.12ರಿಂದ 21ರವರೆಗೆ 1,582 ಜನ ಬೆಂಗಳೂರಿಗೆ ಆಗಮಿಸಿದ್ದರು. ಅವರೆಲ್ಲರಿಗೂ RTPCR ಟೆಸ್ಟ್‌ ಮಾಡಲು ಬಿಬಿಎಂಪಿ ಮುಂದಾಗಿತ್ತು.

ಆ ಒಂದು ಸಾವಿರ ಜನರಿಂದಲೇ ರಾಜ್ಯಕ್ಕೆ ಕಾದಿದೆ ಕಂಟಕ ಈ ಪೈಕಿ ಕೆಲವರು ರಾಜ್ಯಾದ್ಯಂತ ಓಡಾಡಿರುವ ಮಾಹಿತಿ ಸಿಕ್ಕಿದೆ. ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಂಚಾರ ನಡೆಸಿದ್ದಾರೆ. ಸದ್ಯ ಈಗ BBMP ಬ್ರಿಟನ್‌‌ನಿಂದ ವಾಪಸಾದವರ ಪಟ್ಟಿ ಸಿದ್ಧಪಡಿಸಿದೆ. ಆದರೆ ಇವರನ್ನು ಪತ್ತೆ ಮಾಡುವುದೇ ಈಗ ದೊಡ್ಡ ಸವಾಲಾಗಿದೆ. ಬ್ರಿಟನ್‌‌ನಿಂದ ವಾಪಸಾಗಿರುವ ಕೆಲವರು ಕೈಗೆ ಸಿಗುತ್ತಿಲ್ಲ. ಕೆಲವರು ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿದ್ದಾರೆ. ಇನ್ನೂ ಕೆಲವರು ಬೆಂಗಳೂರು ಬಿಟ್ಟು ಪ್ರವಾಸದಲ್ಲಿದ್ದಾರೆ.

ಬ್ರಿಟನ್‌ನಲ್ಲಿ ಕೊರೊನಾ ಹೊಸ ಪ್ರಭೇದ ಪತ್ತೆ ಹಿನ್ನೆಲೆಯಲ್ಲಿ ಈಗ ಅನಿವಾರ್ಯವಾಗಿ ಎಲ್ಲರಿಗೂ ಕೊವಿಡ್ ಟೆಸ್ಟ್ ಅಗತ್ಯವಾಗಿದೆ. ಕೊವಿಡ್ ಪಾಸಿಟಿವ್ ಬಂದರೂ ಮತ್ತೊಮ್ಮೆ ಟೆಸ್ಟ್ ಅಗತ್ಯ. ಹೊಸ ಪ್ರಭೇದದ ಕೊರೊನಾ ಸೋಂಕು ಇದೆಯಾ ಅಥವಾ ಹಳೆಯ ಕೊವಿಡ್ ವೈರಸ್ ಎಂಬ ಬಗ್ಗೆ ಟೆಸ್ಟ್ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಕೊರೊನಾದ ಭಯ ಮತ್ತಷ್ಟು ಹೆಚ್ಚಾಗಿದೆ.

ಬ್ರಿಟನ್​ನಲ್ಲಿ ಕೊರೊನಾ ಅವತಾರ್​ 2 ಮಧ್ಯೆಯೇ.. ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೊರೊನಾವತಾರ ಪತ್ತೆ!

Published On - 8:54 am, Fri, 25 December 20

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?