AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕಾರಿಪುರ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ ನಿಧನ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ ಇಂದು ಬೆಳಗಿನಜಾವ ಲಿಂಗೈಕ್ಯರಾಗಿದ್ದಾರೆ.

ಶಿಕಾರಿಪುರ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ ನಿಧನ
ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಸ್ವಾಮೀಜಿ
shruti hegde
|

Updated on: Mar 16, 2021 | 12:06 PM

Share

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ಧ ಮಹಾಸ್ವಾಮಿಗಳು ಇಂದು ಮಂಗಳವಾರ ಬೆಳಗಿನಜಾವ ಲಿಂಗೈಕ್ಯರಾಗಿದ್ದಾರೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದು, ಅಂತಿಮ ದರ್ಶನಕ್ಕಾಗಿ ಶಿಕಾರಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.

ಸ್ವಾಮೀಜಿ, ಸಮಾಜಮುಖಿ ಚಿಂತನೆಗಳಿಂದ ಮಾರ್ಗದರ್ಶಕರಾಗಿದ್ದರು. ಇಂದು ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನದ ಬಳಿಕ ಮುಖ್ಯಂತ್ರಿ ಬಿ.ಎಸ್​.ಯಡಿಯೂರಪ್ಪ ಶಿಕಾರಿಪುರಕ್ಕೆ ತೆರಳಿ ಸ್ವಾಮೀಜಿ ಅಂತಿಮ ದರ್ಶನ ಪಡೆದು ನಾಳೆ ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ. ಶ್ರೀ ರೇವಣಸಿದ್ಧ ಮಹಾಸ್ವಾಮಿಗಳು ಮೂಲತಃ ಬಿಜಾಪುರ ಜಿಲ್ಲೆಯ ಬಾಗೇನವಾಡಿಯವರಾಗಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ಸನ್ಯಾಸ ಸ್ವೀಕರಿಸಿದ್ದರು. ತಮ್ಮ ಸಮಾಜ ಸೇವೆಯ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಎಲ್ಲಾ ಧರ್ಮದವರೊಂದಿಗೆ ಒಳ್ಳೆಯ ಭಾಂದವ್ಯ ಹೊಂದಿದ್ದರು. ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದರು.

ಇದನ್ನೂ ಓದಿ: ಸ್ವಾಮಿ ಹರ್ಷಾನಂದರ ಸ್ಮರಣೆ | ಮಗುವಿನಂತೆ ಕರೆಯುತ್ತಿದ್ದ ಮಹಾನ್​ ವ್ಯಕ್ತಿ, ಸಕಲರನ್ನೂ ಗೌರವಿಸುತ್ತಿದ್ದ ಸ್ವಾಮೀಜಿ

ಇದನ್ನೂ ಓದಿ: ಕೊರೊನಾ ಸೋಂಕಿಗೆ ಸ್ವಾಮೀಜಿ ಬಲಿ, ಶಾಕ್‌ನಲ್ಲಿ ಭಕ್ತ ಗಣ

Follow Us
shruti hegde
shruti hegde
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ