AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮಖಂಡಿಯಲ್ಲಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ, ಚಾಲಕನ ಸಾವಿಗೆ ಕಾರಣರಾಗಿದ್ದ 7 ಸಿಬ್ಬಂದಿ ವಜಾ

ಏಳು ಸಿಬ್ಬಂದಿಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ಅರುಣ್ ಅರಕೇರಿ ಆದೇಶ ಹೊರಡಿಸಿದ್ದಾರೆ.

ಜಮಖಂಡಿಯಲ್ಲಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ, ಚಾಲಕನ ಸಾವಿಗೆ ಕಾರಣರಾಗಿದ್ದ 7 ಸಿಬ್ಬಂದಿ ವಜಾ
ಕಲ್ಲು ತೂರಾಟಕ್ಕೆ ಒಳಗಾದ ಕೆಎಸ್​ಆರ್​ಟಿಸಿ ಬಸ್​
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 21, 2021 | 11:42 PM

Share

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿ, ಸಾರಿಗೆ ನಿಗಮದ ಸಿಬ್ಬಂದಿಯ ಸಾವಿಗೆ ಕಾರಣರಾಗಿದ್ದ ಏಳು ಸಿಬ್ಬಂದಿಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ಅರುಣ್ ಅರಕೇರಿ ಆದೇಶ ಹೊರಡಿಸಿದ್ದಾರೆ. ಮನೋಹರ ಐಹೊಳಿ, ಸದಾಶಿವ ಕಂಕನವಾಡಿ, ಲೋಹಿತ್ ದಾಸರ, ಮಲ್ಲಪ್ಪ ತಳವಾರ, ಚೇತನ ಕರ್ವೆ, ಬಿ.ವೈ.ಪೂಜಾರ ಅವರನ್ನು ನೌಕರಿಯಿಂದ ವಜಾ ಮಾಡಲಾಗಿದೆ.

ಬಸ್ ಚಾಲನೆ ವೇಳೆ ಕಲ್ಲೇಟಿನಿಂದ ಜಮಖಂಡಿ ಚಾಲಕ ನಬಿರಸೂಲ್ ಸಾಬ್ ಅವಟಿ (58) ಮೃತಪಟ್ಟಿದ್ದರು. ಏಪ್ರಿಲ್ 16ರಂದು ಜಮಖಂಡಿ ಸಮೀಪ ಕವಟಗಿ ಕ್ರಾಸ್ ಬಳಿ ಬಸ್​ಗೆ ಕಲ್ಲು ತೂರಲಾಗಿತ್ತು. ಕಲ್ಲು ಕುತ್ತಿಗೆಗೆ ಬಡಿದು ಚಾಲಕ ಸಾವನ್ನಪ್ಪದ್ದರು. ಆರೋಪಿ ನೌಕರರನ್ನು ವಜಾ ಮಾಡಲಾಗಿದೆ ಎಂದು ಬಾಗಲಕೋಟೆ ವಿಭಾಗೀಯ ಸಂಚಾರ ವ್ಯವಸ್ಥಾಪಕ ಬಸವರಾಜ ಅಮ್ಮನವರ ಮಾಹಿತಿ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ವೇಳೆ ಪ್ರತಿನಿತ್ಯ ಅಧಿಕಾರಿಗಳು ಒತ್ತಡ ಹಾಕುತ್ತಿದ್ದರು. ಕೆಲಸಕ್ಕೆ ಬರಬೇಕೆಂದು ದಿನವೂ ಒತ್ತಾಯ ಮಾಡುತ್ತಿದ್ದರು. ಅವರ ಒತ್ತಡಕ್ಕೆ ಮಣಿದು ಕೆಲಸ ಮಾಡಿದ್ದಕ್ಕೆ ಇಂಥಾ ಶಿಕ್ಷೆ ಸಿಕ್ಕಿದೆ. ಸಾರಿಗೆ ಸೇವೆಯ ಕರ್ತವ್ಯದಲ್ಲಿದ್ದಾಗ ನನ್ನ ಪತಿ ಕಲ್ಲೇಟಿಗೆ ಬಲಿಯಾಗಿದ್ದಾರೆ ಎಂದು ಮೃತರ ಪತ್ನಿ ಅಳಲು ತೋಡಿಕೊಂಡಿದ್ದರು. ಈಗ ಯಾರು ನಮಗೆ ದಿಕ್ಕು ಎಂದು ಮೃತ ಚಾಲಕ ಎನ್.ಕೆ. ಅವಟಿ ಪತ್ನಿ ಶಹಿರಾಬಾನು ಕಣ್ಣೀರು ಹಾಕಿದ್ದರು.

ಅರುಣ್ ಅರಕೇರಿ ಎಂಬಾತ ಕೆಎಸ್ಆರ್​ಟಿಸಿ ಬಸ್​ಗೆ ಕಲ್ಲು ತೂರಲು ಪ್ಲ್ಯಾನ್ ಮಾಡಿದ್ದ. ಕಲ್ಲು ತೂರಿದ್ದ ಬಸ್​ನಲ್ಲಿಯೇ ಅರುಣ್ ಕೂಡ ಪ್ರಯಾಣಿಸುತ್ತಿದ್ದ. ಬಸ್​ನಲ್ಲಿಯೇ ಕುಳಿತು ಕಲ್ಲು ತೂರುವುದಕ್ಕೆ ಸ್ಕೆಚ್ ರೂಪಿಸಿದ್ದ. ಆತ ನೀಡಿದ ಸೂಚನೆಯಂತೆ ಮಲ್ಲಪ್ಪ ತಳವಾರ, ಚೇತನ್ ಕರ್ವೆ, ಸದಾಶಿವ ಕಂಕಣವಾಡಿ, ಲೋಹಿತ್ ದಾಸರ ಕಲ್ಲೆ ಎಸೆದಿದ್ದಾರೆ ಎಂಬುದು ವಿಚಾರಣೆ ಬಳಿಕ ತಿಳಿದುಬಂದಿತ್ತು. ದುಷ್ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಜನರನ್ನು ಈ ಹಿಂದೆ ಅಮಾನತು ಮಾಡಲಾಗಿತ್ತು. ಇದೀಗ ವಜಾ ಮಾಡಿ ಆದೇಶ ಹೊರಡಿಸಲಾಗಿದೆ.

(Seven Staff of Jamkhandi NWKRTC Depot Dismissed for Stone Pelting on bus cause for death of a driver)

ಇದನ್ನೂ ಓದಿ: ಎದೆಗೆ ಕಲ್ಲು ಬಿದ್ದರೂ ಪ್ರಯಾಣಿಕರ ರಕ್ಷಣೆ; ಗಂಭೀರ ಗಾಯಗೊಂಡಿದ್ದ ಕೆಎಸ್​ಆರ್​ಟಿಸಿ ಚಾಲಕ ಸಾವು

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಸಾವು: ಎದೆಗೆ ಕಲ್ಲು ಎಸೆಯಲು ಮೊದಲೇ ನಡೆದಿತ್ತು ಪ್ಲ್ಯಾನ್; ಶಾಕಿಂಗ್ ಮಾಹಿತಿ ಬಹಿರಂಗ

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್