ಮಿನಿ ಟ್ರಕ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿ ಜಪ್ತಿ

ಯಾದಗಿರಿ: ಶಹಾಪುರ ತಾಲೂಕಿನ ಹತ್ತಿಗೂಡೂರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಿನಿ ಟ್ರಕ್​ನಲ್ಲಿ ಸುರಪುರದಿಂದ ಗುರುಮಠಕಲ್ ಪಟ್ಟಣಕ್ಕೆ ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಚಾಲಕ ಸಮೇತ 6.42 ಲಕ್ಷ ಮೌಲ್ಯದ ಹಾಲಿನ ಪೌಡರ್​ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಿನಿ ಟ್ರಕ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿ ಜಪ್ತಿ
ಸಾಧು ಶ್ರೀನಾಥ್​

Updated on: Dec 03, 2019 | 10:14 AM

ಯಾದಗಿರಿ: ಶಹಾಪುರ ತಾಲೂಕಿನ ಹತ್ತಿಗೂಡೂರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಿನಿ ಟ್ರಕ್​ನಲ್ಲಿ ಸುರಪುರದಿಂದ ಗುರುಮಠಕಲ್ ಪಟ್ಟಣಕ್ಕೆ ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಚಾಲಕ ಸಮೇತ 6.42 ಲಕ್ಷ ಮೌಲ್ಯದ ಹಾಲಿನ ಪೌಡರ್​ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us