AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ

ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅವರು 16.17 ಕೋಟಿ ರೂಪಾಯಿಗಳಷ್ಟು ಆಸ್ತಿ ಹೊಂದಿದ್ದಾರೆ ಎಂದು ಘೋಷಿಸಿದ್ದಾರೆ. ಈ ಆಸ್ತಿಯಲ್ಲಿ ಚರ ಮತ್ತು ಸ್ಥಿರಾಸ್ತಿ, ಬ್ಯಾಂಕ್ ಠೇವಣಿ, ಹೂಡಿಕೆಗಳು ಮತ್ತು ಚಿನ್ನಾಭರಣಗಳು ಸೇರಿವೆ.

ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ
ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 24, 2024 | 10:38 PM

Share

ಹಾವೇರಿ, ಅಕ್ಟೋಬರ್ 24: ಶಿಗ್ಗಾಂವಿ ಉಪಚುನಾವಣೆ (Siggoan By Election) ಹಿನ್ನೆಲೆಯಲ್ಲಿ ಬಿಜೆಪಿ (BJP) ಅಭ್ಯರ್ಥಿಯಾಗಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ (Bharath Bommai) ಅವರು ನಾಮಪತ್ರ ಸಲ್ಲಿಸಿದರು. ನಾಳೆ (ಅಕ್ಟೋಬರ್ 25) ಬೃಹತ್ ರೋಡ್​ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ ಇಂದು ಒಳ್ಳೆ ಮುಹೂರ್ತ ಇದ್ದ ಕಾರಣ ಸಾಂಕೇತಿಕವಾಗಿ ಕುಟುಂಬ ಸಮೇತರಾಗಿ ತಹಶಿಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾ ಅಧಿಕಾರಿ ಮಹಮ್ಮದ್ ಖಿಝರ್‌ಗೆ ನಾಮಪತ್ರವನ್ನ ಸಲ್ಲಿಸಿದರು. ಇನ್ನು ನಾಮಪತ್ರದಲ್ಲಿ ತಮ್ಮ ಒಟ್ಟು ಆಸ್ತಿಯನ್ನು ಉಲ್ಲೇಖಿಸಿದ್ದು, ಯುವ ಉದ್ಯಮಿಯಾಗಿರುವ ಭರತ್ ಬೊಮ್ಮಾಯಿ 16.17 ಕೋಟಿ ರೂಪಾಯಿ ಆಸ್ತಿ ಒಡೆಯರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಆಸ್ತಿ ವಿವರ

  • ಭರತ್​ ಬೊಮ್ಮಾಯಿ ಒಟ್ಟು ಆಸ್ತಿ ಮೌಲ್ಯ 16.17 ಕೋಟಿ ರೂ. ಹೊಂದಿದ್ದು,  3.79 ಕೋಟಿ ರೂ. ಚರಾಸ್ತಿ ಮತ್ತು 5.50 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ.
  • ವಿವಿಧ ಬ್ಯಾಂಕ್​ಗಳಲ್ಲಿ 2.03 ಲಕ್ಷ ರೂ. ಮತ್ತು ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ರೂ. ನಿಶ್ಚಿತ ಠೇವಣಿ ಇಟ್ಟಿದ್ದಾರೆ.
  • ಉಳಿತಾಯ ಖಾತೆಗಳಲ್ಲಿ 1.19 ಕೋಟಿ ರೂ. ಹೊಂದಿದ್ದಾರೆ.
  • ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ ರೂ ಮತ್ತು ಖಾಸಗಿ ಕಂಪನಿಗಳಲ್ಲಿ 50,000 ರೂ. ಬಂಡವಾಳ ಹೂಡಿಕೆ

ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ: ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮಣೆ

  • ಪಾಲುದಾರಿಕೆಯಲ್ಲಿ 1.23 ಕೋಟಿ ರೂಪಾಯಿ ಬಂಡವಾಳ
  • ಗೋಲ್ಡ್‌ ಚಿಟ್‌ ಫಂಡ್‌ನಲ್ಲಿ 70 ಸಾವಿರ ರೂ ಮತ್ತು ಮ್ಯೂಚುವಲ್‌ ಫಂಡ್‌ನಲ್ಲಿ 10.20 ಲಕ್ಷ ರೂ ಹೂಡಿಕೆ ಮಾಡಿದ್ದಾರೆ.
  • 81.61 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ.
  • ಬೆಂಗಳೂರಿನ ಆರ್​.ಟಿ.ನಗರದಲ್ಲಿ ಒಂದು ವಾಸದ ಮನೆ, ಸೆಂಚುರಿ ಎಥೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್​, ಭರತ್​ ಬೊಮ್ಮಾಯಿ ಪತ್ನಿ ಇಬ್ಬನಿ ಬಳಿ 1.43 ಲಕ್ಷ ರೂ. ಹಣವಿದೆ. ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿಯಲ್ಲಿ 1 ಸೈಟ್‌, ಕೆಂಗೇರಿಯಲ್ಲಿ ಕೆಹೆಚ್​ಡಿ ಸೈಟ್ ಹೊಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!