AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ- ಬಂಡಾಯ ಅಭ್ಯರ್ಥಿಯ ಆಸ್ತಿ ವಿವರ: ಇಬ್ಬರಲ್ಲಿ ಯಾರು ಸಿರಿವಂತರು?

ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರು 3.04 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರು 1.15 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಘೋಷಿಸಿದ್ದಾರೆ. ಹಾಗಿದ್ದರೆ ಇಬ್ಬರು ಅಭ್ಯರ್ಥಿಗಳ ಪೈಕಿ ಯಾರು ಸಿರಿವಂತರು?

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ- ಬಂಡಾಯ ಅಭ್ಯರ್ಥಿಯ ಆಸ್ತಿ ವಿವರ: ಇಬ್ಬರಲ್ಲಿ ಯಾರು ಸಿರಿವಂತರು?
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ- ಬಂಡಾಯ ಅಭ್ಯರ್ಥಿಯ ಆಸ್ತಿ ವಿವರ: ಇಬ್ಬರಲ್ಲಿ ಯಾರು ಸಿರಿವಂತರು?
ಗಂಗಾಧರ​ ಬ. ಸಾಬೋಜಿ
|

Updated on: Oct 25, 2024 | 8:35 PM

Share

ಹಾವೇರಿ, ಅಕ್ಟೋಬರ್​ 25: ಶಿಗ್ಗಾಂವಿ ಬೈ ಎಲೆಕ್ಷನ್​ಗೆ ಕಾಂಗ್ರೆಸ್ (congress) ಟಿಕೆಟ್​ ಅನ್ನು ಹೈಕಮಾಂಡ್​ ಸ್ವಲ್ಪ ಅಳೆದು ತೂಗಿ ಯಾಸೀರ್‌ ಖಾನ್‌ ಪಠಾಣ್​ ನೀಡಲಾಗಿದೆ. ಆ ಮೂಲಕ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇಂದು ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರವನ್ನು ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಯಾಸೀರ್‌ ಖಾನ್‌ ಪಠಾಣ್ ಆಸ್ತಿ ವಿವರ

  • ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್​ 3.04 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ತಮ್ಮ ಬಳಿ 85 ಸಾವಿರ ರೂ. ನಗದು ಹೊಂದಿದ್ದಾರೆ.
  • 6.02 ಲಕ್ಷ ರೂ. ಮೌಲ್ಯದ ಚರಾಸ್ತಿ ಮತ್ತು 42.35 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ.
  • ಯಾಸಿರ್​ ಪಠಾಣ್​ ಪತ್ನಿ ಚರಾಸ್ತಿ ಮೌಲ್ಯ 38.86 ಲಕ್ಷ ರೂ. ಸ್ಥಿರಾಸ್ತಿ ಮೌಲ್ಯ 2.17 ಕೋಟಿ ರೂ.
  • 60 ಗ್ರಾಂ ಚಿನ್ನಾಭರಣವನ್ನು ಯಾಸೀರ್‌ ಪಠಾಣ್ ಹೊಂದಿದ್ದು, 35.60 ಲಕ್ಷ ರೂ. ಮೌಲ್ಯದ 500 ಗ್ರಾಂ ಚಿನ್ನಾಭರಣ ಹೊಂದಿದ್ದಾರೆ.
  • ಯಾಸಿರ್​ ಖಾನ್​ ಪಠಾಣ್​ ಪತ್ನಿ ಬಳಿ 3 ಲಕ್ಷ ರೂ. ನಗದು ಇದೆ.
  • ಹಾನಗಲ್​ ತಾಲೂಕಿನ ಬಾದಾಮಗಟ್ಟಿ ಬೊಮ್ಮನಹಳ್ಳಿ, ನೆಲ್ಲಿಕೊಪ್ಪ, ಶಿಗ್ಗಾಂವಿ ತಾಲೂಕು ಹುಲಗೂರಲ್ಲಿ 14.35 ಲಕ್ಷ ರೂ. ಮೌಲ್ಯದ ಕೃಷಿ ಭೂಮಿ ಇದೆ. ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ  10,098 ಚ.ಅಡಿ ವಿಸ್ತೀರ್ಣದ ಕೃಷಿಯೇತರ ಜಮೀನು ಇದೆ.
  • ಪತ್ನಿಯ ಹೆಸರಲ್ಲಿ 24 ಲಕ್ಷ ರೂ. ಮೌಲ್ಯದ ಕೃಷಿ ಜಮೀನು, 1.93 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ.

ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಕೋಟಿ ಒಡೆಯ

ಇನ್ನು ಕಾಂಗ್ರೆಸ್‌ ಟಿಕೆಟ್‌ ಸಿಗದ್ದರಿಂದ ಬಂಡಾಯವಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ತಮ್ಮ ಆಸ್ತಿ ವಿವರವನ್ನು ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದು, 1.15 ಕೋಟಿ ಮೌಲ್ಯದ ರೂ. ಆಸ್ತಿ ಹೊಂದಿದ್ದಾರೆ.

ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರ ಕೈಯಲ್ಲಿ 50 ಸಾವಿರ ರೂ. ನಗದು ಹಣವಿದ್ದು, 30 ಲಕ್ಷ ರೂ. ಮೌಲ್ಯದ ಟೊಯೊಟಾ ಕಾರು ಸೇರಿ 30.50 ಲಕ್ಷ ರೂ. ಮೌಲ್ಯದ ಚರಾಸ್ತಿಯಿದೆ. ಬೆಂಗಳೂರಿನಲ್ಲಿ ಬಿಡಿಎ ನಿವೇಶನ ಸೇರಿದಂತೆ 84 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಬಳಿ 10 ಸಾವಿರ ರೂ. ನಗದು, 1.20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದೆ.

ಇದನ್ನೂ ಓದಿ: ಚನ್ನಪಟ್ಟಣ NDA ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಕೋಟ್ಯಾಧಿಪತಿ: ಪುತ್ರ ಲಕ್ಷಾಧಿಪತಿ..!

ಕ್ಯಾಲಕೊಂಡ ಗ್ರಾಮದಲ್ಲಿ 25 ಲಕ್ಷ ಮೌಲ್ಯದ 17 ಎಕರೆ ಕೃಷಿ ಭೂಮಿ. ಹುಲಗೂರು ಗ್ರಾಮದಲ್ಲಿ ಮನೆ, ಹುಬ್ಬಳ್ಳಿಯಲ್ಲಿ ಪ್ಲಾಟ್‌, 16 ಲಕ್ಷ ರೂ. ಸಾಲವನ್ನು ಹೊಂದಿದ್ದು, ಹುಲಗೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಒಂದು ಅಪರಾಧಿ ಪ್ರಕರಣ ದಾಖಲಾಗಿದ್ದು, ಸದ್ಯ ಜನಪ್ರತಿನಿಧಿಗಳ ನ್ಯಾಯಾಲಯದಿಂದ ತಡೆಯಾಜ್ಞೆ ನೀಡಲಾಗಿದೆ. ಹುಲಗೂರಿನಲ್ಲಿ ಹಾಕಿದ್ದ ಭಗವಾಧ್ವಜ ತೆರವುಗೊಳಿಸುವ ಕುರಿತು ಮೊಬೈಲ್‌ನಲ್ಲಿ ಸಂಭಾಷಣೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಇವರ ಮೇಲೆ ಕೇಸ್‌ ದಾಖಲಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!