AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯಿಂದ ಕರ್ನಾಟಕದ ಮುಜರಾಯಿ ದೇಗುಲಗಳ ಆದಾಯ ದ್ವಿಗುಣ: ಯಾವ ದೇವಸ್ಥಾನದ ಎಷ್ಟು ಆದಾಯ? ಇಲ್ಲಿದೆ

'ಶಕ್ತಿ' ಯೋಜನೆಯ ಪ್ರಭಾವದಿಂದ ಕರ್ನಾಟಕದಲ್ಲಿ ಧಾರ್ಮಿಕ ಪ್ರವಾಸೋದ್ಯಮ ಭಾರಿ ಚೇತರಿಕೆ ಕಂಡಿದೆ. ದೇವಾಲಯಗಳಿಗೆ ಭಕ್ತರು, ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿರುವುದರಿಂದ ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹುಂಡಿಗಳು ಬಹುಬೇಗ ಭರ್ತಿಯಾಗುತ್ತಿವೆ. ದೇವಾಲಯಗಳ ಆದಾಯ ಕಳೆದ ವರ್ಷಕ್ಕೆ ಹೋಲಿಸಿದರೆ ಒಂದೂವರೆಯಿಂದ ಎರಡು ಪಟ್ಟು ಏರಿಕೆಯಾಗಿದೆ. ಹಾಗಾದ್ರೆ, ಯಾವೆಲ್ಲಾ ದೇವಸ್ಥಾನಗಳಿಗೆ ಎಷ್ಟು ಆದಾಯ ಹರಿದುಬಂದಿದೆ ಎನ್ನುವ ವಿವರ ಈ ಕೆಳಗಿನಂತಿದೆ.

TV9 Web
| Edited By: |

Updated on: Feb 05, 2024 | 3:10 PM

Share
ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಟ್ಟಿರುವ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಸುಬ್ರಮ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಈ ವರ್ಷ ಬರೋಬ್ಬರಿ 123 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ.  ಇನ್ನು ಈ ದೇವಸ್ಥಾನಕ್ಕೆ ಕಳೆದ ವರ್ಷ  74 ಕೋಟಿ ರೂ. ಆದಾಯ ಬಂದಿತ್ತು

ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಟ್ಟಿರುವ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ಕುಕ್ಕೆ ಸುಬ್ರಮ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಈ ವರ್ಷ ಬರೋಬ್ಬರಿ 123 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಇನ್ನು ಈ ದೇವಸ್ಥಾನಕ್ಕೆ ಕಳೆದ ವರ್ಷ 74 ಕೋಟಿ ರೂ. ಆದಾಯ ಬಂದಿತ್ತು

1 / 10
ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲೂರು ಮೂಕಂಬಿಕಾ ದೇವಸ್ಥಾನಕ್ಕೆ ಈ ವರ್ಷ 59.47 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಕಳೆದ ವರ್ಷ 31.36 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲೂರು ಮೂಕಂಬಿಕಾ ದೇವಸ್ಥಾನಕ್ಕೆ ಈ ವರ್ಷ 59.47 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಕಳೆದ ವರ್ಷ 31.36 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.

2 / 10
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೆಳೆದ ವರ್ಷ 21.92 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಆದ್ರೆ, ಈ ಬಾರಿ ಡಬ್ಬಲ್ ಆಗಿದೆ. ಅಂದರೆ 52.40 ಕೋಟಿ ರೂಪಾಯಿ ಆದಾಯ ಜಮಾವಾಗಿದೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕೆಳೆದ ವರ್ಷ 21.92 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿತ್ತು. ಆದ್ರೆ, ಈ ಬಾರಿ ಡಬ್ಬಲ್ ಆಗಿದೆ. ಅಂದರೆ 52.40 ಕೋಟಿ ರೂಪಾಯಿ ಆದಾಯ ಜಮಾವಾಗಿದೆ.

3 / 10
ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲರುವ ಪುಣ್ಯಕ್ಷೇತ್ರ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ ವರ್ಷ 36.48 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ, ಇನ್ನು ಕಳೆದ ವರ್ಷ  31.74 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.

ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲರುವ ಪುಣ್ಯಕ್ಷೇತ್ರ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ ವರ್ಷ 36.48 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ, ಇನ್ನು ಕಳೆದ ವರ್ಷ 31.74 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು.

4 / 10
ಕರ್ನಾಟಕದ ಮತ್ತೊಂದು ಮಜುರಾಯಿ ಇಲಾಖೆಯ ಬಹುದೊಡ್ಡ ದೇವಸ್ಥಾನ ಅಂದರೆ ಅದು ಕಟೀಲು ದುರ್ಗಾಪರಮೇಶ್ವರಿ. ದಕ್ಷಿಣ ಕನ್ನಡ ಜಿಲ್ಲೆಯ ನಂದಿನಿ ನದಿಯ ದಂಡೆಯ ಮೇಲಿರರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲೊಂದು. ಈ ದೇವಸ್ಥಾನಕ್ಕೆ ಈ ವರ್ಷ 32.1೦ ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಇನ್ನು ಕಳೆದ ವರ್ಷ ಸಂಗ್ರಹವಾದ ಆದಾಯ 19.57 ಕೋಟಿ ರೂ.

ಕರ್ನಾಟಕದ ಮತ್ತೊಂದು ಮಜುರಾಯಿ ಇಲಾಖೆಯ ಬಹುದೊಡ್ಡ ದೇವಸ್ಥಾನ ಅಂದರೆ ಅದು ಕಟೀಲು ದುರ್ಗಾಪರಮೇಶ್ವರಿ. ದಕ್ಷಿಣ ಕನ್ನಡ ಜಿಲ್ಲೆಯ ನಂದಿನಿ ನದಿಯ ದಂಡೆಯ ಮೇಲಿರರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲೊಂದು. ಈ ದೇವಸ್ಥಾನಕ್ಕೆ ಈ ವರ್ಷ 32.1೦ ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಇನ್ನು ಕಳೆದ ವರ್ಷ ಸಂಗ್ರಹವಾದ ಆದಾಯ 19.57 ಕೋಟಿ ರೂ.

5 / 10
ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಈ ಬಾರಿ 26.71ಕೋಟಿ ರೂಪಾಯಿ ಆದಾಯ ಬಂದಿದೆ. ಇನ್ನು ಕಳೆದ ವರ್ಷ 18.49 ಕೋಟಿ ರೂಪಾಯಿ ಆದಾಯ ಬಂದಿತ್ತು.

ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಈ ಬಾರಿ 26.71ಕೋಟಿ ರೂಪಾಯಿ ಆದಾಯ ಬಂದಿದೆ. ಇನ್ನು ಕಳೆದ ವರ್ಷ 18.49 ಕೋಟಿ ರೂಪಾಯಿ ಆದಾಯ ಬಂದಿತ್ತು.

6 / 10
ಇನ್ನು ಉತ್ತರ ಕರ್ನಾಟಕದ ಪ್ರಸಿದ್ಧಿ ಪಡೆದಿರುವ ಸವದತ್ತಿ ಎಲ್ಲಮ್ಮ ಬೆಗಾವಿ ಜಿಲ್ಲೆಯಲ್ಲಿದ್ದು, ಈ ದೇವಸ್ಥಾನಕ್ಕೆ ಈ ವರ್ಷ ಕಳೆದ ಬಾರಿಗಿಂತ ಡಬಲ್​ ಆದಾಯ ಹರಿದುಬಂದಿದೆ. ಕಳೆದ ವರ್ಷ 10.99 ಕೋಟಿ ರೂ. ಸಂಗ್ರಹವಾಗಿದ್ದರೆ, ಈ ವರ್ಷ 22.52 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಇನ್ನು ಉತ್ತರ ಕರ್ನಾಟಕದ ಪ್ರಸಿದ್ಧಿ ಪಡೆದಿರುವ ಸವದತ್ತಿ ಎಲ್ಲಮ್ಮ ಬೆಗಾವಿ ಜಿಲ್ಲೆಯಲ್ಲಿದ್ದು, ಈ ದೇವಸ್ಥಾನಕ್ಕೆ ಈ ವರ್ಷ ಕಳೆದ ಬಾರಿಗಿಂತ ಡಬಲ್​ ಆದಾಯ ಹರಿದುಬಂದಿದೆ. ಕಳೆದ ವರ್ಷ 10.99 ಕೋಟಿ ರೂ. ಸಂಗ್ರಹವಾಗಿದ್ದರೆ, ಈ ವರ್ಷ 22.52 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

7 / 10
ಮಂದಾರ್ತಿ ದುರ್ಗಾಪರಮೇಶ್ವರಿ ಅಮ್ಮನ ದೇವಸ್ಥಾನಕ್ಕೆ ಕಳೆದ ವರ್ಷ 31.36 ಕೋಟಿ ರೂಪಾಯಿ ಆದಾಯ ಬಂದಿದ್ದರೆ, ಈ ವರ್ಷ 59.47 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ.

ಮಂದಾರ್ತಿ ದುರ್ಗಾಪರಮೇಶ್ವರಿ ಅಮ್ಮನ ದೇವಸ್ಥಾನಕ್ಕೆ ಕಳೆದ ವರ್ಷ 31.36 ಕೋಟಿ ರೂಪಾಯಿ ಆದಾಯ ಬಂದಿದ್ದರೆ, ಈ ವರ್ಷ 59.47 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ.

8 / 10
ಘಾಟಿ ಸುಬ್ರಹ್ಮಣ್ಯವು ಪುರಾತನ ಹಿಂದೂ ದೇವಾಲಯವಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಬಳಿ ಬೆಂಗಳೂರಿನ ಹೊರವಲಯದಲ್ಲಿದೆ. ಈ ದೇವಸ್ಥಾನಕ್ಕೆ ಈ ವರ್ಷ 12.25ಕೋಟಿ ರೂ. ಆದಾಯ ಹರಿದುಬಂದಿದೆ. ಕಳೆದ ವರ್ಷ 7.89ಕೋಟಿ ಆದಾಯ ಸಂಗ್ರಹವಾಗಿತ್ತು.

ಘಾಟಿ ಸುಬ್ರಹ್ಮಣ್ಯವು ಪುರಾತನ ಹಿಂದೂ ದೇವಾಲಯವಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಬಳಿ ಬೆಂಗಳೂರಿನ ಹೊರವಲಯದಲ್ಲಿದೆ. ಈ ದೇವಸ್ಥಾನಕ್ಕೆ ಈ ವರ್ಷ 12.25ಕೋಟಿ ರೂ. ಆದಾಯ ಹರಿದುಬಂದಿದೆ. ಕಳೆದ ವರ್ಷ 7.89ಕೋಟಿ ಆದಾಯ ಸಂಗ್ರಹವಾಗಿತ್ತು.

9 / 10
ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ  ಕಳೆದ ವರ್ಷ 5.95 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಡಬ್ಬಲ್ ಅಂದರೆ 10.58 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ.

ಬೆಂಗಳೂರಿನ ಬನಶಂಕರಿ ದೇವಸ್ಥಾನಕ್ಕೆ ಕಳೆದ ವರ್ಷ 5.95 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದ್ದರೆ, ಈ ವರ್ಷ ಡಬ್ಬಲ್ ಅಂದರೆ 10.58 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ.

10 / 10
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ