AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆಯ ನಡುವೆ ಹಾವೇರಿಯಲ್ಲಿ ಅದ್ದೂರಿಯಾಗಿ ನಡೆದ ಶರೀಫ ಶಿವಯೋಗಿಗಳ ರಥೋತ್ಸವ

ಶಿಶುವಿನಹಾಳ ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದ ಸಂತ ಶಿಶುವಿನಹಾಳ ಶರೀಫರ ಜನ್ಮಸ್ಥಳ. ಶರೀಫರು ಐಕ್ಯರಾಗಿರುವ ಸ್ಥಳವನ್ನು ಶರೀಫಗಿರಿ ಅಂತಾ ಕರೆಯಲಾಗುತ್ತದೆ. ತತ್ವಪದಗಳ ಮೂಲಕ ಶಿಶುವಿನಹಾಳ ಶರೀಫರು ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದವರು.

ಕೊರೊನಾ ಎರಡನೇ ಅಲೆಯ ನಡುವೆ ಹಾವೇರಿಯಲ್ಲಿ ಅದ್ದೂರಿಯಾಗಿ ನಡೆದ ಶರೀಫ ಶಿವಯೋಗಿಗಳ ರಥೋತ್ಸವ
ಶರೀಫ ಶಿವಯೋಗಿಗಳ ರಥೋತ್ಸವ
sandhya thejappa
sandhya thejappa|

Updated on: Mar 25, 2021 | 4:53 PM

Share

ಹಾವೇರಿ: ಈಗ ಎಲ್ಲೆಲ್ಲೂ ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಆದರೆ ಕೊರೊನಾ ಅಬ್ಬರದ ನಡುವೆಯೂ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳದ ಶರೀಫ ಶಿವಯೋಗಿಗಳ ಜಾತ್ರೆ ಅದ್ದೂರಿಯಾಗಿ ನಡೆಯಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ಕೊರೊನಾ ಅಲೆಯ ಅಬ್ಬರ ಮರೆತು ಜಾತ್ರೆಯನ್ನು ಸಂಭ್ರಮವಾಗಿ ಆಚರಿಸಿದರು.

ಗುರುಶಿಷ್ಯ ಪರಂಪರೆಯ ಪ್ರತೀಕ ಶಿಶುವಿನಹಾಳ ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದ ಸಂತ ಶಿಶುವಿನಹಾಳ ಶರೀಫರ ಜನ್ಮಸ್ಥಳ. ಶರೀಫರು ಐಕ್ಯರಾಗಿರುವ ಸ್ಥಳವನ್ನು ಶರೀಫಗಿರಿ ಅಂತಾ ಕರೆಯಲಾಗುತ್ತದೆ. ತತ್ವಪದಗಳ ಮೂಲಕ ಶಿಶುವಿನಹಾಳ ಶರೀಫರು ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದವರು. ಶರೀಫರು ಮುಸ್ಲಿಂ ಧರ್ಮದವರಾದರೂ ಶರೀಫರ ಗುರುಗಳಾದ ಗುರುಗೋವಿಂದ ಭಟ್ಟರು ಬ್ರಾಹ್ಮಣ ಸಮುದಾಯದವರು. ಇಬ್ಬರೂ ಯಾವುದೇ ಜಾತಿ ಬೇಧವಿಲ್ಲದೆ ಜಗತ್ತಿಗೆ ಸಾಮರಸ್ಯ ಸಂದೇಶದ ಮೂಲಕ ನಾವೆಲ್ಲರೂ ಒಂದು ಎಂಬುದನ್ನ ಸಾರಿದ್ದರು. ಹೀಗಾಗಿ ಪ್ರತಿವರ್ಷ ಶರೀಫಗಿರಿಯಲ್ಲಿ ಗುರುಶಿಷ್ಯ ಪರಂಪರೆಯ ಪ್ರತೀಕವಾಗಿ ರಥೋತ್ಸವ ನಡೆಸಲಾಗುತ್ತದೆ. ರಥದಲ್ಲಿ ಗುರುಶಿಷ್ಯರ ಬೆಳ್ಳಿಯ ಮೂರ್ತಿಗಳನ್ನಿಟ್ಟು ರಥೋತ್ಸವ ನಡೆಸಲಾಗುತ್ತದೆ. ಜಾತ್ರೆಗೆ ಬಂದ ಭಕ್ತರು ರಥವನ್ನು ಎಳೆದು ರಥೋತ್ಸವದ ಸಂಭ್ರಮ ಆಚರಿಸುತ್ತಾರೆ. ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸುತ್ತಾರೆ.

ರಥೋತ್ಸವದ ವೇಳೆ ನೆರೆದಿದ್ದ ಸಾವಿರಾರು ಭಕ್ತರು

ದೈಹಿಕ ಅಂತರ ಕಾಪಾಡದ ಭಕ್ತರು ರಥೋತ್ಸವದ ಹಿನ್ನೆಲೆಯಲ್ಲಿ ಶರೀಫಗಿರಿಗೆ ಆಗಮಿಸುವ ಸಾವಿರಾರು ಭಕ್ತರು ಶಿಶುವಿನಹಾಳ ಶರೀಫರು ಮತ್ತು ಗುರುಗೋವಿಂದ ಭಟ್ಟರ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ಸಕ್ಕರೆ ಊದಿಸಿ ಭಕ್ತಿಗೆ ಪಾತ್ರರಾಗುತ್ತಾರೆ. ಹಾವೇರಿ, ಧಾರವಾಡ, ಗದಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಸಮರ್ಪಿಸಿದರು. ಭಕ್ತರು ಸರದಿ ಸಾಲಿನಲ್ಲಿ ನಿಂತು ಶರೀಫರ ಕರ್ತೃಗದ್ದುಗೆಗೆ ಪೂಜೆ ಸಲ್ಲಿಸಿ ಪುನೀತರಾದರು. ರಥೋತ್ಸವದ ವೇಳೆ ಭಕ್ತರು ಶರೀಫರು ಮತ್ತು ಗುರುಗೋವಿಂದ ಭಟ್ಟರ ತತ್ವಪದಗಳನ್ನು ಮೆಲುಕು ಹಾಕಿದರು. ರಥೋತ್ಸವಕ್ಕೆ ಡೊಳ್ಳು ಕುಣಿತದ ಸದ್ದು ಮತ್ತಷ್ಟು ಸಾಥ್ ನೀಡಿತು. ಆದರೆ ರಥೋತ್ಸವಕ್ಕೆ ಬಂದಿದ್ದ ಸಾವಿರಾರು ಸಂಖ್ಯೆಯ ಭಕ್ತರ ಪೈಕಿ ಬೆರಳೆಣಿಕೆಯಷ್ಟು ಜನರು ಮಾತ್ರ ಮಾಸ್ಕ್ ಧರಿಸಿದರೆ, ಬಹುತೇಕರು ಮಾಸ್ಕ್ ಧರಿಸದೆ ಕೊರೊನಾ ಬಗ್ಗೆ ಮೈಮರೆತಿದ್ದರು. ದೈಹಿಕ ಅಂತರವಂತೂ ಸಂಪೂರ್ಣ ಮಾಯವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಥೋತ್ಸವವನ್ನು ಸಂಭ್ರಮವಾಗಿ ಆಚರಿಸಿದರು.

ಆನೆಯಿಂದ ಆಶೀರ್ವಾದ ಪಡೆಯುತ್ತಿರುವ ಭಕ್ತರು

ಇದನ್ನೂ ಓದಿ

‘ಚಂದ್ರಲೋಕಕ್ಕೆ ಪ್ರವಾಸ.. ಮನೆಗೊಂದು ಸಣ್ಣ ಹೆಲಿಕಾಪ್ಟರ್​’ -ತಮಿಳುನಾಡಿನ ಅಭ್ಯರ್ಥಿಯ ಚುನಾವಣಾ ಪ್ರಣಾಳಿಕೆಗಳಿವು ; ಇದರಲ್ಲಿದೆ ಒಂದು ​ಟ್ವಿಸ್ಟ್

ಫಲಾನುಭವಿಗಳ ನಿಖರ ಪತ್ತೆಗೆ ಹೊಸ ಉಪಾಯ; ಧಾರವಾಡದಲ್ಲಿ ಹೊಸ ದಾರಿ ಕಂಡುಕೊಂಡ ಗ್ರಾಮ ಲೆಕ್ಕಾಧಿಕಾರಿ

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ