AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಆರೋಪ: ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ

Prajwal Revanna Sexual Assault Case: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಜೆಡಿಎಸ್​​ ವಿರುದ್ಧ ಮುಗಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷಕ್ಕೆ ಹಾಗೂ ತಮ್ಮ ಕುಟುಂಬಕ್ಕೆ ಆಗಿರುವ ಮುಜುಗರನ್ನು ತಪ್ಪಿಸಿಕೊಳ್ಳಲು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಲೈಂಗಿಕ ದೌರ್ಜನ್ಯ ಆರೋಪ: ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ
TV9 Web
| Edited By: |

Updated on:Apr 29, 2024 | 4:35 PM

Share

ಬೆಂಗಳೂರು, ಏಪ್ರಿಲ್​ 29: ಲೈಂಗಿಕ ದೌರ್ಜನ್ಯ ಆರೋಪ(Sexual Assault Case) ಕೇಳಿಬಂದ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರನ್ನು ಜೆಡಿಎಸ್​ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ (HD Kumaraswamy) ಖಚಿತಪಡಿಸಿದ್ದಾರೆ. ಶಿವಮೊಗ್ಗದಲ್ಲಿ (Shivamogga) ಇಂದು (ಏಪ್ರಿಲ್ 29) ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,  ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ರನ್ನು ಉಚ್ಚಾಟಿಸಲಾಗಿದೆ. ಯಾರು ಎಲ್ಲಿ ಹೋಗುತ್ತಾರೆ ಎಂದು ಕಾಯಲು ಆಗುತ್ತಾ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ನಾವೇ ಹೇಳುತ್ತಿದ್ದೇವಲ್ಲಾ, ಸಮಗ್ರ ತನಿಖೆ ಆಗಬೇಕೆಂದು. ಬಿಜೆಪಿಗೂ ಇದಕ್ಕೂ ಯಾವುದೇ ರೀತಿ ಸಂಬಂಧ ಇಲ್ಲ. ನನಗೂ ಈ ಘಟನೆಗೂ ಯಾವುದೇ ಸಂಬಂಧ ಇಲ್ಲ. ನನ್ನ, ನನ್ನ ತಂದೆ ಬಗ್ಗೆ ಸಂಶಯ ಪಡಬೇಡಿ ಎಂದು ಸ್ಪಷ್ಟಪಡಿಸಿದರು.

ಕೋರ್ ಕಮಿಟಿ ಸಭೆಗೂ ಮುನ್ನವೇ ಉಚ್ಛಾಟನೆ

ಈ ಬಗ್ಗೆ ರಾತ್ರಿಯೇ ಹೆಚ್​.ಡಿ.ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನಾಳೆ ಹುಬ್ಬಳ್ಳಿಯ ಕೋರ್ ಕಮಿಟಿಯಲ್ಲಿ ನಿರ್ಧಾರ ಆಗಬೇಕಿತ್ತು . ಸಭೆಗೂ ಮುನ್ನ ಪ್ರಜ್ವಲ್​ ಅವರನ್ನು ದೇವೇಗೌಡ್ರು ಉಚ್ಚಾಟನೆ ಮಾಡಿದ್ದಾರೆ. ತಪ್ಪು ಮಾಡಿದ್ದರೆ ಈ ನೆಲದ ಕಾನೂನಿನಲ್ಲಿ ಶಿಕ್ಷೆ ಆಗಬೇಕು. ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಾ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಪರವಾಗಿ ನಾನು ಧ್ವನಿ ಎತ್ತುತ್ತೇನೆ. ಸಂಸದ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಈ ನಿಟ್ಟಿನಲ್ಲಿ ನನ್ನ ಸ್ಟ್ಯಾಂಡ್ ಮುಂದುವರೆದಿದೆ ಎಂದು ಸ್ಪಷ್ಟಪಡಿಸಿದರು.

ಪೆನ್​ಡ್ರೈವ್ ಹಂಚಿರುವ ಬಗ್ಗೆಯೂ ತನಿಖೆ ಆಗಲಿ

ಇನ್ನು ಇದೇ ವೇಳೆ ಪೆನ್​ಡ್ರೈನಲ್ಲಿನ ವಿಡಿಯೋಗಳನ್ನು ವೈರಲ್ ಮಾಡಿದ್ದವರ ವಿರುದ್ಧ ಗರಂ ಆದ ಕುಮಾರಸ್ವಾಮಿ, ಚುನಾವಣೆ ವೇಳೆ ಪೆನ್​ಡ್ರೈವ್ ಹಂಚಿರುವ ಬಗ್ಗೆಯೂ ತನಿಖೆ ಆಗಲಿ. ಲಕ್ಷಾಂತರ ಪೆನ್ ಡ್ರೈವ್ ಹಂಚಿದ್ದು ಯಾರು ಎಂದು ತಿಳಿಯಬೇಕು. ಪೆನ್ ಡ್ರೈವ್​ ಹಂಚಿದ್ದು ದೊಡ್ಡ ಅಪರಾಧ. ಈ ಪ್ರಕರಣ ಕೆಲ ವರ್ಷಗಳ ಹಳೆಯದ್ದು ಎಂದು ಹೇಳಲಾಗ್ತಿದೆ. ಇಷ್ಟು ದಿನ ಈ ಪ್ರಕರಣ ಬೆಳಕಿಗೆ ಬಂದಿರಲಿಲ್ಲ. ಚುನಾವಣೆ ಸಮಯದಲ್ಲಿ ಈ ವಿಷಯವನ್ನು ಹೊರಗೆ ಹಾಕಿದ್ದಾರೆ . ಎಸ್​ಐಟಿ ತನಿಖೆಯಿಂದ ಪ್ರಕರಣದ ಸತ್ಯ ಹೊರಬರಬೇಕಿದೆ. ಮಹಿಳೆಯರ ಬಗ್ಗೆ ನನಗೆ ತುಂಬಾ ಗೌರವ ಇದೆ. ತಪ್ಪು ಯಾರು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ವಿನಾಕಾರಣ ಈ ಪ್ರಕರಣದಲ್ಲಿ ಹೆಚ್​​ಡಿಡಿ, ಕುಮಾರಸ್ವಾಮಿ, ಮೋದಿ, ಬಿಜೆಪಿಯನ್ನು ತರುವುದು ಸರಿಯಿಲ್ಲ. SIT ತನಿಖೆ ವರದಿ ಬಂದ ಬಳಿಕ ಎಲ್ಲದಕ್ಕೂ ಉತ್ತರ ನೀಡುತ್ತೇನೆ ಎಂದು ಹೇಳಿದರು.

ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ

ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸೋತರೆ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಯನ್ನು ಎದುರಿಸಬೇಕಾಗುತ್ತೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನಕ್ಕೆ ಕುತ್ತು ಬರಲಿದೆ. ಚುನಾವಣೆಯಲ್ಲಿ ಗೆದ್ದರೆ ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿ ಮುಂದುವರಿಯುತ್ತಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ಮೇಲೆ SIT ತನಿಖೆ ನಡೆಯುತ್ತಿರುವುದರಿಂದ ಜೆಡಿಎಸ್‌ ಪಕ್ಷವೇ ರಾಜೀನಾಮೆ ನೀಡುವಂತೆ ಸೂಚಿಸುವ ಸಾಧ್ಯತೆ ಇದೆ. ವಿಡಿಯೋ ಪ್ರಕರಣದಲ್ಲಿ ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಸದ್ಯಕ್ಕೆ ಮುಜುಗರದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದೆ.

ಹಾಸನದಲ್ಲಿ ಗೆದ್ರೆ ಸಂಸದ ಸ್ಥಾನ ಏನಾಗಲಿದೆ?

ಹಾಸನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆದ್ದರೆ ಸಂಸದ ಸ್ಥಾನದಲ್ಲಿ ಮುಂದುವರಿಯುತ್ತಾರೆ. ಆದರೆ ದೂರು ಕೊಟ್ಟವರು, ತನಿಖಾಧಿಕಾರಿಗಳು ಕೋರ್ಟ್‌ನಲ್ಲಿ ಆರೋಪ ಸಾಬೀತು ಪಡಿಸುವುದು ಬಹಳ ಮುಖ್ಯವಾಗಿದೆ. ಕೋರ್ಟ್‌ನಲ್ಲಿ ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಸಾಬೀತು ಮಾಡಿದರೆ ಪ್ರಜಾಪ್ರತಿನಿಧಿ ಕಾಯ್ದೆಯ ಅಡಿ ಸಂಸದ ಸ್ಥಾನದಿಂದ ವಜಾಗೊಳಿಸುವ ಸಾಧ್ಯತೆ ಇದೆ. ಇನ್ನು ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಚುನಾವಣೆಯಲ್ಲಿ ಗೆದ್ದರೂ ಜೆಡಿಎಸ್ ಪಕ್ಷ ತನಿಖೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದರೂ ನೀಡಬಹುದು.

ಎಚ್​ಡಿ ರೇವಣ್ಣ ವಿರುದ್ಧ ಕ್ರಮವೇನು?

HD Revanna Reaction on Sexual Assault Allegations, Says These Are Politics

ಎಚ್ ಡಿ ರೇವಣ್ಣ

ಕೇವಲ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳು ವೈರಲ್ ಆಗಿವೆ. ಆದ್ರೆ, ಇದರ ಮಧ್ಯೆ ಶಾಸಕ ಪ್ರಜ್ವಲ್ ಅವರ ತಂದೆ ಎಚ್​ಡಿ ರೇವಣ್ಣ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಸಂತ್ರಸ್ತೆ ಮಹಿಳೆ ನೀಡಿದ ದುರಿನ ಮೇರೆಗೆ ಹೊಳೆನರಸಿಪುರ ಪೊಲೀಸ್ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ವಿರುದ್ಧ ದೂರು ದಾಖಲಾಗಿದ್ದು, ರೇವಣ್ಣ ಎ1 ಆರೋಪಿಯಾಗಿದ್ದರೆ, ಪ್ರಜ್ವಲ್ ಎ2 ಆರೋಪಿಯಾಗಿದ್ದಾರೆ, ಇದೀಗ ಎಲ್ಲರ ಪ್ರಶ್ನೆ ಏನೆಂದರೆ ಎ2 ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಏನೋ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆದ್ರೆಮ ಎ1 ಆರೋಪಿಯಾಗಿರುವ ಶಾಸಕ ರೇವಣ್ಣ ವಿರುದ್ಧ ಏನು ಕ್ರಮ ಎಂಬ ಪ್ರಶ್ನೆಗಳು ಉದ್ಭವಿಸಿವೆ.

Published On - 4:09 pm, Mon, 29 April 24

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ