AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ 3 ಕ್ಷೇತ್ರಗಳ ಬೈ ಎಲೆಕ್ಷನ್ ಬಹಿರಂಗ ಪ್ರಚಾರ ಅಂತ್ಯ: ಮದ್ಯ ಮಾರಾಟ ಬಂದ್

ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ನವೆಂಬರ್ 13 ರ ಮತದಾನ ಇರುವುದರಿಂದ ಎರಡು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಕರ್ನಾಟಕದ 3 ಕ್ಷೇತ್ರಗಳ ಬೈ ಎಲೆಕ್ಷನ್ ಬಹಿರಂಗ ಪ್ರಚಾರ ಅಂತ್ಯ: ಮದ್ಯ ಮಾರಾಟ ಬಂದ್
ಕರ್ನಾಟಕದ 3 ಕ್ಷೇತ್ರಗಳ ಬೈ ಎಲೆಕ್ಷನ್ ಬಹಿರಂಗ ಪ್ರಚಾರ ಅಂತ್ಯ: ಮದ್ಯ ಮಾರಾಟ ಬಂದ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 11, 2024 | 7:20 PM

Share

ಬೆಂಗಳೂರು, ನವೆಂಬರ್​ 11: 15 ದಿನದಿಂದ ಸುದ್ದು ಮಾಡುತ್ತಿದ್ದ ಮೈಕ್​ಗಳು ಇದೀಗ ಬಂದ್ ಆಗಿವೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಅಂತಾ ತಿರುಗಾಡ್ತಿದ್ದ ನಾಯಕರೆಲ್ಲರೂ ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕಿದೆ. ಏಕೆಂದರೆ ಬೈಎಲೆಕ್ಷನ್‌ (Bypolls) ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲೂ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಜೊತೆಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್‌ ಮಾಡಲಾಗಿದೆ.

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣವಾಗಿ ಪರಿಣಮಿಸಿದೆ. ಕೆಲ ದಿನಗಳಿಂದ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಮೂಲಕ ಅಬ್ಬರಿಸಿದ್ದರು. ಆದರೆ ಇಂದು ಅದಕ್ಕೆಲ್ಲ ತೆರೆಬಿದ್ದಿದೆ. ಅಂದರೆ 3 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದೆ.

ಇದನ್ನೂ ಓದಿ: ಡಿಸೆಂಬರ್​​ನಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ಸ್ಫೋಟಕ ಸುಳಿವು ನೀಡಿದ ಜಾರಕಿಹೊಳಿ  

ಕ್ಷೇತ್ರದ ಮತದಾರರಲ್ಲದವರು ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕು. ನಾಳೆಯಿಂದ ಎರಡು ದಿನ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಲು ಮಾತ್ರ ಅವಕಾಶವಿರುತ್ತದೆ. ಇನ್ನು ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ.

ಎರಡು ದಿನ ಮದ್ಯ ಮಾರಾಟ ನಿಷೇಧ

ನವೆಂಬರ್‌ 13 ರಂದು ಮತದಾನ ನಡೆಯೋದ್ರಿಂದ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್‌ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನವೆಂಬರ್‌ 14 ರ ಬೆಳಗ್ಗೆ 6 ಗಂಟೆವರೆಗೂ ಮದ್ಯಮಾರಾಟ ಮಾಡುವಂತಿಲ್ಲ. ಹೀಗಾಗಿ ಇಂದು ಬಾಗಿಲು ಕ್ಲೋಸ್ ಆಗುತ್ತದೆ ಅನ್ನೋದು ಗೊತ್ತಾಗ್ತಿದ್ದಂತೆ ಖರೀದಿಗೆ ಮದ್ಯ ಪ್ರಿಯಕರು ಮುಗಿಬಿದ್ದಿದ್ದರು.

ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪ: ಬಿಜೆಪಿಯಿಂದ ಕಾನೂನು ಹೋರಾಟ

ಬಹಿರಂಗ ಪ್ರಚಾರಕ್ಕೆ ತೆರೆಗೂ ಮುಂಚೆ ಕೊನೆ ಕ್ಷಣದ ಕಸರತ್ತು ನಡೆಸಿದ್ದ ನಾಯಕರು ಅಖಾಡದಲ್ಲಿ ಆರ್ಭಟಿಸಿದ್ದಾರೆ. ಅದರಲ್ಲೂ ಚನ್ನಪಟ್ಟಣ ಅಖಾಡದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧವೇ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Mon, 11 November 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!