AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್- ಅಮವಾಸ್ಯೆ: ಬಸ್ ಫುಲ್ ರಶ್, ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರ ದಂಡು: ಹಲವೆಡೆ ಗಲಾಟೆ ಗದ್ದಲ

ಇಂದು ಭಾನುವಾರ ಹಾಗೂ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರ ದಂಡೇ ರಾಜ್ಯದ ಪ್ರಸಿದ್ಧ ಧರ್ಮ ಕ್ಷೇತ್ರಗಳತ್ತ ಮುಖ ಮಾಡಿದೆ. ಸಾಗರೋಪಾದಿಯಲ್ಲಿ ಮಹಿಳೆಯರು ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದಾರೆ. ಹೀಗಾಗಿ ಬಸ್‌ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ವೀಕೆಂಡ್- ಅಮವಾಸ್ಯೆ: ಬಸ್ ಫುಲ್ ರಶ್, ಧಾರ್ಮಿಕ ಸ್ಥಳಗಳಿಗೆ ಮಹಿಳಾ ಭಕ್ತರ ದಂಡು: ಹಲವೆಡೆ ಗಲಾಟೆ ಗದ್ದಲ
ಉಚಿತ ಬಸ್​ಗಾಗಿ ಮಹಿಳೆಯರ ದಂಡು
ಆಯೇಷಾ ಬಾನು
ಆಯೇಷಾ ಬಾನು|

Updated on: Jun 18, 2023 | 12:01 PM

Share

ಮಂಗಳೂರು: ಶಕ್ತಿ ಯೋಜನೆಯಡಿ(Shakti Scheme) ಮಹಿಳೆಯರಿಗೆ ಉಚಿತ ಬಸ್​ ಸೇವೆ ಸಿಕ್ಕಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ (KSRTC Bus) ಮಹಿಳೆಯರ ದರ್ಬಾರು ಜೋರಾಗಿದೆ. ಅದರಲ್ಲೂ ಇಂದು ಭಾನುವಾರ ಹಾಗೂ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರ(Woman) ದಂಡೇ ರಾಜ್ಯದ ಪ್ರಸಿದ್ಧ ಧರ್ಮ ಕ್ಷೇತ್ರಗಳತ್ತ ಮುಖ ಮಾಡಿದೆ. ಸಾಗರೋಪಾದಿಯಲ್ಲಿ ಮಹಿಳೆಯರು ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದಾರೆ. ಹೀಗಾಗಿ ಬಸ್‌ಗಳಲ್ಲಿ ನೂಕುನುಗ್ಗಲು, ಕಾಲಿಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಚಿಕ್ಕಮಗಳೂರಿನಲ್ಲೊಬ್ಬ ಮಹಿಳೆ ಬಸ್ ಫುಲ್ ರಶ್ ಇದೆ ಎಂದು ಡ್ರೈವರ್ ಸೀಟ್ ಅನ್ನೇ ಹತ್ತಿರುವ ಘಟನೆ ನಡೆದಿದೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಬಸ್ ಹತ್ತಲು ಮಹಿಳೆಯರು ಪರದಾಡಿದ್ದಾರೆ. ಬಸ್‌ಗಾಗಿ ನಿಲ್ದಾಣದಲ್ಲಿ ಕಾದು ಕೂತಿದ್ದು ಕೊನೆಗೆ ಬಸ್ ಬಂದಾಗ ಬಸ್ ಹತ್ತಲು ಮುಗಿಬಿದ್ದಿದ್ದಾರೆ. ಈ ವೇಳೆ ಮಹಿಳೆ ಬಸ್‌ನಲ್ಲಿ ಸೀಟ್ ಇಲ್ಲ, ಕಾಲು ಹಾಕಲು ಕೂಡಾ ಜಾಗ ಇಲ್ಲ ಎಂದು ಡ್ರೈವರ್ ಸೀಟ್ ಮೊರೆ ಹೋಗಿದ್ದಾರೆ. ಮೊದಲು ತನ್ನ ಮಕ್ಕಳನ್ನ ಡ್ರೈವರ್ ಸೀಟ್​ಗೆ ಹತ್ತಿಸಿ ಬಳಿಕ ತಾನೂ ಕೂಡ ಹತ್ತಿ ಕುಳಿತಿದ್ದಾರೆ.

ಪ್ರಯಾಣಿಕರನ್ನ ನಿಯಂತ್ರಿಸಲು ಹೋಂ ಗಾರ್ಡ್ಸ್ ಮೊರೆ ಹೋದ ಸಾರಿಗೆ ಇಲಾಖೆ

ಇಂದು ವೀಕೆಂಡ್ ಜೋತೆ ಅಮಾವಾಸ್ಯೆ ಹಿನ್ನೆಲೆ ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ ಮುಗಿಬಿದ್ದಿದ್ದಾರೆ. ಪ್ರಯಾಣಿಕರನ್ನು ನಿಯಂತ್ರಿಸಲು ಸಾರಿಗೆ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಹೀಗಾಗಿ ಪ್ರಯಾಣಿಕರನ್ನ ನಿಯಂತ್ರಿಸಲು ಸಾರಿಗೆ ಇಲಾಖೆ ಹೋಂ ಗಾರ್ಡ್ಸ್ ಮೊರೆ ಹೋಗಿದೆ. ಯಾದಗಿರಿ ಜಿಲ್ಲೆಯಲ್ಲಿ ಪ್ರಯಾಣಿಕರ ನಿಯಂತ್ರಣಕ್ಕೆ 80 ಹೋಂ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಸುರಪುರ, ಶಹಾಪುರ, ಯಾದಗಿರಿ ಹಾಗೂ ಗುರುಮಠಕಲ್ ಡಿಪೋಗಳಿಗೆ 40 ಮಹಿಳಾ ಹೋಂ ಗಾರ್ಡ್ಸ್, 40 ಪುರುಷ ಹೋಂ ಗಾರ್ಡ್ಸ್ ನಿಯೋಜಿಸಲಾಗಿದೆ. ಸುರಪುರ 20, ಶಹಾಪುರ 20, ಯಾದಗಿರಿ 30 ಹಾಗೂ ಗುರುಮಠಕಲ್ 10 ಹೋಂ ಗಾರ್ಡ್ಸ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಉಚಿತ ಪ್ರಯಾಣಕ್ಕೆ‌ ಬೇಕಾಗುವ ದಾಖಲೆಗಳ ಬಗ್ಗೆ ಹೋಂ ಗಾರ್ಡ್ಸ್ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ. ವಿಶೇಷವಾಗಿ ಮಹಿಳಾ ಪ್ರಯಾಣಿಕರು ಬಸ್ ಹತ್ತುವಾಗ, ಇಳಿಯುವಾಗ ನೂಕುನುಗ್ಗಲು ಆಗದಂತೆ ತಡೆಯಲಾಗುತ್ತಿದೆ. ಬಸ್ ಹಾಗೂ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಹೋಂ ಗಾರ್ಡ್ಸ್ ನಿಗಾ ವಹಿಸುತ್ತಿದ್ದಾರೆ.

ಇದನ್ನೂ ಓದಿ: Bagalkote News: ಉಚಿತ ಪ್ರಯಾಣದಿಂದ ರಶ್​ ಆದ​ ಬಸ್​​ನಲ್ಲಿ ಕಳ್ಳರ ಕೈಚಳಕ, ಅಜ್ಜಿಯ ಬ್ಯಾಗನಿಂದ ಹಣ ಮಾಯ

ಮಂಜುನಾಥನ ದರ್ಶನಕ್ಕೆ ಬಂದ ಭಕ್ತ ಸಾಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದೆ. ರಾಜ್ಯದ ಬೇರೆ ಬೇರೆ ಭಾಗಗಳಿಂದ ಮಹಿಳಾ ಭಕ್ತರು ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಕುಕ್ಕೆ ಸುಬ್ರಹ್ಮಣ್ಯನ ದರ್ಶ‌ನ ಪಡೆಯುತ್ತಿದ್ದಾರೆ. ಇನ್ನು ಬಸ್​ಗಳಲ್ಲಿ ಸೀಟಿಗಾಗಿ ನೂಕುನುಗ್ಗಲಾಗುತ್ತಿದೆ. ಬಸ್​ ಸ್ಟ್ಯಾಂಡ್​ಗಳಿಗೆ ಬಸ್ ಬರುತ್ತಿದ್ದಂತೆ ಜನ ಓಡಿ ಹೋಗಿ ಬಸ್​ ಹತ್ತುತಿದ್ದಾರೆ. ಬಸ್​ ವಿಂಡೋ ಮೂಲಕವೇ ಹತ್ತಲು ಹರಸಾಹಸಪಡುತ್ತಿದ್ದ ದೃಶ್ಯ ಕಂಡು ಬಂದಿದೆ.

ಪತ್ನಿಗೆ ಸೀಟ್ ಹಿಡಿಯಲು ಹೋಗಿ ಸಾರಿಗೆ ಸಿಬ್ಬಂದಿ ಜೊತೆ ಕೈ ಕೈ ಮೀಲಾಯಿಸಿದ ಗಂಡ‌

ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಬಸ್ ಬರುತ್ತಿದ್ದಂತೆ ಬಸ್ ಹತ್ತಿ ಪತ್ನಿಗೆ ಸೀಟ್ ಹಿಡಿಯಲು ಹೋದ ಪತಿರಾಯ ಸಾರಿಗೆ ಸಿಬ್ಬಂದಿ ಜೊತೆ ಕೈ ಕೈ ಮೀಲಾಯಿಸಲು ಮುಂದಾದ ಘಟನೆ ನಡೆದಿದೆ. ಬಸ್ ಬಳಿಯೇ ಸ್ಕೂಟಿ ನಿಲ್ಲಿಸಿ ಪತ್ನಿಗೆ ಸೀಟ್ ಕೊಡಿಸಲು ಬಸ್ ಹತ್ತಿದ ವ್ಯಕ್ತಿಗೆ ಗಾಡಿ ತೆರವುಗೊಳಿಸಲು ಸಾರಿಗೆ ಸಿಬ್ಬಂದಿ ಸೂಚನೆ ನೀಡಿದರು. ಆದರೆ ಪತ್ನಿಗೆ ಸೀಟ್ ಕೊಡಿಸುವದಕ್ಕಾಗಿ ಸ್ಕೂಟಿ ತೆಗೆದಿಲ್ಲ. ಹೀಗಾಗಿ ಸ್ಕೂಟಿ ಪಾಕ್೯ ಸಂಬಂಧ ಸಾರಿಗೆ ಸಿಬ್ಬಂದಿ ಹಾಗು ವ್ಯಕ್ತಿಯ ನಡುವೆ ವಾಕ್ ಸಮರವಾಗಿದ್ದು ಕೈ ಕೈ‌ ಮೀಲಾಯಿಸುವ ಹಂತಕ್ಕೆ ಹೋಗಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ