AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

Karnataka AG Shashikiran Shetty: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕಗೊಂಡಿದ್ದಾರೆ.

ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ
ಕರ್ನಾಟಕದ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ
Rakesh Nayak Manchi
Rakesh Nayak Manchi|

Updated on:May 20, 2023 | 10:22 PM

Share

ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ (Karnataka Advocate General) ಆಗಿ ಹೈಕೋರ್ಟ್ (Karnataka High Court) ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ (Shashikiran Shetty) ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರನೂ ಆಗಿರುವ ಶಶಿಕಿರಣ್ ಶೆಟ್ಟಿ ಅವರು ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮುಕ್ತಾಯದ ನಂತರ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿದ್ದ ಎಜಿ ಸ್ಥಾನಕ್ಕೆ ಇದೀಗ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಎಜಿ‌ ನೇಮಕ ಸಂಬಂಧ ಸಂಪುಟ ಸಭೆಯು ಇಂದು ಮುಖ್ಯಮಂತ್ರಿ ಅವರಿಗೆ ಅಧಿಕಾರ ನೀಡಿತ್ತು. ಈ ಬಗ್ಗೆ ಮಾತನಾಡಿದ ಶಶಿಕಿರಣ್, ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಡಿಜಿ ಐಜಿಪಿ ಆಗಿ ಅಲೋಕ್ ಮೋಹನ್ ನೇಮಕ

ನ್ಯಾಯಾಲಯದ ಕಾರ್ಯನಿರ್ವಹಣೆಯನ್ನು ಉತ್ತಮಗೊಳಿಸುವುದು, ಇದಕ್ಕಾಗಿ ಮೂಲಸೌಕರ್ಯಗಳನ್ನು ಸುಧಾರಿಸುವುದು ನಮ್ಮ ಆದ್ಯತೆಯಾಗಿದೆ. ಇದರ ಜೊತೆಗೆ ಕ್ಷುಲ್ಲಕ ಪ್ರಕರಣಗಳು, ಬಾಕಿ ಉಳಿದಿರುವ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸುವುದು, ಕಾನೂನು ಇಲಾಖೆಯನ್ನು ಬಲಪಡಿಸುವುದು ಕೂಡ ನಮ್ಮ ಆದ್ಯತೆಯಾಗಿದೆ ಎಂದು ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ.

ಇದಕ್ಕೂ ಮುನ್ನ ರಾಜ್ಯ ಸರ್ಕಾರವು ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿದೆ. ಈ ಹಿಂದೆ ಡಿಜಿ ಐಜಿಪಿ ಆಗಿದ್ದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 pm, Sat, 20 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ