Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎರಡನೇ ಅಲೆಯ ನಡುವೆ ಹಾವೇರಿಯಲ್ಲಿ ಅದ್ದೂರಿಯಾಗಿ ನಡೆದ ಶರೀಫ ಶಿವಯೋಗಿಗಳ ರಥೋತ್ಸವ

ಶಿಶುವಿನಹಾಳ ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದ ಸಂತ ಶಿಶುವಿನಹಾಳ ಶರೀಫರ ಜನ್ಮಸ್ಥಳ. ಶರೀಫರು ಐಕ್ಯರಾಗಿರುವ ಸ್ಥಳವನ್ನು ಶರೀಫಗಿರಿ ಅಂತಾ ಕರೆಯಲಾಗುತ್ತದೆ. ತತ್ವಪದಗಳ ಮೂಲಕ ಶಿಶುವಿನಹಾಳ ಶರೀಫರು ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದವರು.

ಕೊರೊನಾ ಎರಡನೇ ಅಲೆಯ ನಡುವೆ ಹಾವೇರಿಯಲ್ಲಿ ಅದ್ದೂರಿಯಾಗಿ ನಡೆದ ಶರೀಫ ಶಿವಯೋಗಿಗಳ ರಥೋತ್ಸವ
ಶರೀಫ ಶಿವಯೋಗಿಗಳ ರಥೋತ್ಸವ
Follow us
sandhya thejappa
|

Updated on: Mar 25, 2021 | 4:53 PM

ಹಾವೇರಿ: ಈಗ ಎಲ್ಲೆಲ್ಲೂ ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಆದರೆ ಕೊರೊನಾ ಅಬ್ಬರದ ನಡುವೆಯೂ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಶಿಶುವಿನಹಾಳದ ಶರೀಫ ಶಿವಯೋಗಿಗಳ ಜಾತ್ರೆ ಅದ್ದೂರಿಯಾಗಿ ನಡೆಯಿತು. ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ಕೊರೊನಾ ಅಲೆಯ ಅಬ್ಬರ ಮರೆತು ಜಾತ್ರೆಯನ್ನು ಸಂಭ್ರಮವಾಗಿ ಆಚರಿಸಿದರು.

ಗುರುಶಿಷ್ಯ ಪರಂಪರೆಯ ಪ್ರತೀಕ ಶಿಶುವಿನಹಾಳ ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದ ಸಂತ ಶಿಶುವಿನಹಾಳ ಶರೀಫರ ಜನ್ಮಸ್ಥಳ. ಶರೀಫರು ಐಕ್ಯರಾಗಿರುವ ಸ್ಥಳವನ್ನು ಶರೀಫಗಿರಿ ಅಂತಾ ಕರೆಯಲಾಗುತ್ತದೆ. ತತ್ವಪದಗಳ ಮೂಲಕ ಶಿಶುವಿನಹಾಳ ಶರೀಫರು ಜಗತ್ತಿಗೆ ಸಾಮರಸ್ಯದ ಸಂದೇಶ ಸಾರಿದವರು. ಶರೀಫರು ಮುಸ್ಲಿಂ ಧರ್ಮದವರಾದರೂ ಶರೀಫರ ಗುರುಗಳಾದ ಗುರುಗೋವಿಂದ ಭಟ್ಟರು ಬ್ರಾಹ್ಮಣ ಸಮುದಾಯದವರು. ಇಬ್ಬರೂ ಯಾವುದೇ ಜಾತಿ ಬೇಧವಿಲ್ಲದೆ ಜಗತ್ತಿಗೆ ಸಾಮರಸ್ಯ ಸಂದೇಶದ ಮೂಲಕ ನಾವೆಲ್ಲರೂ ಒಂದು ಎಂಬುದನ್ನ ಸಾರಿದ್ದರು. ಹೀಗಾಗಿ ಪ್ರತಿವರ್ಷ ಶರೀಫಗಿರಿಯಲ್ಲಿ ಗುರುಶಿಷ್ಯ ಪರಂಪರೆಯ ಪ್ರತೀಕವಾಗಿ ರಥೋತ್ಸವ ನಡೆಸಲಾಗುತ್ತದೆ. ರಥದಲ್ಲಿ ಗುರುಶಿಷ್ಯರ ಬೆಳ್ಳಿಯ ಮೂರ್ತಿಗಳನ್ನಿಟ್ಟು ರಥೋತ್ಸವ ನಡೆಸಲಾಗುತ್ತದೆ. ಜಾತ್ರೆಗೆ ಬಂದ ಭಕ್ತರು ರಥವನ್ನು ಎಳೆದು ರಥೋತ್ಸವದ ಸಂಭ್ರಮ ಆಚರಿಸುತ್ತಾರೆ. ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಭಕ್ತಿ ಸಮರ್ಪಿಸುತ್ತಾರೆ.

ರಥೋತ್ಸವದ ವೇಳೆ ನೆರೆದಿದ್ದ ಸಾವಿರಾರು ಭಕ್ತರು

ದೈಹಿಕ ಅಂತರ ಕಾಪಾಡದ ಭಕ್ತರು ರಥೋತ್ಸವದ ಹಿನ್ನೆಲೆಯಲ್ಲಿ ಶರೀಫಗಿರಿಗೆ ಆಗಮಿಸುವ ಸಾವಿರಾರು ಭಕ್ತರು ಶಿಶುವಿನಹಾಳ ಶರೀಫರು ಮತ್ತು ಗುರುಗೋವಿಂದ ಭಟ್ಟರ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ಸಕ್ಕರೆ ಊದಿಸಿ ಭಕ್ತಿಗೆ ಪಾತ್ರರಾಗುತ್ತಾರೆ. ಹಾವೇರಿ, ಧಾರವಾಡ, ಗದಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಸಮರ್ಪಿಸಿದರು. ಭಕ್ತರು ಸರದಿ ಸಾಲಿನಲ್ಲಿ ನಿಂತು ಶರೀಫರ ಕರ್ತೃಗದ್ದುಗೆಗೆ ಪೂಜೆ ಸಲ್ಲಿಸಿ ಪುನೀತರಾದರು. ರಥೋತ್ಸವದ ವೇಳೆ ಭಕ್ತರು ಶರೀಫರು ಮತ್ತು ಗುರುಗೋವಿಂದ ಭಟ್ಟರ ತತ್ವಪದಗಳನ್ನು ಮೆಲುಕು ಹಾಕಿದರು. ರಥೋತ್ಸವಕ್ಕೆ ಡೊಳ್ಳು ಕುಣಿತದ ಸದ್ದು ಮತ್ತಷ್ಟು ಸಾಥ್ ನೀಡಿತು. ಆದರೆ ರಥೋತ್ಸವಕ್ಕೆ ಬಂದಿದ್ದ ಸಾವಿರಾರು ಸಂಖ್ಯೆಯ ಭಕ್ತರ ಪೈಕಿ ಬೆರಳೆಣಿಕೆಯಷ್ಟು ಜನರು ಮಾತ್ರ ಮಾಸ್ಕ್ ಧರಿಸಿದರೆ, ಬಹುತೇಕರು ಮಾಸ್ಕ್ ಧರಿಸದೆ ಕೊರೊನಾ ಬಗ್ಗೆ ಮೈಮರೆತಿದ್ದರು. ದೈಹಿಕ ಅಂತರವಂತೂ ಸಂಪೂರ್ಣ ಮಾಯವಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಥೋತ್ಸವವನ್ನು ಸಂಭ್ರಮವಾಗಿ ಆಚರಿಸಿದರು.

ಆನೆಯಿಂದ ಆಶೀರ್ವಾದ ಪಡೆಯುತ್ತಿರುವ ಭಕ್ತರು

ಇದನ್ನೂ ಓದಿ

‘ಚಂದ್ರಲೋಕಕ್ಕೆ ಪ್ರವಾಸ.. ಮನೆಗೊಂದು ಸಣ್ಣ ಹೆಲಿಕಾಪ್ಟರ್​’ -ತಮಿಳುನಾಡಿನ ಅಭ್ಯರ್ಥಿಯ ಚುನಾವಣಾ ಪ್ರಣಾಳಿಕೆಗಳಿವು ; ಇದರಲ್ಲಿದೆ ಒಂದು ​ಟ್ವಿಸ್ಟ್

ಫಲಾನುಭವಿಗಳ ನಿಖರ ಪತ್ತೆಗೆ ಹೊಸ ಉಪಾಯ; ಧಾರವಾಡದಲ್ಲಿ ಹೊಸ ದಾರಿ ಕಂಡುಕೊಂಡ ಗ್ರಾಮ ಲೆಕ್ಕಾಧಿಕಾರಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್