AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shakti Yojana: ಶಕ್ತಿ ಯೋಜನೆಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ, ಜಿಎಸ್​ಟಿ ಸಂಗ್ರಹ ಹೆಚ್ಚಳ

ಶಕ್ತಿ ಯೋಜನೆಯಿಂದ ಜಿಎಸ್​​ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್​ ಮಾಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

Shakti Yojana: ಶಕ್ತಿ ಯೋಜನೆಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ, ಜಿಎಸ್​ಟಿ ಸಂಗ್ರಹ ಹೆಚ್ಚಳ
ಶಕ್ತಿ ಯೋಜನೆಯಿಂದ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ, ಜಿಎಸ್​ಟಿ ಸಂಗ್ರಹ ಹೆಚ್ಚಳ
ಗಂಗಾಧರ​ ಬ. ಸಾಬೋಜಿ
|

Updated on:May 29, 2024 | 9:28 PM

Share

ಬೆಂಗಳೂರು, ಮೇ 29: ರಾಜ್ಯ ಕಾಂಗ್ರೆಸ್​ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಉಚಿತ ಬಸ್​ ಪ್ರಯಾಣದ ಶಕ್ತಿ ಯೋಜನೆ (Shakti Yojana) ಕೂಡ ಒಂದು. ಮೊದಮೊದಲು ಈ ಯೋಜನೆ ಜಾರಿಯಾದಾಗ ಹೆಚ್ಚಿನ ಸಂಖ್ಯೆಯಲ್ಲಿ ಮಳೆಯರೇ ಓಡಾಡುತ್ತಿದ್ದರು. ಕೆಲವೊಮ್ಮೆ ಸೀಟು ಸಿಗದಿದ್ದಾಗ ಮಹಿಳೆಯ (Woman) ಮಧ್ಯೆ ದೊಡ್ಡ ದೊಡ್ಡ ಜಗಳಗಳೇ ಆಗಿವೆ. ಈ ಉಚಿತ ಬಸ್​ ಯೋಜನೆ ಬಗ್ಗೆ ಬಿಜೆಪಿ ಸಕಾಷ್ಟು ಟೀಕೆ ಮಾಡಿತ್ತು. ಸದ್ಯ ಈಗ ಇದೇ ಶಕ್ತಿ ಯೋಜನೆಯಿಂದ ಜಿಎಸ್​ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1ನಿಂದ 30.2ಗೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ! ಶಕ್ತಿ ಯೋಜನೆಯಿಂದ ಜಿಎಸ್​​ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್​ ನೀಡಿದ್ದಾರೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್​ 

ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಹೆಚ್ಚಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ ಆರ್ಥಿಕ ಸಬಲೀಕರಣಕ್ಕೆ ಅರ್ಹರಾಗಿರುವ ಕಠಿಣ ಪರಿಶ್ರಮಿ ಮಹಿಳೆಯರಿಗೆ. ಶಕ್ತಿ ಯೋಜನೆ; ಸಬಲೀಕರಣಗೊಂಡ ಮಹಿಳೆಯರ ಪಯಣ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ: ಸರ್ಕಾರಿ ಬಸ್​ಗಳಲ್ಲಿ ಈವರೆಗೆ 200 ಕೋಟಿ ಮಹಿಳೆಯರು ಪ್ರಯಾಣ

ಶಕ್ತಿ ಯೋಜನೆ ಜಾರಿ ಬಳಿಕ ಸದ್ಬಳಕೆ ಮಾಡಿಕೊಳ್ಳುತ್ತಿದ್ದ ಮಹಿಳೆಯರು ಫ್ರೀ ಸವಾರಿಯನ್ನು ಮತ್ತಷ್ಟು ಜೋರು ಮಾಡಿದ್ದರು. ಯೋಜನೆ ಆರಂಭವಾದ 18ನೇ ದಿನಕ್ಕೆ ಒಟ್ಟು 8 ಕೋಟಿಗೂ ಹೆಚ್ಚು ಮಹಿಳೆಯರು ಫ್ರೀಯಾಗಿ ಬಸ್​ನಲ್ಲಿ ಸಂಚಾರ ಮಾಡಿದ್ದರು. 2024ರ ಏಪ್ರಿಲ್​ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್​​ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ಗುಂಪು ಗುಂಪಾಗಿ ಸಾಕಷ್ಟು ಮಹಿಳೆಯರು ಹೆಚ್ಚಾಗಿ ದೇವಸ್ಥಾನಗಳಿಗೆ ಭೇಟಿ ನೀಡಿದ್ದರು. ಇದರಿಂದ ದೇವಸ್ಥಾನದ ಹುಂಡಿಗಳು ಭರ್ತಿ ಆಗಿದ್ದವು. ಅಷ್ಟೇ ಅಲ್ಲದೇ ಧಾರ್ಮಿಕ ದತ್ತಿ ಇಲಾಖೆಗೂ ಸಾಕಷ್ಟು ಹಣ ಹರಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:25 pm, Wed, 29 May 24

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!