AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?

ನವೆಂಬರ್ 13ಕ್ಕೆ ಮೂರು ಅಖಾಡದಲ್ಲೂ ಮತದಾನ ನಡೆಯಲಿದ್ದು, ಯಾವ ಕ್ಷೇತ್ರದಿಂದ ಯಾರು ಕಣಕ್ಕಿಳಿತಾರೆ ಅನ್ನೋದು ನಿಗೂಢವಾಗಿದೆ. ಈ ಮಧ್ಯೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಯಾವ ಪಕ್ಷದಿಂದ ಯಾರು ಎಂಬ ಮಾಹಿತಿ ಇಲ್ಲಿದೆ.

ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?
ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?
TV9 Web
| Edited By: |

Updated on:Oct 18, 2024 | 8:57 PM

Share

ಹಾವೇರಿ, ಅಕ್ಟೋಬರ್​ 18: ನವೆಂಬರ್ 13ಕ್ಕೆ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಗೆಲ್ಲೋ ಸೇನಾನಿಗಳನ್ನ ಕಣಕ್ಕಿಳಿಸುವುದಕ್ಕೆ ತೆರೆಮರೆಯಲ್ಲೇ ನಾನಾ ತಂತ್ರಗಾರಿಕೆ ನಡೆಯುತ್ತಿದೆ. ಅದರಲ್ಲೂ ಈ ಬಾರಿ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಈ ಮಧ್ಯೆ ಶಿಗ್ಗಾಂವಿ (Shiggaon) ಉಪಚುನಾವಣೆಗೆ ಮೊದಲ ದಿನವೇ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ ಮಾಡಲಾಗಿದೆ.

ಯಾರೆಲ್ಲಾ ನಾಮಪತ್ರ ಸಲ್ಲಿಕೆ

ಹೌದು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಹಿಂದೂಸ್ಥಾನ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ್ ತಳವಾರ ಎರಡು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: Sandur Bypoll: ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ: ಶ್ರೀರಾಮುಲು ಸ್ಪಷ್ಟನೆ

ಸೋಷಿಯಲಿಸ್ಟ್ ಪಾರ್ಟಿ ಅಭ್ಯರ್ಥಿಯಾಗಿ ಖಾಜಾಮೋಹಿದ್ದೀನ್ ಗುಡಗೇರಿ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ರವಿ ಕೃಷ್ಣಾರೆಡ್ಡಿಯಿಂದ ಚುನಾವಣಾಧಿಕಾರಿ ಮೊಹಮ್ಮದ್ ಖಿಜರ್​ಗೆ ನಾಮಪತ್ರ ಸಲ್ಲಿಕೆ ಮಾಡಲಾಗಿದೆ.

ಶಿಗ್ಗಾಂವಿ ಬೈಎಲೆಕ್ಷನ್​ ಟಿಕೆಟ್​ಗೆ ಬಿಜೆಪಿಯಲ್ಲಿ ಪೈಪೋಟಿ

ಇನ್ನು ಶಿಗ್ಗಾಂವಿ ಬೈಎಲೆಕ್ಷನ್​ ಟಿಕೆಟ್​ಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದೆ. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡಿಸುವುದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಮುರುಗೇಶ್ ನಿರಾಣಿ ಮತ್ತು ಶ್ರೀಕಾಂತ್ ದುಂಡಿಗೌಡರ ಹೆಸರು ಕೂಡ ಕೇಳಿಬರುತ್ತಿವೆ.

ಭರತ್ ಬೊಮ್ಮಾಯಿ ಅಭ್ಯರ್ಥಿ ಆಗಬೇಕೆಂದು ಒತ್ತಾಯ: ಸಂಸದ ಗೋವಿಂದ ಕಾರಜೋಳ

ಶಿಗ್ಗಾಂವಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬೆಂಗಳೂರಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಾತನಾಡಿದ್ದು, ಭರತ್ ಬೊಮ್ಮಾಯಿ ಅಭ್ಯರ್ಥಿ ಆಗಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಕಾರ್ಯಕರ್ತರು ಭರತ್ ಬೊಮ್ಮಾಯಿ ಹೆಸರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ, ಸಂಡೂರು- ಶಿಗ್ಗಾಂವಿ ಬೈ ಎಲೆಕ್ಷನ್: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ!

ಸಮೀಕ್ಷೆಯಲ್ಲೂ ಭರತ್ ಗೆಲ್ಲುವ ಬಗ್ಗೆ ವರದಿಗಳು ಬಂದಿದೆ. ಹಾಗಾಗಿ ಭರತ್ ಅಭ್ಯರ್ಥಿ ಮಾಡಲಿ ಅಂತ ಆಗ್ರಹಿಸುತ್ತೇವೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿರುತ್ತೇವೆ. ಮುರುಗೇಶ್ ನಿರಾಣಿ ಸ್ಪರ್ಧಿಸುವುದಿಲ್ಲವೆಂದು ನಿನ್ನೆ ಹೇಳಿದ್ದಾರೆ ಎಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:53 pm, Fri, 18 October 24

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ