AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಏಳು ವರ್ಷ ಮಗುವಿಗೆ ವಕ್ಕರಿಸಿದ ಕೊರೊನಾ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಗುವಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಕೊರೊನಾ ಪರೀಕ್ಷೆಯಿಂದ ಮಗುವಿಗೆ ರಕ್ಕಸ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಕೊಪ್ಪಳದ ಏಳು ವರ್ಷ ಮಗುವಿಗೆ ವಕ್ಕರಿಸಿದ ಕೊರೊನಾ
ಸಾಂದರ್ಭಿಕ ಚಿತ್ರ
sandhya thejappa
| Updated By: Skanda|

Updated on:Apr 05, 2021 | 7:59 AM

Share

ಕೊಪ್ಪಳ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ತಾಂಡವಾಡುತ್ತಿದೆ. ರಾಜ್ಯದೆಲ್ಲೆಡೆ ದಿನೇ ದಿನೇ ಕೊರೊನಾ ಸಕ್ರಿಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಕೊಪ್ಪಳ ಜಿಲ್ಲೆಯಲ್ಲಿ ಏಳು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢವಾಗಿದೆ. ಡೆಂಗ್ಯೂ ಜ್ವರ ಹಿನ್ನೆಲೆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಕೊರೊನಾ ಸೋಂಕು ತಗುಲಿರುವ ಮಾಹಿತಿ ತಿಳಿದುಬಂದಿದೆ.

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಮಗುವಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಕೊರೊನಾ ಪರೀಕ್ಷೆಯಿಂದ ಮಗುವಿಗೆ ರಕ್ಕಸ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯ ವೆಂಟಿಲೇಟರ್​ನಲ್ಲಿ ಮಗು ಚಿಕಿತ್ಸೆ ಪಡೆಯುತ್ತಿದೆ.

ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ 12 ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ. ಸೋಂಕಿತ ವಿದ್ಯಾರ್ಥಿಗಳಿದ್ದ ವಸತಿ ಶಾಲೆಯನ್ನು ಸೀಲ್​ಡೌನ್ ಮಾಡಲಾಗಿದೆ. 7 ರಿಂದ 10ನೇ ತರಗತಿಯವರೆಗೆ ಸುಮಾರು 162 ವಿದ್ಯಾರ್ಥಿಗಳು ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಕೊವಿಡ್ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ಸುಮಾರು 12 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವ ಮಾಹಿತಿ ತಿಳಿದುಬಂದಿದೆ.

ಸೀಲ್​ಡೌನ್​ ಆಗಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ

8ನೇ ಮತ್ತು 9ನೇ ತರಗತಿಯ ತಲಾ ಐದು ಮಂದಿ ವಿದ್ಯಾರ್ಥಿಗಳಿಗೆ ಮತ್ತು 10ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ತಾಲೂಕು ಆಡಳಿತ ಮೂರಾರ್ಜಿ ವಸತಿ ಶಾಲೆಯನ್ನು ಸೀಲ್​ಡೌನ್ ಮಾಡಿದೆ.

ರಾಜ್ಯದ ರಾಜಧಾನಿಯಲ್ಲಿ ದಿನೇದಿನೇ ಕೊವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಇಂದು 2,808 ಕೊವಿಡ್ ಕೇಸ್ ಪತ್ತೆಯಾಗುವ ಸಾಧ್ಯತೆಯಿದೆ.

ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದ್ದರೂ ಗದಗ ಜಿಲ್ಲೆಯ ಜನರು ತಲೆ ಕೆಡಿಸಿಕೊಳ್ಳದೆ ಬೆಟಗೇರಿಯಲ್ಲಿ ತರಕಾರಿ ಖರೀದಿಗೆ ಮುಗಿಬಿದ್ದಿದ್ದಾರೆ. ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೆ ಜನರು ತರಕಾರಿ ಖರೀದಿಸುತ್ತಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯ ಆಡಳಿತ ಸರ್ಕಾರದ ಆದೇಶ ಪಾಲನೆಗೆ ಮುಂದಾಗಿದೆ.

ಇದನ್ನೂ ಓದಿ

India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ

ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಬಂದ್​; ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ: ಜಿಲ್ಲಾಡಳಿತದಿಂದ ಆದೇಶ

(Seven year old child has been confirmed to have a corona virus in koppal)

Published On - 12:20 pm, Sun, 4 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!