ಶಕ್ತಿ ಯೋಜನೆಗೆ ನಾಳೆಗೆ ಒಂದು ವರ್ಷ; ನಾಲ್ಕು ನಿಗಮದ ಬಸ್ಸುಗಳಲ್ಲಿ 225 ಕೋಟಿ ಮಹಿಳೆಯರ ಉಚಿತ ಪ್ರಯಾಣ

ಶಕ್ತಿ ಯೋಜನೆಯ ವರ್ಷಾಚರಣೆ ಪ್ರಯುಕ್ತ ಈ ವಾರ ಅಥವಾ ಮುಂದಿನ ವಾರ ರಾಜ್ಯ ಸರ್ಕಾರ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ ಸಂಭ್ರಮಿಸಲು ಚಿಂತನೆ ನಡೆಸಿದೆ. ಸದ್ಯದಲ್ಲೇ ದಿನಾಂಕ ಘೋಷಣೆ ಮಾಡಲಿದೆ. ಶಕ್ತಿ ಯೋಜನೆಯಡಿ ಎಷ್ಟು ಮಂದಿ ಈವರೆಗೆ ಉಚಿತ ಪ್ರಯಾಣ ಮಾಡಿದ್ದಾರೆ? ಎಷ್ಟು ಆದಾಯ ಸಂಗ್ರಹವಾಗಿದೆ ಎಂಬ ವಿವರ ಇಲ್ಲಿದೆ.

ಶಕ್ತಿ ಯೋಜನೆಗೆ ನಾಳೆಗೆ ಒಂದು ವರ್ಷ; ನಾಲ್ಕು ನಿಗಮದ ಬಸ್ಸುಗಳಲ್ಲಿ 225 ಕೋಟಿ ಮಹಿಳೆಯರ ಉಚಿತ ಪ್ರಯಾಣ
ಶಕ್ತಿ ಯೋಜನೆಗೆ ನಾಳೆಗೆ ಒಂದು ವರ್ಷ
Follow us
| Updated By: ಗಣಪತಿ ಶರ್ಮ

Updated on: Jun 11, 2024 | 7:21 AM

ಬೆಂಗಳೂರು, ಜೂನ್ 11: ಕರ್ನಾಟಕ ಕಾಂಗ್ರೆಸ್ ಸರ್ಕಾರದ  (Congress Government) ಮಹಾತ್ವಕಾಂಕ್ಷೆಯ ಶಕ್ತಿ ಯೋಜನೆ (Shakti Scheme) ಆರಂಭವಾಗಿ ನಾಳೆಗೆ, ಅಂದರೆ ಬುಧವಾರಕ್ಕೆ ಒಂದು ವರ್ಷ ಆಗಲಿದೆ. ಈ ಅವಧಿಯಲ್ಲಿ 225 ಕೋಟಿ ಮಹಿಳೆಯರು ಉಚಿತವಾಗಿ (Free Bus Travel for Women) ನಾಲ್ಕು ನಿಗಮದ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ನಾಲ್ಕು ನಿಗಮಕ್ಕೆ ಬರೋಬ್ಬರಿ 5481 ಕೋಟಿ ರೂಪಾಯಿ ಆದಾಯ ಬಂದಿದೆ. ಕೆಎಸ್ಆರ್​ಟಿಸಿ ಒಂದರಲ್ಲೇ 68 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದರೆ, ಬಿಎಂಟಿಸಿಯಲ್ಲಿ 71 ಕೋಟಿ, ಕೆಕೆಆರ್​ಟಿಸಿ- ಎನ್​ಡಬ್ಲ್ಯುಕೆಆರ್​ಟಿಸಿಯಲ್ಲಿ 85 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇದರಿಂದ ನಾಲ್ಕು ನಿಗಮಗಳಿಗೆ ಕೋಟ್ಯಂತರ ರೂಪಾಯಿ ಆದಾಯ ಬಂದಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದ ನಿಗಮಕ್ಕೆ ಶಕ್ತಿ ಯೋಜನೆಯಿಂದ ದೊಡ್ಡ ಮಟ್ಟದಲ್ಲಿ ಲಾಭವಾಗಿದೆ.

ಕೆಎಸ್ಆರ್​​​ಟಿಸಿಗೆ 2070 ಕೋಟಿ ರೂಪಾಯಿ ಆದಾಯ ಬಂದಿದ್ದರೆ, ಬಿಎಂಟಿಸಿಗೆ 937 ಕೋಟಿ ರೂಪಾಯಿ, ಕೆಕೆಆರ್​ಟಿಸಿ- ಎನ್​ಡಬ್ಲ್ಯುಕೆಆರ್​ಟಿಸಿಗೆ ಸೇರಿ ಒಟ್ಟು 2472 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಶಕ್ತಿ ಯೋಜನೆ ಆರಂಭದಿಂದ ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರಿಗೆ ದೊಡ್ಡ ‌ಮಟ್ಟದಲ್ಲಿ ಸಹಾಯ ಆಗಿದ್ದರೆ, ಇತ್ತ ರಾಜ್ಯದ ಧಾರ್ಮಿಕ ಕ್ಷೇತ್ರ, ಪ್ರವಾಸಿ ತಾಣಗಳಿಗೆ ಸೇರಿ ಇತರೆಡೆಗೆ ನಿತ್ಯವೂ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಈ ಶಕ್ತಿ ಯೋಜನೆಯಿಂದಾಗಿ ಸಾವಿರಾರು ರೂಪಾಯಿ ಉಳಿತಾಯ ಆಯ್ತು. ಇದೇ ರೀತಿ ಇನ್ನಷ್ಟು ವರ್ಷ ಮುಂದುವರೆಯಲಿ ಎಂದು ಮಹಿಳೆಯರು, ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಗೆ ಬಂತು ‘ಶಕ್ತಿ’, ದಾಖಲೆಯ 3,930 ಕೋಟಿ ರೂ. ಆದಾಯ

ಈ ವಾರ ಅಥವಾ ಮುಂದಿನ ವಾರ ರಾಜ್ಯ ಸರ್ಕಾರ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ ಶಕ್ತಿ ಯೋಜನೆಯ ವರ್ಷಾಚರಣೆ ಸಂಭ್ರಮಿಸಲು ಚಿಂತನೆ ನಡೆಸಿದೆ. ಸದ್ಯದಲ್ಲೇ ದಿನಾಂಕ ಘೋಷಣೆ ಮಾಡಲಿದೆ.

‘ಶಕ್ತಿ’ ಯೋಜನೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆದಾಯ ದಾಖಲೆ ಪ್ರಮಾಣದಲ್ಲಿ ಹೆಚ್ಚಳಕ್ಕೆ ನೇರ ಹಾಗೂ ಪರೋಕ್ಷವಾಗಿ ನೆರವಾಗಿರುವ ಬಗ್ಗೆ ಸೋಮವಾರ ವರದಿಯಾಗಿತ್ತು. ಯೋಜನೆಯ ಪರಿಣಾಮವಾಗಿ 2023-24ನೇ ಸಾಲಿನಲ್ಲಿ 3,930 ಕೋಟಿ ರೂ. ಆದಾಯವನ್ನು ಕೆಎಸ್‌ಆರ್‌ಟಿಸಿ ಗಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್