AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ನೇ ದಿನ ಸರ್ಕಾರಿ ಬಸ್​ಗಳಲ್ಲಿ 51.52 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇಲ್ಲಿದೆ ಇವರ ಟಿಕೆಟ್ ವೆಚ್ಚದ ಅಂಕಿ ಅಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ‘ಶಕ್ತಿ’ ಯೋಜನೆಗೆ 3ನೇ ದಿನವೂ ಮಹಿಳೆಯರು ಸಾಕಷ್ಟು ಮಹಿಳೆಯರು ಪ್ರಯಾಣಿಸಿದ್ದಾರೆ. ಹಾಗಾದ್ರೆ, 3ನೇ ದಿನ ಅಂದರೆ ಜೂನ್ 13ರಂದು ಸರ್ಕಾರಿ ಬಸ್​​ಗಳಲ್ಲಿ ಪ್ರಯಾಣಿಸಿದ ಮಹಿಳೆಯ ಸಂಖ್ಯೆ ಎಷ್ಟು? ಒಟ್ಟು ಟಿಕೆಟ್ ದರ ಎಷ್ಟು ಎನ್ನುವ ವಿವರ ಇಲ್ಲಿದೆ. ​

3ನೇ ದಿನ ಸರ್ಕಾರಿ ಬಸ್​ಗಳಲ್ಲಿ 51.52 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇಲ್ಲಿದೆ ಇವರ ಟಿಕೆಟ್ ವೆಚ್ಚದ ಅಂಕಿ ಅಂಶ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Jun 14, 2023 | 3:25 PM

Share

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ(women) ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ(shakti scheme )ಜೂನ್ 11 ರಂದು ರಾಜ್ಯಾದ್ಯಂತ ಚಾಲನೆ ದೊರೆತಿದ್ದು, ಇಂದಿಗೆ ನಾಲ್ಕನೇ ದಿನವಾಗಿದೆ. ಕಳೆದ ಮೂರು ದಿನಗಳಲ್ಲಿ ಸಾಕಷ್ಟು ಮಹಿಳೆಯರು ಬಸ್​ನಲ್ಲಿ ಪ್ರಯಾಣಿಸಿದ್ದಾರೆ. ಮೂರು ದಿನಗಳಲ್ಲಿ ದಿನದಿಂದ ದಿನಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ.  3ನೇ ದಿನ ಅಂದರೆ ಜೂನ್ 13ರಂದು 51.52 ಲಕ್ಷ ಮಹಿಳೆಯರು ಸರ್ಕಾರಿ ಬಸ್​​ಗಳಲ್ಲಿ ಪ್ರಯಾಣಿಸಿದ್ದಾರೆ. ಇದರಿಂದಾಗಿ ಮಹಿಳೆಯರು ಪ್ರಯಾಣಿಸಿದ ಪ್ರಯಾಣದ ಒಟ್ಟು ಮೊತ್ತ 10,82,02,191 ರೂ. ಆಗಿದೆ. (ಹತ್ತು ಕೋಟಿ 82 ಲಕ್ಷದ 2 ಸಾವಿರದ ಒಂದನೂರ ತೊಂಭತ್ತೊಂದು ರೂಪಾಯಿ).

ಇದನ್ನೂ ಓದಿ: Shakti yojana: 2ನೇ ದಿನ ಸರ್ಕಾರಿ ಬಸ್​ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಎಷ್ಟು? ಇಲ್ಲಿದೆ ಅಂಕಿ ಅಂಶ ​

ಕೆಎಸ್​ಆರ್​ಟಿಸಿ ಬಸ್​​ನಲ್ಲಿ ನಿನ್ನೆ(ಜೂನ್ 13) 13,97,665 ಮಹಿಳೆಯರ ಪ್ರಯಾಣಿಸಿದ್ದರೆ (ಪ್ರಯಾಣದ ಮೊತ್ತ 4,12,26,780), ಬಿಎಂಟಿಸಿ ಬಸ್​ನಲ್ಲಿ 20,56,856 ಮಹಿಳೆಯರು ಸಂಚರಿಸಿದ್ದಾರೆ (ಪ್ರಯಾಣದ ಮೊತ್ತ 20,56,856). ಇನ್ನು ವಾಯವ್ಯ ಸಾರಿಗೆ ಬಸ್​ನಲ್ಲಿ 11,08,930 ಮಹಿಳೆಯರು ಓಡಾಡಿದರೆ ಅದರ ಮೊತ್ತ 11,08,930. ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 5,89,318 ಮಹಿಳೆಯರು ಪ್ರಯಾಣಿಸಿದ್ದಾರೆ (ಪ್ರಯಾಣದ ಮೊತ್ತ 5,89,318 ರೂ.).

2ನೇ ದಿನ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ‘ಶಕ್ತಿ’ ಯೋಜನೆಗೆ ಎರಡನೇ ದಿನವೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು, 41.34 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಇದರಿಂದಾಗಿ ಪ್ರಯಾಣದ ಮೊತ್ತವಾದ 8.83 ಕೋಟಿ ರೂ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ 11,40,057 ಮಹಿಳಾ ಪ್ರಯಾಣಿಕರು ಸಂಚರಿಸಿದ್ದು ಅದರ ಮೌಲ್ಯ 3,57,84,677 ರೂ.ಗಳಾಗಿವೆ. ಬಿಎಂಟಿಸಿ ಬಸ್‌ನಲ್ಲಿ 17,57,887 ಮಹಿಳೆಯರು ಪ್ರಯಾಣಿಸಿದ್ದು ಪ್ರಯಾಣದ ಮೌಲ್ಯ 1,75,33,234 ರೂ.ಗಳಾಗಿವೆ. ವಾಯವ್ಯ ಸಾರಿಗೆ ಬಸ್‌ಗಳಲ್ಲಿ 8,31,840 ಮಹಿಳೆಯರು ಪ್ರಯಾಣ ಮಾಡಿದ್ದು ಪ್ರಯಾಣದ ಮೌಲ್ಯ 2,10,66,638 ರೂ.ಗಳಾಗಿವೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳಲ್ಲಿ 4,04,942 ಮಹಿಳೆಯರು ಪ್ರಯಾಣಿಸಿದ್ದು ಪ್ರಯಾಣದ ಮೌಲ್ಯ 1,39,68,885 ರೂ.ಗಳಾಗಿವೆ. ಒಟ್ಟು 41,34,726 ಮಹಿಳೆಯರು ಪ್ರಯಾಣಿಸಿದ್ದು ಪ್ರಯಾಣದ ಮೌಲ್ಯ 8,83,53,434 ರೂ.ಗಳೆಂದು ಕೆಎಸ್‌ಆರ್‌ಟಿಸಿ ತಿಳಿಸಿತ್ತು.

ಮೊದಲ ದಿನ ಪ್ರಯಾಣಿಸಿದ ಮಹಿಳೆಯರು ಎಷ್ಟು?

ಭಾನುವಾರ ಜೂನ್ 11ರಂದು ಈ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿತ್ತು. ಬಳಿಕ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳಲ್ಲಿ 1,93,831 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದು ಇವರ ಪ್ರಯಾಣದ ಮೌಲ್ಯ 58,16,178 ರೂಪಾಯಿ. ಬಿಎಂಟಿಸಿ ಬಸ್​ನಲ್ಲಿ ಒಟ್ಟು 2,01,215 ಮಹಿಳೆಯರು ಪ್ರಯಾಣ ಮಾಡಿದ್ದರೆ(ಪ್ರಯಾಣಿಕರ ಮೌಲ್ಯ 26,19604.00), ವಾಯವ್ಯ ಸಾರಿಗೆ ಬಸ್​ನಲ್ಲಿ 1,22,354 ಮಹಿಳೆಯರು ಓಡಾಡಿದ್ದಾರೆ(ಪ್ರಯಾಣದ ಮೌಲ್ಯ ( 36,17,096.00). ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623 ಮಹಿಳೆಯರು ಪ್ರಯಾಣ ಮಾಡಿದ್ದಾರೆ(ಪ್ರಯಾಣದ ಮೌಲ್ಯ-19.70.0000.00). ಹೀಗೆ ನಿನ್ನೆ ಸಾರಿಗೆ ಬಸ್​ಗಳಲ್ಲಿ ಒಟ್ಟು 5,71,023 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್​​ ವೆಚ್ಚ 1,40,22,878 ರೂ. ಆಗಿತ್ತು.

Published On - 3:20 pm, Wed, 14 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ