AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಕರಣ ರಾಜಕೀಯ ಪ್ರೇರಿತ ಅಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ
ಯಡಿಯೂರಪ್ಪ
TV9 Web
| Edited By: |

Updated on:Mar 15, 2024 | 2:01 PM

Share

ಬೆಂಗಳೂರು, ಮಾರ್ಚ್​ 15: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ (CID) ವರ್ಗಾಯಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

ಇದನ್ನೂ ಓದಿ: ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ ಮಗಳು: ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು

ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Fri, 15 March 24

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ