AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ. ಇದರ ಬೆನ್ನಲ್ಲೇ ಪ್ರಕರಣ ಎ1 ಆರೋಪಿ, ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ
ಎಚ್​ಡಿ ರೇವಣ್ಣ
Ramesha M
| Edited By: |

Updated on:May 02, 2024 | 5:32 PM

Share

ಬೆಂಗಳೂರು, (ಮೇ.02): ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Sexual assault Case) ಸಂಬಂಧಿಸಿದಂತೆ ಎ1 ಆರೋಪಿ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ (HD Revanna) ಅವರು ಜಾಮೀನು(Bail)  ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹಾಸನ (Hassan) ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್​ ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ (Bengaluru Session Court) ಅರ್ಜಿ ಸಲ್ಲಿಸಿದ್ದಾರೆ.  ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಈ ದೂರಿನ ಅನ್ವಯ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್​ಡಿ ರೇವಣ್ಣ ಅವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಇನ್ನು ಈ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಎ2 ಆರೋಪಿಯಾಗಿದ್ದಾರೆ. ಇನ್ನು ಈ ಪ್ರಕರಣದ ಎಸ್​ಐಟಿ ತನಿಖೆ ನಡೆಸಿದ್ದು, ಈಗಾಗಲೇ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರಜ್ವಲ್​ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ಯಾರು? ಕೊನೆಗೂ ಸ್ಫೋಟಕ ಮಾಹಿತಿ ಬಹಿರಂಗ

ಆದ್ರೆ, ರೇವಣ್ಣ ಆಗಲಿ ಪ್ರಜ್ವಲ್ ಆಗಲಿ ಇದುವರೆಗೂ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಬದಲಿಗೆ ರೇವಣ್ಣ ಕಾನೂನು ತಜ್ಞರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದು, ಇದೀಗ ಅಂತಿಮವಾಗಿ ಅವರ ಸಲಹೆ ಮೇರೆಗೆ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್​ ಕೋರ್ಟ್​ಗೆ ಅರ್ಜಿಸಲ್ಲಿಸಿದ್ದಾರೆ. ಆದ್ರೆ, ಕೋರ್ಟ್​ ಜಾಮೀನು ನೀಡುತ್ತಾ? ಅಥವಾ ಬೇಲ್ ಅರ್ಜಿಯನ್ನು ರದ್ದುಗೊಳಿಸುತ್ತಾ ಎನ್ನುವುದೇ ಕುತೂಹಲ ಮೂಡಿಸಿದೆ. ಒಂದು ವೇಳೆ ಜಾಮೀನು ಅರ್ಜಿ ರದ್ದಾದರೆ ರೇವಣ್ಣ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ.

ಇನ್ನು ರೇವಣ್ಣ ಅವರ ಪುತ್ರ ಎ2 ಆರೋಪಿ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಲ್ಲಿರುವುದರಿಂದ ವಿಚಾರಣೆಗೆ ಏಳು ದಿನ ಕಾಲಾವಕಾಶ ಕೋರಿದ್ದಾರೆ. ಆದ್ರೆ, ಇದಕ್ಕೆ ಎಸ್​ಐಟಿ ನಿರಾಕರಿಸಿದ್ದು, ಲುಕ್​ಔಟ್ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಪ್ರಜ್ವಲ್​ಗೆ ಸಂಕಷ್ಟ ಎದುರಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ಪರ ವಕೀಲ ಸಹ ಇತ್ತ ಜಾಮೀನಿಗಾಗಿ ಕೋರ್ಟ್​ಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ರೇವಣ್ಣ ಅವರ ಜಾಮೀನು ಅರ್ಜಿ ಏನಾಗಲಿದೆ ಎಂದು ನೋಡಿಕೊಂಡು ಪ್ರಜ್ವಲ್ ಪರ ವಕೀಲರು ಸಹ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Thu, 2 May 24

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ