ಶರತ್​​ ಬಚ್ಚೇಗೌಡರನ್ನ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ- ಬಿ.ಎಸ್.ಯಡಿಯೂರಪ್ಪ

ಹೊಸಕೋಟೆ: ಶರತ್​​ ಬಚ್ಚೇಗೌಡರನ್ನ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಪ್ರಚಾರದ ವೇಳೆ ಹೇಳಿದ್ದಾರೆ. ಶರತ್ ಬಚ್ಚೇಗೌಡರನ್ನ ಉಚ್ಚಾಟನೆ ಮಾಡಲಾಗಿದೆ. ಸಂಸದ ಬಚ್ಚೇಗೌಡ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರಿಗೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅಶೋಕ್ ಸಮ್ಮುಖದಲ್ಲೇ ಎಂಟಿಬಿಯನ್ನ ಪಕ್ಷಕ್ಕೆ ಕರೆತನ್ನಿ ಎಂದು ಹೇಳಿದ್ದೆ ತಂದೆ, ಮಗ, ಇದೀಗ ರಾಗ ಬದಲಿಸಿ ಉಲ್ಟಾ ಹೊಡೆಯುತ್ತಿದ್ದಾರೆ. […]

ಶರತ್​​ ಬಚ್ಚೇಗೌಡರನ್ನ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ- ಬಿ.ಎಸ್.ಯಡಿಯೂರಪ್ಪ
ಸಾಧು ಶ್ರೀನಾಥ್​

Updated on: Nov 19, 2019 | 1:05 PM

ಹೊಸಕೋಟೆ: ಶರತ್​​ ಬಚ್ಚೇಗೌಡರನ್ನ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣದಲ್ಲಿ ಪ್ರಚಾರದ ವೇಳೆ ಹೇಳಿದ್ದಾರೆ.

ಶರತ್ ಬಚ್ಚೇಗೌಡರನ್ನ ಉಚ್ಚಾಟನೆ ಮಾಡಲಾಗಿದೆ. ಸಂಸದ ಬಚ್ಚೇಗೌಡ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಯಾರೇ ಮಾಡಿದರೂ ಅವರಿಗೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಅಶೋಕ್ ಸಮ್ಮುಖದಲ್ಲೇ ಎಂಟಿಬಿಯನ್ನ ಪಕ್ಷಕ್ಕೆ ಕರೆತನ್ನಿ ಎಂದು ಹೇಳಿದ್ದೆ ತಂದೆ, ಮಗ, ಇದೀಗ ರಾಗ ಬದಲಿಸಿ ಉಲ್ಟಾ ಹೊಡೆಯುತ್ತಿದ್ದಾರೆ. ಎಂಟಿಬಿ ಕತೆ ತರಲು ಒಪ್ಪಿಗೆ ಕೊಟ್ಟವರು ಅವ್ರೆ, ಇವತ್ತು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಹೊಸಕೋಟೆಯಲ್ಲಿ ಸಿಎಂ B.S.ಯಡಿಯೂರಪ್ಪ ಹೇಳಿದ್ದಾರೆ.

 

 

Published On - 3:24 pm, Mon, 18 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us