AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ರಾಜ್ಯಾದ್ಯಂತ ನಾರಿ “ಶಕ್ತಿ” ಓಟ ಜೋರು, ಒಂದೇ ವಾರಕ್ಕೆ 100 ಕೋಟಿ ರೂ. ಟಿಕೆಟ್ ಮೊತ್ತ..!

ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಯ ನಾಲ್ಕೂ ನಿಗಮದ ಸರ್ಕಾರಿ ಬಸ್​​ಗಳಲ್ಲಿ ಉಚಿತವಾಗಿ ಮಹಿಳೆಯರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಒಂದು ವಾರ (ಜೂ.11 ರಿಂದ ಜೂ.19) ರವರೆಗಿನ ಸಂಚರಿಸಿದ ಮಹಿಳಾ ಪ್ರಮಾಣಿಕರ ಸಂಖ್ಯೆ ಮತ್ತು ಟಿಕೆಟ್ ವೆಚ್ಚ ಇಲ್ಲಿದೆ.

Shakti Yojana: ರಾಜ್ಯಾದ್ಯಂತ ನಾರಿ ಶಕ್ತಿ ಓಟ ಜೋರು, ಒಂದೇ ವಾರಕ್ಕೆ 100 ಕೋಟಿ ರೂ. ಟಿಕೆಟ್ ಮೊತ್ತ..!
ಕೆಎಸ್​ಆರ್​ಟಿಸಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 20, 2023 | 2:01 PM

Share

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ (Shakti Scheme) ಚಾಲನೆ ನೀಡಿ ಒಂದು ವಾರ ಕಳೆದಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ (Free Bus For Women) ಅವಕಾಶ ನೀಡಲಾಗಿದೆ. ಇನ್ನು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಮಹಿಳೆಯರು ಸಾರಿಗೆ ಇಲಾಖೆಯ ನಾಲ್ಕೂ ನಿಗಮದ ಸರ್ಕಾರಿ ಬಸ್​​ಗಳಲ್ಲಿ (Government Bus) ಉಚಿತವಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಪ್ರಸಿದ್ಧ ದೇವಸ್ಥಾನಗಳು ಫುಲ್​ ಆಗಿವೆ. ಹೀಗೆ ಶಕ್ತಿ ಯೋಜನೆಯಡಿ ಕಳೆದ ಒಂದು ವಾರ (ಜೂ.11 ರಿಂದ ಜೂ.19) ರವರೆಗಿನ ಮಹಿಳಾ ಪ್ರಮಾಣಿಕರ ಟಿಕೆಟ್ ವೆಚ್ಚ 100 ಕೋಟಿ ರೂ. ದಾಡಿದೆ. ಇನ್ನು ಶಕ್ತಿ ಯೋಜನೆಯಡಿ 4 ಕೋಟಿಗೂ ಹೆಚ್ಚು ಮಹಿಳೆಯರ ಉಚಿತವಾಗಿ ಪ್ರಯಾಣಿಸಿದ್ದಾರೆ.

ಜೂ. 19 ರಂದು ನಾಲ್ಕು ನಿಗಮದಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ, ಟಿಕೆಟ್​ ಮೌಲ್ಯ

KSRTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 18,48,216

ಒಟ್ಟು ಮಹಿಳಾ ಪ್ರಯಾಣದ ಟಿಕೆಟ್ ಮೌಲ್ಯ- 6,32,40,861.00

BMTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 18,41,718

ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 2,43,87,694.00

ಇದನ್ನೂ ಓದಿ: ಕಾಂಗ್ರೆಸ್ ನ ‘ಶಕ್ತಿ’ ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ: ಶಕ್ತಿ ಯೋಜನೆ ಯಶಸ್ಸಿನ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತು

NWKRTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 15,19,796

ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ-40,05,33,458.00

KKRTC

ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ- 8,80,180

ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ- 3,12,70,724.00

ನಾಲ್ಕೂ ನಿಗಮ

ಇನ್ನು ಜೂನ್ 11 ರಿಂದ ಜೂನ್ 19 ರವರೆಗೆ ನಾಲ್ಕು ನಿಗಮದ ಬಸ್ ಗಳಲ್ಲಿ ಓಡಾಟ ನಡೆಸಿದವರ ಸಂಖ್ಯೆ ನಾಲ್ಕು ನಿಗಮದ ಬಸ್ ಗಳಲ್ಲಿ ಒಟ್ಟು 4,24,60,089 ಕೋಟಿ. ಒಟ್ಟು ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ- 100,23,08,338 ಕೋಟಿ ರೂ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್