AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3ನೇ ದಿನ ಸರ್ಕಾರಿ ಬಸ್​ಗಳಲ್ಲಿ 51.52 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇಲ್ಲಿದೆ ಇವರ ಟಿಕೆಟ್ ವೆಚ್ಚದ ಅಂಕಿ ಅಂಶ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ‘ಶಕ್ತಿ’ ಯೋಜನೆಗೆ 3ನೇ ದಿನವೂ ಮಹಿಳೆಯರು ಸಾಕಷ್ಟು ಮಹಿಳೆಯರು ಪ್ರಯಾಣಿಸಿದ್ದಾರೆ. ಹಾಗಾದ್ರೆ, 3ನೇ ದಿನ ಅಂದರೆ ಜೂನ್ 13ರಂದು ಸರ್ಕಾರಿ ಬಸ್​​ಗಳಲ್ಲಿ ಪ್ರಯಾಣಿಸಿದ ಮಹಿಳೆಯ ಸಂಖ್ಯೆ ಎಷ್ಟು? ಒಟ್ಟು ಟಿಕೆಟ್ ದರ ಎಷ್ಟು ಎನ್ನುವ ವಿವರ ಇಲ್ಲಿದೆ. ​

3ನೇ ದಿನ ಸರ್ಕಾರಿ ಬಸ್​ಗಳಲ್ಲಿ 51.52 ಲಕ್ಷ ಮಹಿಳೆಯರು ಉಚಿತ ಪ್ರಯಾಣ, ಇಲ್ಲಿದೆ ಇವರ ಟಿಕೆಟ್ ವೆಚ್ಚದ ಅಂಕಿ ಅಂಶ
ಸಾಂದರ್ಭಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Jun 14, 2023 | 3:25 PM

Share

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ(women) ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ(shakti scheme )ಜೂನ್ 11 ರಂದು ರಾಜ್ಯಾದ್ಯಂತ ಚಾಲನೆ ದೊರೆತಿದ್ದು, ಇಂದಿಗೆ ನಾಲ್ಕನೇ ದಿನವಾಗಿದೆ. ಕಳೆದ ಮೂರು ದಿನಗಳಲ್ಲಿ ಸಾಕಷ್ಟು ಮಹಿಳೆಯರು ಬಸ್​ನಲ್ಲಿ ಪ್ರಯಾಣಿಸಿದ್ದಾರೆ. ಮೂರು ದಿನಗಳಲ್ಲಿ ದಿನದಿಂದ ದಿನಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ.  3ನೇ ದಿನ ಅಂದರೆ ಜೂನ್ 13ರಂದು 51.52 ಲಕ್ಷ ಮಹಿಳೆಯರು ಸರ್ಕಾರಿ ಬಸ್​​ಗಳಲ್ಲಿ ಪ್ರಯಾಣಿಸಿದ್ದಾರೆ. ಇದರಿಂದಾಗಿ ಮಹಿಳೆಯರು ಪ್ರಯಾಣಿಸಿದ ಪ್ರಯಾಣದ ಒಟ್ಟು ಮೊತ್ತ 10,82,02,191 ರೂ. ಆಗಿದೆ. (ಹತ್ತು ಕೋಟಿ 82 ಲಕ್ಷದ 2 ಸಾವಿರದ ಒಂದನೂರ ತೊಂಭತ್ತೊಂದು ರೂಪಾಯಿ).

ಇದನ್ನೂ ಓದಿ: Shakti yojana: 2ನೇ ದಿನ ಸರ್ಕಾರಿ ಬಸ್​ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಎಷ್ಟು? ಇಲ್ಲಿದೆ ಅಂಕಿ ಅಂಶ ​

ಕೆಎಸ್​ಆರ್​ಟಿಸಿ ಬಸ್​​ನಲ್ಲಿ ನಿನ್ನೆ(ಜೂನ್ 13) 13,97,665 ಮಹಿಳೆಯರ ಪ್ರಯಾಣಿಸಿದ್ದರೆ (ಪ್ರಯಾಣದ ಮೊತ್ತ 4,12,26,780), ಬಿಎಂಟಿಸಿ ಬಸ್​ನಲ್ಲಿ 20,56,856 ಮಹಿಳೆಯರು ಸಂಚರಿಸಿದ್ದಾರೆ (ಪ್ರಯಾಣದ ಮೊತ್ತ 20,56,856). ಇನ್ನು ವಾಯವ್ಯ ಸಾರಿಗೆ ಬಸ್​ನಲ್ಲಿ 11,08,930 ಮಹಿಳೆಯರು ಓಡಾಡಿದರೆ ಅದರ ಮೊತ್ತ 11,08,930. ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 5,89,318 ಮಹಿಳೆಯರು ಪ್ರಯಾಣಿಸಿದ್ದಾರೆ (ಪ್ರಯಾಣದ ಮೊತ್ತ 5,89,318 ರೂ.).

2ನೇ ದಿನ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ‘ಶಕ್ತಿ’ ಯೋಜನೆಗೆ ಎರಡನೇ ದಿನವೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು, 41.34 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಇದರಿಂದಾಗಿ ಪ್ರಯಾಣದ ಮೊತ್ತವಾದ 8.83 ಕೋಟಿ ರೂ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳಲ್ಲಿ 11,40,057 ಮಹಿಳಾ ಪ್ರಯಾಣಿಕರು ಸಂಚರಿಸಿದ್ದು ಅದರ ಮೌಲ್ಯ 3,57,84,677 ರೂ.ಗಳಾಗಿವೆ. ಬಿಎಂಟಿಸಿ ಬಸ್‌ನಲ್ಲಿ 17,57,887 ಮಹಿಳೆಯರು ಪ್ರಯಾಣಿಸಿದ್ದು ಪ್ರಯಾಣದ ಮೌಲ್ಯ 1,75,33,234 ರೂ.ಗಳಾಗಿವೆ. ವಾಯವ್ಯ ಸಾರಿಗೆ ಬಸ್‌ಗಳಲ್ಲಿ 8,31,840 ಮಹಿಳೆಯರು ಪ್ರಯಾಣ ಮಾಡಿದ್ದು ಪ್ರಯಾಣದ ಮೌಲ್ಯ 2,10,66,638 ರೂ.ಗಳಾಗಿವೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳಲ್ಲಿ 4,04,942 ಮಹಿಳೆಯರು ಪ್ರಯಾಣಿಸಿದ್ದು ಪ್ರಯಾಣದ ಮೌಲ್ಯ 1,39,68,885 ರೂ.ಗಳಾಗಿವೆ. ಒಟ್ಟು 41,34,726 ಮಹಿಳೆಯರು ಪ್ರಯಾಣಿಸಿದ್ದು ಪ್ರಯಾಣದ ಮೌಲ್ಯ 8,83,53,434 ರೂ.ಗಳೆಂದು ಕೆಎಸ್‌ಆರ್‌ಟಿಸಿ ತಿಳಿಸಿತ್ತು.

ಮೊದಲ ದಿನ ಪ್ರಯಾಣಿಸಿದ ಮಹಿಳೆಯರು ಎಷ್ಟು?

ಭಾನುವಾರ ಜೂನ್ 11ರಂದು ಈ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿತ್ತು. ಬಳಿಕ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಬಸ್ ಗಳಲ್ಲಿ 1,93,831 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದು ಇವರ ಪ್ರಯಾಣದ ಮೌಲ್ಯ 58,16,178 ರೂಪಾಯಿ. ಬಿಎಂಟಿಸಿ ಬಸ್​ನಲ್ಲಿ ಒಟ್ಟು 2,01,215 ಮಹಿಳೆಯರು ಪ್ರಯಾಣ ಮಾಡಿದ್ದರೆ(ಪ್ರಯಾಣಿಕರ ಮೌಲ್ಯ 26,19604.00), ವಾಯವ್ಯ ಸಾರಿಗೆ ಬಸ್​ನಲ್ಲಿ 1,22,354 ಮಹಿಳೆಯರು ಓಡಾಡಿದ್ದಾರೆ(ಪ್ರಯಾಣದ ಮೌಲ್ಯ ( 36,17,096.00). ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623 ಮಹಿಳೆಯರು ಪ್ರಯಾಣ ಮಾಡಿದ್ದಾರೆ(ಪ್ರಯಾಣದ ಮೌಲ್ಯ-19.70.0000.00). ಹೀಗೆ ನಿನ್ನೆ ಸಾರಿಗೆ ಬಸ್​ಗಳಲ್ಲಿ ಒಟ್ಟು 5,71,023 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್​​ ವೆಚ್ಚ 1,40,22,878 ರೂ. ಆಗಿತ್ತು.

Published On - 3:20 pm, Wed, 14 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್