AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಯುವರಾಜನಿಗೆ ರಾಜರು ಮಹಾರಾಜರ ಕೊಡುಗೆಗಳು ನೆನಪಿಲ್ಲ: ರಾಹುಲ್ ವಿರುದ್ಧ ಮೋದಿ ವಾಗ್ದಾಳಿ

ಕಾಂಗ್ರೆಸ್​ನ ಯುವರಾಜ ರಾಜರು, ಮಹಾರಾಜರನ್ನು ಅವಮಾನಿಸುವ ಮೂಲಕ ರಾಣಿಚೆನ್ನಮ್ಮ, ಛತ್ರಪತಿ ಶಿವಾಜಿಯವರನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್​ ಯುವರಾಜನಿಗೆ ರಾಜರು ಮಹಾರಾಜರ ಕೊಡುಗೆಗಳು ನೆನಪಿಲ್ಲ: ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
ಮೋದಿ
ನಯನಾ ರಾಜೀವ್
|

Updated on: Apr 28, 2024 | 1:56 PM

Share

ಕಾಂಗ್ರೆಸ್(Congress) ಯುವರಾಜನಿಗೆ ನಮ್ಮ ರಾಜರು, ಮಹಾರಾಜರ ಕೊಡುಗೆ ನೆನಪಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Rahul Gandhi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಬೆಳಗಾವಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಯುವರಾಜರು ಭಾರತದ ರಾಜ-ಮಹಾರಾಜರು ದಬ್ಬಾಳಿಕೆ ನಡೆಸುತ್ತಿದ್ದರು, ಬಡವರ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ಕಾಂಗ್ರೆಸ್ ಯುವರಾಜ ಛತ್ರಪತಿ ಶಿವಾಜಿ ಮಹಾರಾಜ್, ರಾಣಿ ಚಿನ್ನಮ್ಮ ಅವರನ್ನು ಅವಮಾನಿಸಿದ್ದಾರೆ. ಕಾಂಗ್ರೆಸ್ ಯುವರಾಜನ ಹೇಳಿಕೆ ವೋಟ್ ಬ್ಯಾಂಕ್ ರಾಜಕೀಯ ಮಾಡಲು ಮತ್ತು ಓಲೈಕೆಗಾಗಿ ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಾಗಿದೆ.

ಪಿಎಫ್‌ಐ ಅನ್ನು ಸಮರ್ಥಿಸಿಕೊಳ್ಳುವಲ್ಲಿ ಕಾಂಗ್ರೆಸ್ ನಿರತವಾಗಿದೆ ಕಾಂಗ್ರೆಸ್​ಗೆ ನೇಹಾ ಅವರಂತಹ ಹೆಣ್ಣುಮಕ್ಕಳ ಜೀವಕ್ಕೆ ಯಾವುದೇ ಬೆಲೆ ಇಲ್ಲ, ಅವರಿಗೆ ತಮ್ಮ ವೋಟ್ ಬ್ಯಾಂಕ್ ಬಗ್ಗೆ ಮಾತ್ರ ಚಿಂತೆ. ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಾಗ ಅದನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇಷ್ಟೇ ಅಲ್ಲ, ಕಾಂಗ್ರೆಸ್ ಪಿಎಫ್‌ಐ ಅನ್ನು ಮತಕ್ಕಾಗಿ ಬಳಸಿಕೊಂಡಿದೆ ಎಂದರು.

ಮತ್ತಷ್ಟು ಓದಿ: ಬೆಳಗಾವಿಯ ಬಿಜೆಪಿ ಸಮಾವೇಶದಲ್ಲಿ ಗಿಫ್ಟ್ ನೋಡಿ ಭಾವುಕರಾದ ಮೋದಿ, ವಿಡಿಯೋ ನೋಡಿ

ಇದು ಭಯೋತ್ಪಾದನೆಗೆ ಆಶ್ರಯ ನೀಡುವ ದೇಶವಿರೋಧಿ ಸಂಘಟನೆಯಾಗಿದ್ದು, ಇದನ್ನು ಮೋದಿ ಸರ್ಕಾರ ನಿಷೇಧಿಸಿದೆ. ವಯನಾಡಿನಲ್ಲಿ ಒಂದು ಸ್ಥಾನವನ್ನು ಗೆಲ್ಲುವುದಕ್ಕಾಗಿಯೇ ಇಂತಹ ಪಿಎಫ್‌ಐ ಭಯೋತ್ಪಾದಕ ಸಂಘಟನೆಯನ್ನು ಸಮರ್ಥಿಸುವಲ್ಲಿ ಕಾಂಗ್ರೆಸ್ ನಿರತವಾಗಿದೆ.

ಕಳೆದ 10 ವರ್ಷಗಳಲ್ಲಿ ಬಿಜೆಪಿ ಮತ್ತು ಎನ್‌ಡಿಎ ಸರ್ಕಾರ ದೇಶದ ನಾಗರಿಕರ ನೆಮ್ಮದಿಗಾಗಿ ಸಾಕಷ್ಟು ಕೆಲಸ ಮಾಡಿದೆ, ಇದಕ್ಕೆ ದೊಡ್ಡ ಉದಾಹರಣೆ ಭಾರತೀಯ ನ್ಯಾಯ ಸಂಹಿತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ