AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಯುವರಾಜನಿಗೆ ರಾಜರು ಮಹಾರಾಜರ ಕೊಡುಗೆಗಳು ನೆನಪಿಲ್ಲ: ರಾಹುಲ್ ವಿರುದ್ಧ ಮೋದಿ ವಾಗ್ದಾಳಿ

ಕಾಂಗ್ರೆಸ್​ನ ಯುವರಾಜ ರಾಜರು, ಮಹಾರಾಜರನ್ನು ಅವಮಾನಿಸುವ ಮೂಲಕ ರಾಣಿಚೆನ್ನಮ್ಮ, ಛತ್ರಪತಿ ಶಿವಾಜಿಯವರನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್​ ಯುವರಾಜನಿಗೆ ರಾಜರು ಮಹಾರಾಜರ ಕೊಡುಗೆಗಳು ನೆನಪಿಲ್ಲ: ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
ಮೋದಿ
ನಯನಾ ರಾಜೀವ್
|

Updated on: Apr 28, 2024 | 1:56 PM

Share

ಕಾಂಗ್ರೆಸ್(Congress) ಯುವರಾಜನಿಗೆ ನಮ್ಮ ರಾಜರು, ಮಹಾರಾಜರ ಕೊಡುಗೆ ನೆನಪಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಬೆಳಗಾವಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಯುವರಾಜರು ಭಾರತದ ರಾಜ-ಮಹಾರಾಜರು ದಬ್ಬಾಳಿಕೆ ನಡೆಸುತ್ತಿದ್ದರು, ಬಡವರ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಯುವರಾಜ ಛತ್ರಪತಿ ಶಿವಾಜಿ ಮಹಾರಾಜ್, ರಾಣಿ ಚಿನ್ನಮ್ಮ ಅವರನ್ನು ಅವಮಾನಿಸಿದ್ದಾರೆ. ಕಾಂಗ್ರೆಸ್ ಯುವರಾಜನ ಹೇಳಿಕೆ ವೋಟ್ ಬ್ಯಾಂಕ್ ರಾಜಕೀಯ ಮಾಡಲು ಮತ್ತು ಓಲೈಕೆಗಾಗಿ ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಾಗಿದೆ.

ಪಿಎಫ್‌ಐ ಅನ್ನು ಸಮರ್ಥಿಸಿಕೊಳ್ಳುವಲ್ಲಿ ಕಾಂಗ್ರೆಸ್ ನಿರತವಾಗಿದೆ ಕಾಂಗ್ರೆಸ್​ಗೆ ನೇಹಾ ಅವರಂತಹ ಹೆಣ್ಣುಮಕ್ಕಳ ಜೀವಕ್ಕೆ ಯಾವುದೇ ಬೆಲೆ ಇಲ್ಲ, ಅವರಿಗೆ ತಮ್ಮ ವೋಟ್ ಬ್ಯಾಂಕ್ ಬಗ್ಗೆ ಮಾತ್ರ ಚಿಂತೆ. ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಾಗ ಅದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇಷ್ಟೇ ಅಲ್ಲ, ಕಾಂಗ್ರೆಸ್ ಪಿಎಫ್‌ಐ ಅನ್ನು ಮತಕ್ಕಾಗಿ ಬಳಸಿಕೊಂಡಿದೆ ಎಂದರು.

ಮತ್ತಷ್ಟು ಓದಿ: ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ, ವಿಡಿಯೋ ನೋಡಿ

ಇದು ಭಯೋತ್ಪಾದನೆಗೆ ಆಶ್ರಯ ನೀಡುವ ದೇಶವಿರೋಧಿ ಸಂಘಟನೆಯಾಗಿದ್ದು, ಇದನ್ನು ಮೋದಿ ಸರ್ಕಾರ ನಿಷೇಧಿಸಿದೆ. ವಯನಾಡಿನಲ್ಲಿ ಒಂದು ಸ್ಥಾನವನ್ನು ಗೆಲ್ಲುವುದಕ್ಕಾಗಿಯೇ ಇಂತಹ ಪಿಎಫ್‌ಐ ಭಯೋತ್ಪಾದಕ ಸಂಘಟನೆಯನ್ನು ಸಮರ್ಥಿಸುವಲ್ಲಿ ಕಾಂಗ್ರೆಸ್ ನಿರತವಾಗಿದೆ.

ಕಳೆದ 10 ವರ್ಷಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಸರ್ಕಾರ ದೇಶದ ನಾಗರಿಕರ ನೆಮ್ಮದಿಗಾಗಿ ಸಾಕಷ್ಟು ಕೆಲಸ ಮಾಡಿದೆ, ಇದಕ್ಕೆ ದೊಡ್ಡ ಉದಾಹರಣೆ ಭಾರತೀಯ ನ್ಯಾಯ ಸಂಹಿತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!