ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?

ನವೆಂಬರ್ 13ಕ್ಕೆ ಮೂರು ಅಖಾಡದಲ್ಲೂ ಮತದಾನ ನಡೆಯಲಿದ್ದು, ಯಾವ ಕ್ಷೇತ್ರದಿಂದ ಯಾರು ಕಣಕ್ಕಿಳಿತಾರೆ ಅನ್ನೋದು ನಿಗೂಢವಾಗಿದೆ. ಈ ಮಧ್ಯೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಯಾವ ಪಕ್ಷದಿಂದ ಯಾರು ಎಂಬ ಮಾಹಿತಿ ಇಲ್ಲಿದೆ.

ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?
ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 18, 2024 | 8:57 PM

ಹಾವೇರಿ, ಅಕ್ಟೋಬರ್​ 18: ನವೆಂಬರ್ 13ಕ್ಕೆ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಗೆಲ್ಲೋ ಸೇನಾನಿಗಳನ್ನ ಕಣಕ್ಕಿಳಿಸುವುದಕ್ಕೆ ತೆರೆಮರೆಯಲ್ಲೇ ನಾನಾ ತಂತ್ರಗಾರಿಕೆ ನಡೆಯುತ್ತಿದೆ. ಅದರಲ್ಲೂ ಈ ಬಾರಿ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಈ ಮಧ್ಯೆ ಶಿಗ್ಗಾಂವಿ (Shiggaon) ಉಪಚುನಾವಣೆಗೆ ಮೊದಲ ದಿನವೇ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ ಮಾಡಲಾಗಿದೆ.

ಯಾರೆಲ್ಲಾ ನಾಮಪತ್ರ ಸಲ್ಲಿಕೆ

ಹೌದು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಹಿಂದೂಸ್ಥಾನ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ್ ತಳವಾರ ಎರಡು ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: Sandur Bypoll: ಸಂಡೂರು ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ, ಅಭ್ಯರ್ಥಿಯೂ ಅಲ್ಲ: ಶ್ರೀರಾಮುಲು ಸ್ಪಷ್ಟನೆ

ಸೋಷಿಯಲಿಸ್ಟ್ ಪಾರ್ಟಿ ಅಭ್ಯರ್ಥಿಯಾಗಿ ಖಾಜಾಮೋಹಿದ್ದೀನ್ ಗುಡಗೇರಿ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ರವಿ ಕೃಷ್ಣಾರೆಡ್ಡಿಯಿಂದ ಚುನಾವಣಾಧಿಕಾರಿ ಮೊಹಮ್ಮದ್ ಖಿಜರ್​ಗೆ ನಾಮಪತ್ರ ಸಲ್ಲಿಕೆ ಮಾಡಲಾಗಿದೆ.

ಶಿಗ್ಗಾಂವಿ ಬೈಎಲೆಕ್ಷನ್​ ಟಿಕೆಟ್​ಗೆ ಬಿಜೆಪಿಯಲ್ಲಿ ಪೈಪೋಟಿ

ಇನ್ನು ಶಿಗ್ಗಾಂವಿ ಬೈಎಲೆಕ್ಷನ್​ ಟಿಕೆಟ್​ಗೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ನಡೆದಿದೆ. ತಮ್ಮ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡಿಸುವುದಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಮುರುಗೇಶ್ ನಿರಾಣಿ ಮತ್ತು ಶ್ರೀಕಾಂತ್ ದುಂಡಿಗೌಡರ ಹೆಸರು ಕೂಡ ಕೇಳಿಬರುತ್ತಿವೆ.

ಭರತ್ ಬೊಮ್ಮಾಯಿ ಅಭ್ಯರ್ಥಿ ಆಗಬೇಕೆಂದು ಒತ್ತಾಯ: ಸಂಸದ ಗೋವಿಂದ ಕಾರಜೋಳ

ಶಿಗ್ಗಾಂವಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬೆಂಗಳೂರಲ್ಲಿ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಾತನಾಡಿದ್ದು, ಭರತ್ ಬೊಮ್ಮಾಯಿ ಅಭ್ಯರ್ಥಿ ಆಗಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಕಾರ್ಯಕರ್ತರು ಭರತ್ ಬೊಮ್ಮಾಯಿ ಹೆಸರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ, ಸಂಡೂರು- ಶಿಗ್ಗಾಂವಿ ಬೈ ಎಲೆಕ್ಷನ್: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ!

ಸಮೀಕ್ಷೆಯಲ್ಲೂ ಭರತ್ ಗೆಲ್ಲುವ ಬಗ್ಗೆ ವರದಿಗಳು ಬಂದಿದೆ. ಹಾಗಾಗಿ ಭರತ್ ಅಭ್ಯರ್ಥಿ ಮಾಡಲಿ ಅಂತ ಆಗ್ರಹಿಸುತ್ತೇವೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧವಾಗಿರುತ್ತೇವೆ. ಮುರುಗೇಶ್ ನಿರಾಣಿ ಸ್ಪರ್ಧಿಸುವುದಿಲ್ಲವೆಂದು ನಿನ್ನೆ ಹೇಳಿದ್ದಾರೆ ಎಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:53 pm, Fri, 18 October 24

ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ