AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti scheme: ಶಕ್ತಿ ಯೋಜನೆಗೆ ಒಂದು ತಿಂಗಳು; ಅತಿಹೆಚ್ಚು ಮಹಿಳೆಯರನ್ನು ಕರೆದೊಯ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ

ವಿವಿಧ ನಿಗಮಗಳ ಬಸ್‌ಗಳಲ್ಲಿ, 32.89 ಕೋಟಿ ಮಂದಿ ಪ್ರಯಾಣಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) 9.69 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದ್ದು, ಅದರಲ್ಲಿ ಶೇ 52.52ರಷ್ಟು ಮಹಿಳೆಯರಾಗಿದ್ದಾರೆ.

Shakti scheme: ಶಕ್ತಿ ಯೋಜನೆಗೆ ಒಂದು ತಿಂಗಳು; ಅತಿಹೆಚ್ಚು ಮಹಿಳೆಯರನ್ನು ಕರೆದೊಯ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
2022ರ ಜೂನ್​​​ 11ರಿಂದ ಜುಲೈ 15ರವರೆಗೆ 58 ದೇವಾಲಯಗಳಲ್ಲಿ ಇ-ಹುಂಡಿಗಳ ಮೂಲಕ 19 ಕೋಟಿ ರೂ. ಸಂಗ್ರಹವಾದ್ರೆ, ಈ ವರ್ಷ ಬರೋಬ್ಬರಿ 24 ಕೋಟಿ 47 ಲಕ್ಷ ರೂಪಾಯಿ ಆದಾಯ ಬಂದಿದೆ.
ಗಣಪತಿ ಶರ್ಮಾ
|

Updated on: Jul 12, 2023 | 3:30 PM

Share

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ‘ಶಕ್ತಿ’ ಯೋಜನೆ (Shakti scheme) ಮಂಗಳವಾರಕ್ಕೆ ಒಂದು ತಿಂಗಳು ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ 16.73 ಕೋಟಿ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ, ಇದು ಒಟ್ಟು ಪ್ರಯಾಣಿಕರ ಪೈಕಿ ಶೇ 50.86 ಆಗಿದೆ. ಕಾಂಗ್ರೆಸ್ ಘೋಷಿಸಿದ ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆ ಮೊದಲನೆಯದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಯೋಜನೆಗೆ ಚಾಲನೆ ನೀಡಿದ್ದರು.

ಯೋಜನೆ ಪ್ರಾರಂಭವಾದ ನಂತರದ ಒಂದು ತಿಂಗಳಿನಲ್ಲಿ ಜುಲೈ 4ರಂದು ಅತಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದರು. ಅಂದು ಒಟ್ಟು 1,20,04,725 ಕೋಟಿ ಜನರು ಪ್ರಯಾಣಿಸಿದ್ದರೆ, ಅದರಲ್ಲಿ 70,15,397 ಕೋಟಿ ಮಹಿಳೆಯರು ಇದ್ದರು. ಅಂದರೆ ಶೇ 58.43 ರಷ್ಟು ಮಹಿಳಾ ಪ್ರಯಾಣಿಕರಿದ್ದರು.

ವಿವಿಧ ನಿಗಮಗಳ ಬಸ್‌ಗಳಲ್ಲಿ, 32.89 ಕೋಟಿ ಮಂದಿ ಪ್ರಯಾಣಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) 9.69 ಕೋಟಿ ಪ್ರಯಾಣಿಕರನ್ನು ಕರೆದೊಯ್ದಿದ್ದು, ಅದರಲ್ಲಿ ಶೇ 52.52ರಷ್ಟು ಮಹಿಳೆಯರಾಗಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 11.17 ಕೋಟಿ ಪ್ರಯಾಣಿಕರನ್ನು ಸಾಗಿಸಿದ್ದು, ಅದರಲ್ಲಿ 5.38 ಕೋಟಿ, ಅಂದರೆ ಶೇ 48.16 ರಷ್ಟು ಮಹಿಳೆಯರಾಗಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWRTC) ಶೇ 55.53 ರಷ್ಟು ಮಹಿಳಾ ಪ್ರಯಾಣಿಕರನ್ನು ಕರೆದೊಯ್ದಿದೆ. ಇದು ಅತ್ಯಧಿಕ ಸಂಖ್ಯೆಯ ಮಹಿಳಾ ಪ್ರಯಾಣಿಕರನ್ನು ಕರೆದೊಯ್ದೆ ಶ್ರೇಯಕ್ಕೆ ಭಾಜನವಾಗಿದೆ.

ಏತನ್ಮಧ್ಯೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕನಿಷ್ಠ, ಅಂದರೆ ಶೇ 46.75 ರಷ್ಟು ಮಹಿಳಾ ಪ್ರಯಾಣಿಕರನ್ನು ಕರೆದೊಯ್ದಿದೆ.

ಇದನ್ನೂ ಓದಿ: Viral Video: ಉಚಿತ ಬಸ್​ ಪ್ರಯಾಣಕ್ಕಾಗಿ ಬುರ್ಖಾ ಧರಿಸಿದ ಪುರುಷ

ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯವು ಕೆಎಸ್​ಆರ್​ಟಿಸಿಯಲ್ಲಿ ಅತಿ ಹೆಚ್ಚು ಅಂದರೆ 151.25 ಕೋಟಿ ರೂ., ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 103.51 ಕೋಟಿ ರೂ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 77.62 ಕೋಟಿ ರೂ ಮತ್ತು ಬಿಎಂಟಿಸಿಯಲ್ಲಿ 69.56 ಕೋಟಿ ರೂ. ಆಗಿದೆ. ‘ಶಕ್ತಿ’ ಯೋಜನೆಯಡಿ ತಿಂಗಳಿಗೆ ಒಟ್ಟು 401.94 ಕೋಟಿ ರೂ. ವೆಚ್ಚವಾಗಿದೆ ಎಂದು ‘ನ್ಯೂಸ್ 9’ ವರದಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ