AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಕರಣ ರಾಜಕೀಯ ಪ್ರೇರಿತ ಅಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ
ಯಡಿಯೂರಪ್ಪ
TV9 Web
| Edited By: |

Updated on:Mar 15, 2024 | 2:01 PM

Share

ಬೆಂಗಳೂರು, ಮಾರ್ಚ್​ 15: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ (CID) ವರ್ಗಾಯಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

ಇದನ್ನೂ ಓದಿ: ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ ಮಗಳು: ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು

ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Fri, 15 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್