ಶಕ್ತಿ ಯೋಜನೆ: ಸರ್ಕಾರಿ ಬಸ್​ಗಳಲ್ಲಿ ಈವರೆಗೆ 200 ಕೋಟಿ ಮಹಿಳೆಯರು ಪ್ರಯಾಣ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿದ್ದು, ಏಪ್ರಿಲ್​ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್​​ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ರಾಜ್ಯ ಸರ್ಕಾರ 2023ರ ಜೂ. 11ರಿಂದ ಶಕ್ತಿ ಯೋಜನೆ ಆರಂಭಿಸಿತು.

ಶಕ್ತಿ ಯೋಜನೆ: ಸರ್ಕಾರಿ ಬಸ್​ಗಳಲ್ಲಿ ಈವರೆಗೆ 200 ಕೋಟಿ ಮಹಿಳೆಯರು ಪ್ರಯಾಣ
ಶಕ್ತಿ ಯೋಜನೆ
Follow us
|

Updated on: May 07, 2024 | 11:25 AM

ಬೆಂಗಳೂರು, ಮೇ 07: ರಾಜ್ಯದಲ್ಲಿ ಶಕ್ತಿ ಯೋಜನೆ (Shakti Yojana) ಜಾರಿಯಾಗಿ 10 ತಿಂಗಳು ಕಳೆದಿದ್ದು, ಏಪ್ರಿಲ್​ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (RTC) ನಾಲ್ಕು ನಿಗಮಗಳ ಬಸ್​​ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು (Woman) ಉಚಿತವಾಗಿ ಪ್ರಯಾಣಿಸಿದ್ದಾರೆ. ಮಹಿಳೆಯರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ 2023ರ ಜೂ. 11ರಿಂದ ಶಕ್ತಿ ಯೋಜನೆ ಆರಂಭಿಸಿತು. ಈ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮ ಕೆಎಸ್​ಆರ್​ಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಬಿಎಂಟಿಸಿ, ಕೆಕೆಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಶಕ್ತಿ ಯೋಜನೆ ಜಾರಿಯಾದಾಗಿನಿಂದ ಏಪ್ರಿಲ್​ ಅಂತ್ಯದವರೆಗೆ ಒಟ್ಟು 348.97 ಕೋಟಿ ಜನರು ಪ್ರಯಾಣಿಸಿದ್ದರು. ಇದರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಹೆಚ್ಚಿದೆ. ಈವರೆಗೆ ಒಟ್ಟು 4,836 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್​ಗಳನ್ನು ನೀಡಲಾಗಿದೆ. ಶಕ್ತಿ ಯೋಜನೆ ಜಾರಿಯಾದಾಗಿನಿಂದ ನವೆಂಬ್​ ಅಂತ್ಯದ ವೇಳೆಗೆಯೇ 100 ಕೋಟಿ ಮಹಿಳೆಯರು ಪ್ರಯಾಣಿಸಿದ್ದರು. ಇದೀಗ ಈ ಸಂಖ್ಯೆ 200 ಕೋಟಿಗೆ ಮುಟ್ಟಿದೆ. ಬಿಸಿಲು ಮತ್ತು ಚುನಾವಣೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.

ನಾಲ್ಕು ದಿನಗಳ ಪೈಕಿ ಬಿಎಂಟಿಸಿ ಬಸ್​ಗಳಲ್ಲೇ ಅತಿ ಹೆಚ್ಚು ಜನರು ಪ್ರಯಾಣಿಸಿದ್ದಾರೆ. ಯೋಜನೆ ಜಾರಿಯಾದಾಗಿನಿಂದ ಮೇ 05ರವರೆಗೆ 64 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಒಟ್ಟು 842 ಕೋಟಿ ರೂ. ಮೌಲ್ಯದ ಟಿಕೆಟ್​ ನೀಡಲಾಗಿದೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ 61.03 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಒಟ್ಟು 1,844 ಕೋಟಿ ರೂ. ಮೌಲ್ಯದ ಟಿಕೆಟ್​ ನೀಡಲಾಗಿದೆ.

ಇದನ್ನೂ ಓದಿ: ಶಕ್ತಿ ಯೋಜನೆಯ ‘ಫಲಾನುಭವಿ ಬಳೆ ಗ್ಯಾಂಗ್​’ ಕೊನೆಗೂ ಅರೆಸ್ಟ್​! ಏನಿವರ ಕೈಚಳಕದ ಕತೆ?

ಎನ್​ಡಬ್ಲೂಕೆಆರ್​ಟಿಸಿ ಬಸ್​​​ನಲ್ಲಿ 47.2 ಕೋಟಿ ಮಹಿಳೆಯರು ಪ್ರಯಾಣಿಸಿದ್ದು, 1,844 ಕೋಟಿ ರೂ. ಮೌಲ್ಯದ ಟಿಕೆಟ್​ ನೀಡಲಾಗಿದೆ. ಕೆಕೆಆರ್​ಟಿಸಿ ಬಸ್​ಗಳಲ್ಲಿ 30 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. 1000 ಕೋಟಿ ರೂ. ಮೌಲ್ಯದ ಟಿಕೆಟ್​ ನೀಡಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಹೊಸ ಬಸ್‌ಗಳು ಸೇರ್ಪಡೆಯಾಗದ ಕಾರಣ, ಬಸ್‌ಗಳ ಕೊರತೆಯು ಆಗಾಗ್ಗೆ ಕೇಳಿಬರುವ ದೂರು ಮತ್ತು ನಿಗಮಗಳಿಗೆ ಸವಾಲಾಗಿದೆ. ಗ್ರಾಮೀಣ ಭಾಗದಲ್ಲಿ ನಿಗದಿತ ಸಂಖ್ಯೆಯ ಬಸ್‌ಗಳನ್ನು ಓಡಿಸದ ಅಧಿಕಾರಿಗಳು ವಿದ್ಯಾರ್ಥಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. 1,000 ಸಾಮಾನ್ಯ ಬಸ್‌ಗಳನ್ನು ಸೇರ್ಪಡೆಗೊಳಿಸಲು ಯುಟಿಲಿಟಿ ಕ್ರಮ ಕೈಗೊಂಡಿದ್ದು, ಅವುಗಳಲ್ಲಿ 450 ಈಗಾಗಲೇ ಸೇರ್ಪಡೆಗೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲೋಕಸಭಾ ಚುನಾವಣೆಯ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!